AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರಿಗೆ ಲಾಠಿ ಏಟು; ಪೊಲೀಸರ ವಿರುದ್ದ ಆಕ್ರೋಶ ಹೊರಹಾಕಿದ ರೈತರು: ಬಳ್ಳಾರಿಯಲ್ಲಿ ನಡೆದಿದ್ದೇನು?

Police Lathicharge on Chilli Farmers: ಬಳ್ಳಾರಿ ನಗರದ ತೋಟಗಾರಿಕೆ ಇಲಾಖೆಯಲ್ಲಿ ಘಟನೆ ನಡೆದಿದ್ದು, ಬೆಳಗ್ಗೆಯಿಂದ ನೂರಾರು ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದರು. ಸರತಿ ಸಾಲಿನಲ್ಲಿ ನಿಂತಿರುವ ವೇಳೆ ರೈತರ ನೂಕುನುಗ್ಗಲು ಹೆಚ್ಚಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಚಾರ್ಜ್ ನಡೆದಿದೆ.

ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರಿಗೆ ಲಾಠಿ ಏಟು; ಪೊಲೀಸರ ವಿರುದ್ದ ಆಕ್ರೋಶ  ಹೊರಹಾಕಿದ ರೈತರು: ಬಳ್ಳಾರಿಯಲ್ಲಿ ನಡೆದಿದ್ದೇನು?
ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರಿಗೆ ಲಾಠಿ ಏಟು; ಪೊಲೀಸರ ವಿರುದ್ದ ಆಕ್ರೋಶ ಹೊರಹಾಕಿದ ರೈತರು: ಬಳ್ಳಾರಿಯಲ್ಲಿ ನಡೆದಿದ್ದೇನು?
TV9 Web
| Updated By: ಸಾಧು ಶ್ರೀನಾಥ್​|

Updated on:Jun 14, 2021 | 4:27 PM

Share

ಬಳ್ಳಾರಿ: ಮಕ್ಕಳು ಮರಿ ಅನ್ನದೆ, ಹೆಂಗಸರು ಗಂಡಸರು ಅನ್ನದೇ ಸರ್ಕಾರ ಕೊಡುವ ಬಿತ್ತನೆಯ ಬೀಜಕ್ಕೆ ಬೆಳಗ್ಗೆಯಿಂದ ಕಾದುಕುಳಿತಿದ್ದ ನೂರಾರು ರೈತಾಪಿ ವರ್ಗದ ಜನರ ಮೇಲೆ ಪೊಲೀಸರು ಲಘು ಲಾಠಿಚಾರ್ಜ್​ ಮಾಡಿದ್ದಾರೆ. ಮೆಣಸಿನಕಾಯಿ ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರಿಗೆ ಲಾಠಿ ಏಟು ನೀಡಿದ್ದಾರೆ. ಲಾಠಿ ಏಟು ತಿಂದ ರೈತರು ಪೊಲೀಸರ ವಿರುದ್ದ ತಮ್ಮ ಆಕ್ರೋಶ, ಅಸಮಾಧಾನ ಹೊರಹಾಕಿದ್ದಾರೆ.

ಬಳ್ಳಾರಿ ನಗರದ ತೋಟಗಾರಿಕೆ ಇಲಾಖೆಯಲ್ಲಿ ಘಟನೆ ನಡೆದಿದ್ದು, ಬೆಳಗ್ಗೆಯಿಂದ ನೂರಾರು ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದರು. ಸರತಿ ಸಾಲಿನಲ್ಲಿ ನಿಂತಿರುವ ವೇಳೆ ರೈತರ ನೂಕುನುಗ್ಗಲು ಹೆಚ್ಚಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಚಾರ್ಜ್ ನಡೆದಿದೆ.

ತಹಸೀಲ್ದಾರ್ ಕಚೇರಿ ರೈತ ಸಂಪರ್ಕ ಕೇಂದ್ರ ಆವರಣದಲ್ಲಿ ಬೆಳಗ್ಗಯಿಂದಲೇ ಕಾದುಕುಳಿತಿದ್ದ ನೂರಾರು ರೈತರು

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತಲೂ ಅಧಿಕ ಮಳೆ ಶುರು ಆಗಿರೋದರಿಂದಲೇ ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿತ್ತನೆ ಕಾರ್ಯ ಚುರುಕಾಗಿದೆ‌. ನಾನಾ ತಳಿಯ ಬಿತ್ತನೆ ಬೀಜ ಖರೀದಿಗಾಗಿ ಉಭಯ ಜಿಲ್ಲೆಗಳ (Bellary Vijayanagara Chilli Farmers) ರೈತ ಸಂಪರ್ಕ ಕೇಂದ್ರಗಳ ಎದುರು ರೈತರು ಬೆಳಗ್ಗೆಯಿಂದಲೇ ಜಮಾಯಿಸಿದ್ದರು. ಮೆಣಸಿನಕಾಯಿ ಬಿತ್ತನೆಯ ಬೀಜ (Chilli seeds) ಖರೀದಿಸಲು ಹೆಂಗಸರು, ಮಕ್ಕಳು ಅನ್ನದೇ ರೈತಾಪಿ ಜನ ಮುಗಿಬಿದ್ದಿದ್ದಾರೆ.

ಇಂದು ಅರ್ಧ ಅನ್​ಲಾಕ್ ಜಾರಿಗೊಂಡಿದ್ದರಿಂದ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರೈತ ಸಂಪರ್ಕ ಕೇಂದ್ರಗಳು ಆರಂಭವಾದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದ (Raitha Samparka Kendra) ಎದುರು ಬೆಳ್ಳಂಬೆಳಿಗ್ಗೆಯಿಂದಲೇ ನೂರಾರು ರೈತರು ಮೆಣಸಿನಕಾಯಿ ಬೀಜ ಖರೀದಿಗಾಗಿ ಕಿಕ್ಕಿರಿದು ಸೇರಿದರು.

ಇದನ್ನೂ ಓದಿ: ಮುಂಗಾರು ಜೋರು, ಅನ್​ಲಾಕ್ ಜಾರಿ, ಗರಿಗೆದರಿದ ರೈತ ಚಟುವಟಿಕೆ, ಬಿತ್ತನೆಬೀಜ ಖರೀದಿಗೆ ಕಿಕ್ಕಿರಿದು ಜಮಾಯ್ಸಿದ ರೈತರು!

(Police Lathicharge on Chilli Farmers at raitha samparka kendra in bellary)

Published On - 4:18 pm, Mon, 14 June 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ