AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು

ಆಸ್ಪತ್ರೆ ಒಳಗಿನ ಆವರಣದಲ್ಲಿ ಪೊಲೀಸರು ಹಾಗೂ ಶಶಿಕಲಾ ಪರ ವಕೀಲರ ನಡುವೆ ಮಾತುಕತೆ ನಡೆದಿದ್ದು, ಗೇಟ್ ನಿಂದ ಹೊರಗೆ ಹೋಗುವಂತೆ ಪೊಲೀಸರು ತಾಕೀತು ಮಾಡಿದ್ದಾರೆ.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು
ಶಶಿಕಲಾ
ರಶ್ಮಿ ಕಲ್ಲಕಟ್ಟ
| Edited By: |

Updated on: Jan 21, 2021 | 2:20 PM

Share

ಬೆಂಗಳೂರು: ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ.

ಆಸ್ಪತ್ರೆ ಒಳಗಿನ ಆವರಣದಲ್ಲಿ ಪೊಲೀಸರು ಹಾಗೂ ಶಶಿಕಲಾ ಪರ ವಕೀಲರ ನಡುವೆ ಮಾತುಕತೆ ನಡೆದಿದ್ದು, ಗೇಟ್ ನಿಂದ ಹೊರಗೆ ಹೋಗುವಂತೆ ಪೊಲೀಸರು ತಾಕೀತು ಮಾಡಿದ್ದಾರೆ. ನಾವು ಅನುಮತಿ ಪಡೆದು ಬಂದಿದ್ದೇವೆ. ಶಶಿಕಲಾ ಅವರನ್ನು ಭೇಟಿಯಾಗಲು ಅನುಮತಿ ಪಡೆದಿದ್ದೇವೆ ಎಂದು ಹೇಳಿದರೂ ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಬಿಡಲಿಲ್ಲ.

ಶಶಿಕಲಾ ಅವರಿಗೆ ಕೋವಿಡ್ ನೆಗೆಟಿವ್ ಎರಡು ದಿನಗಳ ಹಿಂದೆ ಅವರಿಗೆ ಜ್ವರ ಬಂದಿದ್ದು ಪರಪ್ಪನ ಅಗ್ರಹಾರ ಜೈಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದಾಗ ಉಸಿರಾಟದ ಸಮಸ್ಯೆ ಇತ್ತು, ಜ್ವರ ಇರಲಿಲ್ಲ. ಅವರ ಮೇಲೆ ನಿಗಾ ಇರಿಸುವುದಕ್ಕಾಗಿ ಗುರುವಾರ ಬೆಳಗ್ಗೆ ಐಸಿಯುಗೆ ದಾಖಲಿಸಲಾಗಿದೆ. ಅವರಿಗೆ ತೀವ್ರ ಉಸಿರಾಟದ ಸೋಂಕು (SARI) ಇದೆ. ಆದರೆ ಕೋವಿಡ್ ಇಲ್ಲ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬೌರಿಂಗ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಈ ಮಧ್ಯೆ ಸಿಟಿ ಸ್ಕ್ಯಾನ್​ಗಾಗಿ ಶಶಿಕಲಾ ಅವರನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.  ಸಿಟಿ ಸ್ಕ್ಯಾನ್ ಬಳಿಕ ಮತ್ತೆ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತರಲಾಗುತ್ತದೆ.

ಶಶಿಕಲಾಗೆ ಉಸಿರಾಟದ ಸಮಸ್ಯೆ; ಬೌರಿಂಗ್​ ಆಸ್ಪತ್ರೆಗೆ ದಾಖಲು

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ