AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಚ್ ಟವರ್ ದುಸ್ಥಿತಿ: ದುರಸ್ಥಿಗೆ ಖಾಕಿ ನಿರ್ಲಕ್ಷ್ಯ, 8 ಕೋಟಿ ವೇಸ್ಟ್ ವೇಸ್ಟ್

ಧಾರವಾಡ: ಹುಬ್ಬಳ್ಳಿ ಕರ್ನಾಟಕದ ವಾಣಿಜ್ಯ ನಗರಿ. ಆದ್ರೆ ಛೋಟಾ ಮುಂಬಯಿ ಅನ್ನೋ ಕುಖ್ಯಾತಿಯೂ ಹುಬ್ಬಳ್ಳಿ ಬಿಟ್ಟು ಹೋಗ್ತಿಲ್ಲ. ಯಾಕಂದ್ರೆ ಹುಬ್ಬಳ್ಳಿಯಲ್ಲಿ ಕ್ರಿಮಿನಲ್​ಗಳು ಹಾಗೂ ಪುಂಡರ ಹಾವಳಿ ಹೆಚ್ಚಾಗಿದೆ. ಹೀಗಾಗಿಯೇ ಪರಿಸ್ಥಿತಿ ನಿಯಂತ್ರಿಸಲು, ಕಾನೂನು ಮೀರುವವರನ್ನು ಕಟ್ಟಿಹಾಕಲು ಪೊಲೀಸ್ ಇಲಾಖೆ ನಗರದ ವಿವಿಧೆಡೆ ವಾಚ್ ಟವರ್ಸ್ ನಿರ್ಮಿಸಿತ್ತು. ಆದ್ರೆ ಮೊದ ಮೊದಲು ಅತ್ಯುತ್ಸಾಹದಿಂದ ಕಾರ್ಯಾಚರಿಸಿದ್ದ ವಾಚ್ ಟವರ್​ಗಳು ಈಗ ಸೈಲೆಂಟಾಗಿವೆ. ವಾಚ್ ಟವರ್ ದುರಸ್ಥಿಗೆ ಮುಂದಾಗದ ಪೊಲೀಸರು! 2015 ರಲ್ಲಿ ಕ್ರಿಮಿನಲ್ಸ್ ಮತ್ತು ಸಂಚಾರಿ ನಿಯಮ ಉಲ್ಲಂಘಿಸೋರ ಮೇಲೆ […]

ವಾಚ್ ಟವರ್ ದುಸ್ಥಿತಿ: ದುರಸ್ಥಿಗೆ ಖಾಕಿ ನಿರ್ಲಕ್ಷ್ಯ, 8 ಕೋಟಿ ವೇಸ್ಟ್ ವೇಸ್ಟ್
ಸಾಧು ಶ್ರೀನಾಥ್​
|

Updated on:Dec 23, 2019 | 12:28 PM

Share

ಧಾರವಾಡ: ಹುಬ್ಬಳ್ಳಿ ಕರ್ನಾಟಕದ ವಾಣಿಜ್ಯ ನಗರಿ. ಆದ್ರೆ ಛೋಟಾ ಮುಂಬಯಿ ಅನ್ನೋ ಕುಖ್ಯಾತಿಯೂ ಹುಬ್ಬಳ್ಳಿ ಬಿಟ್ಟು ಹೋಗ್ತಿಲ್ಲ. ಯಾಕಂದ್ರೆ ಹುಬ್ಬಳ್ಳಿಯಲ್ಲಿ ಕ್ರಿಮಿನಲ್​ಗಳು ಹಾಗೂ ಪುಂಡರ ಹಾವಳಿ ಹೆಚ್ಚಾಗಿದೆ. ಹೀಗಾಗಿಯೇ ಪರಿಸ್ಥಿತಿ ನಿಯಂತ್ರಿಸಲು, ಕಾನೂನು ಮೀರುವವರನ್ನು ಕಟ್ಟಿಹಾಕಲು ಪೊಲೀಸ್ ಇಲಾಖೆ ನಗರದ ವಿವಿಧೆಡೆ ವಾಚ್ ಟವರ್ಸ್ ನಿರ್ಮಿಸಿತ್ತು. ಆದ್ರೆ ಮೊದ ಮೊದಲು ಅತ್ಯುತ್ಸಾಹದಿಂದ ಕಾರ್ಯಾಚರಿಸಿದ್ದ ವಾಚ್ ಟವರ್​ಗಳು ಈಗ ಸೈಲೆಂಟಾಗಿವೆ.

ವಾಚ್ ಟವರ್ ದುರಸ್ಥಿಗೆ ಮುಂದಾಗದ ಪೊಲೀಸರು! 2015 ರಲ್ಲಿ ಕ್ರಿಮಿನಲ್ಸ್ ಮತ್ತು ಸಂಚಾರಿ ನಿಯಮ ಉಲ್ಲಂಘಿಸೋರ ಮೇಲೆ ಕಣ್ಣಿಡಲು ಹುಬ್ಬಳ್ಳಿ-ಧಾರವಾಡ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, 22 ಪೊಲೀಸ್ ವಾಚ್ ಟವರ್ಸ್ ನಿರ್ಮಿಸಲಾಗಿತ್ತು. ಅವಳಿ ನಗರದಲ್ಲಿ 22 ಕಡೆಗಳಲ್ಲಿ ಕಣ್ಗಾವಲು ಗೋಪುರಗಳು ತಲೆಯೆತ್ತಿದ್ದವು. ಇದಕ್ಕೆ ಬರಬ್ಬೋರಿ 8 ಕೋಟಿಗೂ ಹೆಚ್ಚು ಹಣ ವೆಚ್ಚವಾಗಿತ್ತು.

ಆರಂಭದಲ್ಲಿ ವಾಚ್ ಟವರಗಳಿಂದ ಪೊಲೀಸ್ ಇಲಾಖೆಗೆ ಅನುಕೂಲವಾಗಿತ್ತು. ಆದ್ರೆ ವಾಚ್ ಟವರ್​ಗಳು ನಿರ್ವಹಣೆ ಇಲ್ಲದೆ ಹಾಳಾಗಿವೆ. ಕ್ಯಾಮರಾಗಳು ದುರಸ್ಥಿಗೆ ಬಂದಿವೆ. ಹೀಗಾಗಿ ಪುಂಡರ ಹಾವಳಿ ಹಾಗೂ ಸಂಚಾರ ನಿಯಮವನ್ನು ಬ್ರೇಕ್ ಮಾಡೋರ ಸಂಖ್ಯೆ ಹೆಚ್ಚಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರನ್ನು ಪ್ರಶ್ನಿಸಿದ್ರೆ. ಕೂಡಲೇ ವಾಚ್ ಟವರ್​ಗಳನ್ನ ದುರಸ್ಥಿ ಮಾಡೋದಾಗಿ ಭರವಸೆ ನೀಡುತ್ತಿದ್ದಾರೆ. ಆದಷ್ಟು ಬೇಗ ವಾಚ್ ಟವರ್​ಗಳು ಪುನಾರಂಭವಾಗುವ ನೀರಿಕ್ಷೆಯಿದೆ. ನಿಯಮ ಉಲ್ಲಂಘಿಸುವವರು, ಕ್ರಿಮಿನಲ್ಸ್ ಮೇಲೆ ಕಣ್ಣಿಡಲು ಬೇರೆ ವಿಧದ ಕ್ಯಾಮರಾ ಬಳಸಲಾಗುತ್ತಿದೆ. ಯಾವುದೇ ಸಮಸ್ಯೆ ಬಂದರೂ ಅದನ್ನು ಎದುರಿಸಲು ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಆರ್. ದಿಲೀಪ್ ತಿಳಿಸಿದ್ದಾರೆ.

ಒಟ್ನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ನೀಡಿದ್ದ ಅನುದಾನ ವ್ಯರ್ಥವಾಗುವ ಲಕ್ಷಣಗಳು ಸದ್ಯಕ್ಕೆ ಗೋಚರಿಸುತ್ತಿವೆ. ಹೀಗಾಗಿ ಕೂಡಲೇ ಸರ್ಕಾರ ಮಧ್ಯಪ್ರವೇಶ ಮಾಡಿ, ಹುಬ್ಬಳ್ಳಿಯ ವಾಚ್ ಟವರ್​ಗಳ ದುರಸ್ಥಿತಿಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

Published On - 7:20 am, Mon, 23 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ