AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ವ ವಿಭಾಗ ಪೊಲೀಸರಿಂದ ಕಾರ್ಯಾಚರಣೆ; 10ಕ್ಕೂ ಹೆಚ್ಚು ಮನೆ ಮಾಲೀಕರಿಗೆ ನೋಟಿಸ್

ಡ್ರಗ್ಸ್ ಕೇಸ್‌ನಲ್ಲಿ ರಾಮಮೂರ್ತಿನಗರದ ಮನೆ ಸೀಜ್ ಮಾಡಲಾಗಿದೆ. ಹಾಗೂ ಗೋವಿಂದಪುರ ಪೊಲೀಸರಿಂದ ಮಾಲೀಕನಿಗೆ ನೋಟಿಸ್ ನೀಡಲಾಗಿದೆ. ವೀಸಾ ಅವಧಿ ಮುಗಿದಿದ್ದರೂ ಹೆಚ್ಚಿನ ಬಾಡಿಗೆ ನೀಡಿ ವಿದೇಶಿ ಡ್ರಗ್ಸ್ ಪೆಡ್ಲರ್ಸ್ ಬಾಡಿಗೆ ಮನೆಯಲ್ಲಿ ವಾಸವಿದ್ದರು....

ಪೂರ್ವ ವಿಭಾಗ ಪೊಲೀಸರಿಂದ ಕಾರ್ಯಾಚರಣೆ; 10ಕ್ಕೂ ಹೆಚ್ಚು ಮನೆ ಮಾಲೀಕರಿಗೆ ನೋಟಿಸ್
ಪೂರ್ವ ವಿಭಾಗ ಪೊಲೀಸರಿಂದ ಕಾರ್ಯಾಚರಣೆ; 10ಕ್ಕೂ ಹೆಚ್ಚು ಮನೆ ಮಾಲೀಕರಿಗೆ ನೋಟಿಸ್
TV9 Web
| Edited By: ಆಯೇಷಾ ಬಾನು|

Updated on:Jul 09, 2021 | 10:04 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರಿನ ಪೂರ್ವ ವಿಭಾಗ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು ವಿದೇಶಿ ಬಾಡಿಗೆದಾರರ ಬಗ್ಗೆ ಸೂಕ್ತ ದಾಖಲೆ ಪೊಲೀಸರಿಗೆ ನೀಡದ ಮನೆ ಮಾಲೀಕರಿಗಾಗಿ ತಲಾಶ್ ನಡೆಸಿದ್ದಾರೆ.

ಡ್ರಗ್ಸ್ ಕೇಸ್‌ನಲ್ಲಿ ರಾಮಮೂರ್ತಿನಗರದ ಮನೆ ಸೀಜ್ ಮಾಡಲಾಗಿದೆ. ಹಾಗೂ ಗೋವಿಂದಪುರ ಪೊಲೀಸರಿಂದ ಮಾಲೀಕನಿಗೆ ನೋಟಿಸ್ ನೀಡಲಾಗಿದೆ. ವೀಸಾ ಅವಧಿ ಮುಗಿದಿದ್ದರೂ ಹೆಚ್ಚಿನ ಬಾಡಿಗೆ ನೀಡಿ ವಿದೇಶಿ ಡ್ರಗ್ಸ್ ಪೆಡ್ಲರ್ಸ್ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಹೀಗಾಗಿ ರಾಮಮೂರ್ತಿನಗರದಲ್ಲಿ ಆರೋಪಿಗಳು ವಾಸವಿದ್ದ ಮನೆಯನ್ನು ಸೀಜ್ ಮಾಡಿ ಮಾಲೀಕನಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಇನ್ನು ಇದೇ ರೀತಿ ಆರೋಪಿಗಳು ವಾಸವಿದ್ದ ಬಾಡಿಗೆ ಮನೆ ಸೀಜ್ ಮಾಡಿ ವಿದೇಶಿಗರಿಗೆ ಮನೆ ಬಾಡಿಗೆಗೆ ನೀಡಿರುವ ಹಲವರಿಗೆ ನೋಟಿಸ್ ನೀಡಿದ್ದಾರೆ. 10ಕ್ಕೂ ಹೆಚ್ಚು ಮನೆ ಮಾಲೀಕರಿಗೆ ಪೊಲೀಸರು ನೋಟಿಸ್ ನೀಡಿದ್ದು ಇದೇ ಮೊದಲ ಬಾರಿಗೆ ಅಕ್ರಮ ವಿದೇಶಿಗರಿಗೆ ನೆಲೆಕೊಟ್ಟ ಮನೆ ಮಾಲೀಕರು ಶಾಕ್ ಆಗಿದ್ದಾರೆ.

ಹೆಣ್ಣೂರು, ರಾಮಮೂರ್ತಿನಗರ ಹಾಗೂ ಗೊವಿಂದಪುರ ಸೇರಿದಂತೆ ಹಲವು ಕಡೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ರೂಲ್ಸ್ಗೆ ಡೋಂಟ್ ಕೇರ್ ಅಂದ ಮನೆ ಮಾಲೀಕರಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಬರುವಂತೆ ಹೇಳಿದ್ದಾರೆ. ಸೂಕ್ತ ದಾಖಲೆ ನೀಡುವಂತೆ ಸೂಚಿಸಿದ್ದಾರೆ. ವಿದೇಶಿಗರಿಗೆ ಬಾಡಿಗೆ ನೀಡಿದ್ದರೆ ಕಡ್ಡಾಯವಾಗಿ ನಿಯಮ ಪಾಲಿಸಬೇಕು. ಸಬ್ ರಿಜಿಸ್ಟ್ರಾರ್ ಆಫಿಸ್ನ ಫಾರಂ “ಸಿ”ನಲ್ಲಿ ದಾಖಲೆ ಉಲ್ಲೇಖಿಸಬೇಕು. ಯಾರಿಂದ ಯಾರಿಗೆ ಮನೆ ಬಾಡಿಗೆ ನೀಡಲಾಗಿದೆ ಎಂಬ ಬಗ್ಗೆ ಉಲ್ಲೇಖಿಸಬೇಕು. ಜೊತೆಗೆ ಸಿ ಫಾರಂ ಮಾಹಿತಿ ಸ್ಥಳೀಯ ಪೊಲೀಸರಿಗೂ ನೀಡಬೇಕು. ವಿದೇಶಿಗರ ಸೂಕ್ತ ದಾಖಲೆಗಳನ್ನು ಸಹ ಮಾಹಿತಿ ಪಡೆಯಬೇಕು. ಇಲ್ಲವಾದಲ್ಲಿ ಮನೆ ಮಾಲೀಕರಿಗೆ ಕಂಠಕ ಕಟ್ಟಿಟ್ಟ ಬುತ್ತಿ.

ಕಳ್ಳ ಅರೆಸ್ಟ್ ಇನ್ನು ದೇವರ ಹುಂಡಿಯಲ್ಲಿ ಹಣ ಕದಿಯುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಆರ್ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಕೆಜಿಎಫ್ ಮೂಲದ ರವಿಕುಮಾರ್(26) ಬಂಧಿತ ವ್ಯಕ್ತಿ. ಯಶವಂತಪುರ ಬಳಿಯ ನಾಗಮ್ಮ ದೇವಿ ಹಾಗೂ ಅಂಗಾಳ ಪರಮೇಶ್ವರಿ ದೇವಾಲಯದ ಹುಂಡಿಯನ್ನು ಹೊಡೆದು ಕಳ್ಳತನ ಮಾಡಲು ಮುಂದಾಗಿದ್ದಾನೆ. ಆದ್ರೆ ಹುಂಡಿಯಲ್ಲಿ ಹಣ ಇಲ್ಲದ್ದಕ್ಕೆ ದೇವರ ವಿಗ್ರಹದಲ್ಲಿನ ತಾಳಿ ಕದ್ದು ಪರಾರಿಯಾಗಿದ್ದ ಸದ್ಯ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ದೇವರ 2 ತಾಳಿ ಸೇರಿ ₹1.5 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮಚ್ಚು, ಲಾಂಗ್ ಆಯ್ತು ಈಗ ಪುಂಡರ ಕೈಯಲ್ಲಿ ಪಿಸ್ತೂಲ್; ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಬೆದರಿಕೆ

Published On - 10:01 am, Fri, 9 July 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ