AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣ; ಮಾತೃ ಆಸ್ಪತ್ರೆಗೆ ನೋಟಿಸ್

ಪ್ರಾಥಮಿಕ ತನಿಖೆ ವೇಳೆ ಅಸ್ಪತ್ರೆಗೆ ಬಂದ ರೆಮಿಡಿಸಿವಿರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರೊದು ಬೆಳಕಿಗೆ ಬಂದಿತ್ತು. ಆರೋಪಿಗಳು ಒಟ್ಟು ಹದಿನೈದು ನಕಲಿ ರೆಮಿಡಿಸಿವಿರ್ ತಯಾರಿಸಿದ್ದರು. ಹದಿನೈದರ ಪೈಕಿ ಹನ್ನೆರಡು ರೆಮಿಡಿಸಿವಿರ್ ಪೊಲೀಸರಿಂದ ವಶಕ್ಕೆ ಪಡೆಯಲಾಗಿದೆ.

ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣ; ಮಾತೃ ಆಸ್ಪತ್ರೆಗೆ ನೋಟಿಸ್
ರೆಮ್​ಡಿಸಿವಿರ್ (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on: May 17, 2021 | 1:16 PM

Share

ಬೆಂಗಳೂರು: ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಸಂಜಯ್ ನಗರ ಪೊಲೀಸರು ಮಾತೃ ಆಸ್ಪತ್ರೆಗೆ ನೋಟಿಸ್ ನೀಡಿದ್ದಾರೆ. ಮಾತೃ ಆಸ್ಪತ್ರೆ ವೈದ್ಯ ಸಾಗರ್ ಮತ್ತು ತಂಡವನ್ನು ಬಂಧಿಸಲಾಗಿದೆ.

ಇದುವರೆಗೆ ಆಸ್ಪತ್ರೆಗೆ ಎಷ್ಟು ರೆಮ್ಡಿಸಿವಿರ್ ಬಂದಿದೆ. ಆ ಪೈಕಿ ಎಷ್ಟು ರೆಮ್ಡಿಸಿವಿರ್ ರೋಗಿಗಳಿಗೆ ನೀಡಲಾಗಿದೆ. ಹೊರಗಿನಿಂದ ಎಷ್ಟು ರೆಮ್ಡಿಸಿವಿರ್ ತಂದು ನೀಡಿದ್ದಾರೆ. ರೋಗಿಯ ಕಡೆಯವರು ಎಷ್ಟು ನೀಡಿದ್ದಾರೆ ಎಂಬ ಸಂಪೂರ್ಣ ದಾಖಲಾತಿ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಪ್ರಾಥಮಿಕ ತನಿಖೆ ವೇಳೆ ಅಸ್ಪತ್ರೆಗೆ ಬಂದ ರೆಮಿಡಿಸಿವಿರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರೊದು ಬೆಳಕಿಗೆ ಬಂದಿತ್ತು. ಆರೋಪಿಗಳು ಒಟ್ಟು ಹದಿನೈದು ನಕಲಿ ರೆಮಿಡಿಸಿವಿರ್ ತಯಾರಿಸಿದ್ದರು. ಹದಿನೈದರ ಪೈಕಿ ಹನ್ನೆರಡು ರೆಮಿಡಿಸಿವಿರ್ ಪೊಲೀಸರಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಮೂರು ನಕಲಿ ರೆಮಿಡಿಸಿವಿರ್ ಮಾರಾಟ ಮಾಡಿದ್ದಾರೆ. ನಕಲಿ ರೆಮಿಡಿಸಿವಿರ್ ಪಡೆದಿರುವವರ ಸಂಪರ್ಕಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನು ಆರೋಪಿಗಳು ವಿಜಯನಗರದ ನಿವಾಸಿಯೊಬ್ಬರಿಗೆ ರೆಮಿಡಿಸಿವಿರ್ ಮಾರಾಟ ಮಾಡಿದ್ದರು. ಆದರೆ ಈಗ ವಿಜಯನಗರದ ನಿವಾಸಿ ಮೊಬೈಲ್ ಆಫ್ ಮಾಡಿಕೊಂಡಿದ್ದಾರೆ. ಸದ್ಯ ಸಂಜಯ್ ನಗರ ಪೊಲೀಸರು ಇನ್ನು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಾಲು ಮುರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಕೀಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಕೊರೋನಾ ತಗುಲಿ ವಿಧಿವಶ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?