AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರಿಗೆ ಲಾಠಿ ಏಟು; ಪೊಲೀಸರ ವಿರುದ್ದ ಆಕ್ರೋಶ ಹೊರಹಾಕಿದ ರೈತರು: ಬಳ್ಳಾರಿಯಲ್ಲಿ ನಡೆದಿದ್ದೇನು?

Police Lathicharge on Chilli Farmers: ಬಳ್ಳಾರಿ ನಗರದ ತೋಟಗಾರಿಕೆ ಇಲಾಖೆಯಲ್ಲಿ ಘಟನೆ ನಡೆದಿದ್ದು, ಬೆಳಗ್ಗೆಯಿಂದ ನೂರಾರು ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದರು. ಸರತಿ ಸಾಲಿನಲ್ಲಿ ನಿಂತಿರುವ ವೇಳೆ ರೈತರ ನೂಕುನುಗ್ಗಲು ಹೆಚ್ಚಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಚಾರ್ಜ್ ನಡೆದಿದೆ.

ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರಿಗೆ ಲಾಠಿ ಏಟು; ಪೊಲೀಸರ ವಿರುದ್ದ ಆಕ್ರೋಶ  ಹೊರಹಾಕಿದ ರೈತರು: ಬಳ್ಳಾರಿಯಲ್ಲಿ ನಡೆದಿದ್ದೇನು?
ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರಿಗೆ ಲಾಠಿ ಏಟು; ಪೊಲೀಸರ ವಿರುದ್ದ ಆಕ್ರೋಶ ಹೊರಹಾಕಿದ ರೈತರು: ಬಳ್ಳಾರಿಯಲ್ಲಿ ನಡೆದಿದ್ದೇನು?
TV9 Web
| Edited By: |

Updated on:Jun 14, 2021 | 4:27 PM

Share

ಬಳ್ಳಾರಿ: ಮಕ್ಕಳು ಮರಿ ಅನ್ನದೆ, ಹೆಂಗಸರು ಗಂಡಸರು ಅನ್ನದೇ ಸರ್ಕಾರ ಕೊಡುವ ಬಿತ್ತನೆಯ ಬೀಜಕ್ಕೆ ಬೆಳಗ್ಗೆಯಿಂದ ಕಾದುಕುಳಿತಿದ್ದ ನೂರಾರು ರೈತಾಪಿ ವರ್ಗದ ಜನರ ಮೇಲೆ ಪೊಲೀಸರು ಲಘು ಲಾಠಿಚಾರ್ಜ್​ ಮಾಡಿದ್ದಾರೆ. ಮೆಣಸಿನಕಾಯಿ ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರಿಗೆ ಲಾಠಿ ಏಟು ನೀಡಿದ್ದಾರೆ. ಲಾಠಿ ಏಟು ತಿಂದ ರೈತರು ಪೊಲೀಸರ ವಿರುದ್ದ ತಮ್ಮ ಆಕ್ರೋಶ, ಅಸಮಾಧಾನ ಹೊರಹಾಕಿದ್ದಾರೆ.

ಬಳ್ಳಾರಿ ನಗರದ ತೋಟಗಾರಿಕೆ ಇಲಾಖೆಯಲ್ಲಿ ಘಟನೆ ನಡೆದಿದ್ದು, ಬೆಳಗ್ಗೆಯಿಂದ ನೂರಾರು ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದರು. ಸರತಿ ಸಾಲಿನಲ್ಲಿ ನಿಂತಿರುವ ವೇಳೆ ರೈತರ ನೂಕುನುಗ್ಗಲು ಹೆಚ್ಚಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಚಾರ್ಜ್ ನಡೆದಿದೆ.

ತಹಸೀಲ್ದಾರ್ ಕಚೇರಿ ರೈತ ಸಂಪರ್ಕ ಕೇಂದ್ರ ಆವರಣದಲ್ಲಿ ಬೆಳಗ್ಗಯಿಂದಲೇ ಕಾದುಕುಳಿತಿದ್ದ ನೂರಾರು ರೈತರು

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತಲೂ ಅಧಿಕ ಮಳೆ ಶುರು ಆಗಿರೋದರಿಂದಲೇ ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿತ್ತನೆ ಕಾರ್ಯ ಚುರುಕಾಗಿದೆ‌. ನಾನಾ ತಳಿಯ ಬಿತ್ತನೆ ಬೀಜ ಖರೀದಿಗಾಗಿ ಉಭಯ ಜಿಲ್ಲೆಗಳ (Bellary Vijayanagara Chilli Farmers) ರೈತ ಸಂಪರ್ಕ ಕೇಂದ್ರಗಳ ಎದುರು ರೈತರು ಬೆಳಗ್ಗೆಯಿಂದಲೇ ಜಮಾಯಿಸಿದ್ದರು. ಮೆಣಸಿನಕಾಯಿ ಬಿತ್ತನೆಯ ಬೀಜ (Chilli seeds) ಖರೀದಿಸಲು ಹೆಂಗಸರು, ಮಕ್ಕಳು ಅನ್ನದೇ ರೈತಾಪಿ ಜನ ಮುಗಿಬಿದ್ದಿದ್ದಾರೆ.

ಇಂದು ಅರ್ಧ ಅನ್​ಲಾಕ್ ಜಾರಿಗೊಂಡಿದ್ದರಿಂದ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರೈತ ಸಂಪರ್ಕ ಕೇಂದ್ರಗಳು ಆರಂಭವಾದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದ (Raitha Samparka Kendra) ಎದುರು ಬೆಳ್ಳಂಬೆಳಿಗ್ಗೆಯಿಂದಲೇ ನೂರಾರು ರೈತರು ಮೆಣಸಿನಕಾಯಿ ಬೀಜ ಖರೀದಿಗಾಗಿ ಕಿಕ್ಕಿರಿದು ಸೇರಿದರು.

ಇದನ್ನೂ ಓದಿ: ಮುಂಗಾರು ಜೋರು, ಅನ್​ಲಾಕ್ ಜಾರಿ, ಗರಿಗೆದರಿದ ರೈತ ಚಟುವಟಿಕೆ, ಬಿತ್ತನೆಬೀಜ ಖರೀದಿಗೆ ಕಿಕ್ಕಿರಿದು ಜಮಾಯ್ಸಿದ ರೈತರು!

(Police Lathicharge on Chilli Farmers at raitha samparka kendra in bellary)

Published On - 4:18 pm, Mon, 14 June 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?