AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣ; ಮಾತೃ ಆಸ್ಪತ್ರೆಗೆ ನೋಟಿಸ್

ಪ್ರಾಥಮಿಕ ತನಿಖೆ ವೇಳೆ ಅಸ್ಪತ್ರೆಗೆ ಬಂದ ರೆಮಿಡಿಸಿವಿರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರೊದು ಬೆಳಕಿಗೆ ಬಂದಿತ್ತು. ಆರೋಪಿಗಳು ಒಟ್ಟು ಹದಿನೈದು ನಕಲಿ ರೆಮಿಡಿಸಿವಿರ್ ತಯಾರಿಸಿದ್ದರು. ಹದಿನೈದರ ಪೈಕಿ ಹನ್ನೆರಡು ರೆಮಿಡಿಸಿವಿರ್ ಪೊಲೀಸರಿಂದ ವಶಕ್ಕೆ ಪಡೆಯಲಾಗಿದೆ.

ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣ; ಮಾತೃ ಆಸ್ಪತ್ರೆಗೆ ನೋಟಿಸ್
ರೆಮ್​ಡಿಸಿವಿರ್ (ಸಂಗ್ರಹ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: May 17, 2021 | 1:16 PM

Share

ಬೆಂಗಳೂರು: ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಸಂಜಯ್ ನಗರ ಪೊಲೀಸರು ಮಾತೃ ಆಸ್ಪತ್ರೆಗೆ ನೋಟಿಸ್ ನೀಡಿದ್ದಾರೆ. ಮಾತೃ ಆಸ್ಪತ್ರೆ ವೈದ್ಯ ಸಾಗರ್ ಮತ್ತು ತಂಡವನ್ನು ಬಂಧಿಸಲಾಗಿದೆ.

ಇದುವರೆಗೆ ಆಸ್ಪತ್ರೆಗೆ ಎಷ್ಟು ರೆಮ್ಡಿಸಿವಿರ್ ಬಂದಿದೆ. ಆ ಪೈಕಿ ಎಷ್ಟು ರೆಮ್ಡಿಸಿವಿರ್ ರೋಗಿಗಳಿಗೆ ನೀಡಲಾಗಿದೆ. ಹೊರಗಿನಿಂದ ಎಷ್ಟು ರೆಮ್ಡಿಸಿವಿರ್ ತಂದು ನೀಡಿದ್ದಾರೆ. ರೋಗಿಯ ಕಡೆಯವರು ಎಷ್ಟು ನೀಡಿದ್ದಾರೆ ಎಂಬ ಸಂಪೂರ್ಣ ದಾಖಲಾತಿ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಪ್ರಾಥಮಿಕ ತನಿಖೆ ವೇಳೆ ಅಸ್ಪತ್ರೆಗೆ ಬಂದ ರೆಮಿಡಿಸಿವಿರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರೊದು ಬೆಳಕಿಗೆ ಬಂದಿತ್ತು. ಆರೋಪಿಗಳು ಒಟ್ಟು ಹದಿನೈದು ನಕಲಿ ರೆಮಿಡಿಸಿವಿರ್ ತಯಾರಿಸಿದ್ದರು. ಹದಿನೈದರ ಪೈಕಿ ಹನ್ನೆರಡು ರೆಮಿಡಿಸಿವಿರ್ ಪೊಲೀಸರಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಮೂರು ನಕಲಿ ರೆಮಿಡಿಸಿವಿರ್ ಮಾರಾಟ ಮಾಡಿದ್ದಾರೆ. ನಕಲಿ ರೆಮಿಡಿಸಿವಿರ್ ಪಡೆದಿರುವವರ ಸಂಪರ್ಕಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನು ಆರೋಪಿಗಳು ವಿಜಯನಗರದ ನಿವಾಸಿಯೊಬ್ಬರಿಗೆ ರೆಮಿಡಿಸಿವಿರ್ ಮಾರಾಟ ಮಾಡಿದ್ದರು. ಆದರೆ ಈಗ ವಿಜಯನಗರದ ನಿವಾಸಿ ಮೊಬೈಲ್ ಆಫ್ ಮಾಡಿಕೊಂಡಿದ್ದಾರೆ. ಸದ್ಯ ಸಂಜಯ್ ನಗರ ಪೊಲೀಸರು ಇನ್ನು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಾಲು ಮುರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಕೀಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಕೊರೋನಾ ತಗುಲಿ ವಿಧಿವಶ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ