ಕೋಲಾರ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 12 ದಿನಕ್ಕೆ ಬಂದಿದೆ. ಕೊರೊನಾ ಹೆಚ್ಚಳದ ಸಮಸ್ಯೆ ಎದುರಿಸುತ್ತಿರುವ ಸರ್ಕಾರವು ಸಾರಿಗೆ ನೌಕರರ ಮುಷ್ಕರಕ್ಕೆ ಕ್ಯಾರೇ ಅನ್ನುತ್ತಿಲ್ಲ. ಈ ನಡುವೆ ಪ್ರತಿಭಟನಾ ನಿರತ ಸಾರಿಗೆ ನೌಕರರ ಮೇಲೆ ಲಾಠಿ ಚಾರ್ಜ್ ನಡೆದಿದೆ. ಸಾರಿಗೆ ನೌಕರರನ್ನ ಅಟ್ಟಾಡಿಸಿ ಪೊಲೀಸರು ಹೊಡೆದಿರುವ ಘಟನೆ ನಡೆದಿದೆ.
ಕೋಲಾರದ ಸಂಗೊಂಡಹಳ್ಳಿ ಬಳಿ ಸಾರಿಗೆ ನೌಕರರು ಜೈಲ್ ಭರೋ ಚಳವಳಿ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ಸಾರಿಗೆ ನೌಕರರನ್ನು ವಶಕ್ಕೆ ಪಡೆದು ಕೋಲಾರ ಗ್ರಾಮಾಂತರ ಠಾಣೆಗೆ ಕರೆದುಕೊಂಡು ಬಂದಿದ್ದರು. ಹೀಗಾಗಿ ಪೊಲೀಸರ ಕ್ರಮ ಖಂಡಿಸಿ ಠಾಣೆಗೆ ಮುತ್ತಿಗೆ ಹಾಕಲು ನೌಕರರು ಪ್ರಯತ್ನಿಸಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಠಾಣೆ ಎದುರು ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ನೌಕರರನ್ನ ಅಟ್ಟಾಡಿಸಿ ಹೊಡೆದಿದ್ದಾರೆ.
ಸಾರಿಗೆ ನೌಕರರ ಮೇಲೆ ಪೊಲೀಸರಿಂದ ಲಾಠಿಚಾರ್ಜ್
ಸಾರಿಗೆ ನೌಕರರ ಮೇಲೆ ಪೊಲೀಸರಿಂದ ಲಾಠಿಚಾರ್ಜ್
ಸಾರಿಗೆ ನೌಕರರ ಮೇಲೆ ಪೊಲೀಸರಿಂದ ಲಾಠಿಚಾರ್ಜ್
ಸಾರಿಗೆ ನೌಕರರ ಮೇಲೆ ಪೊಲೀಸರಿಂದ ಲಾಠಿಚಾರ್ಜ್
ಇದನ್ನೂ ಓದಿ: ರಸ್ತೆಯಲ್ಲಿ ಹೋಗುವ ಕುಡುಕನ ಮಾತಿನಂತಿದೆ ಸಿದ್ದರಾಮಯ್ಯನವರ ಮಾತು; ಕೆ.ಎಸ್.ಈಶ್ವರಪ್ಪ ವಾಗ್ದಾಳಿ