AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಪೊಲೀಸರಿಂದ ಫೈರಿಂಗ್..

ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಶ್ರೀರಾಂಪುರ ಠಾಣಾ ವ್ಯಾಪ್ತಿಯ ಓಕಳಿಪುರಂ ಬಳಿ ಗುಂಡಿನ ದಾಳಿ ನಡೆದಿದೆ.

ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಪೊಲೀಸರಿಂದ ಫೈರಿಂಗ್..
ಗಾಯಗೊಂಡಿರುವ ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಗುಂಡ
ಆಯೇಷಾ ಬಾನು
|

Updated on:Jan 07, 2021 | 1:56 PM

Share

ಬೆಂಗಳೂರು: ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಪೊಲೀಸರ ಗನ್ ಸದ್ದು ಮಾಡಿದೆ. ರೌಡಿಶೀಟರ್ ಮೇಲೆ ನಂದಿನ ಲೇಔಟ್ ಠಾಣೆ ಪೊಲೀಸರಿಂದ ಫೈರಿಂಗ್ ನಡೆದಿದೆ. ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಶ್ರೀರಾಂಪುರ ಠಾಣಾ ವ್ಯಾಪ್ತಿಯ ಓಕಳಿಪುರಂ ಬಳಿ ಗುಂಡಿನ ದಾಳಿ ನಡೆದಿದೆ.

ಕಾರ್ತಿಕ್ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್. ಆತ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಿದ್ದವ. ರೌಡಿಶೀಟರ್ ಬಂಧಿಸಲು ಸಬ್ ಇನ್ಸ್‌ಪೆಕ್ಟರ್ ನಿತ್ಯಾನಂದ & ಟೀಂ ತೆರಳಿತ್ತು.

ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ರೌಡಿಶೀಟರ್ ಪ್ರಯತ್ನಿಸಿದ್ದ ಆತ್ಮರಕ್ಷಣೆಗಾಗಿ ಬಲಗಾಲಿಗೆ ಗುಂಡು ಹಾರಿಸಿ ಪೊಲೀಸರು ಕಾರ್ತಿಕ್​ನನ್ನ ಬಂಧಿಸಿದ್ದಾರೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಜೈಲಿಗೆ ಹೋಗಿ ಬಂದರೂ ಬಿಡಲಿಲ್ಲ ಹಳೆ ಚಾಳಿ ಕಳೆದ ಇಪ್ಪತ್ತು ದಿನಗಳ ಹಿಂದೆ ಜೈಲಿನಿಂದ ಹೊರ ಬಂದಿದ್ದ ಆರೋಪಿ ಕಾರ್ತಿಕ್ ಕಳೆದ ಜನವರಿ 3ರಂದು ರಾತ್ರಿ ಒಂದೇ ದಿನ ಮೂರು ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ನಡೆಸಿ ದರೋಡೆ ಮಾಡಿದ್ದ. RMC ಯಾರ್ಡ್, ನಂದಿನಿ ಲೇಔಟ್, ಕಾಟನ್ ಪೇಟೆ ವ್ಯಾಪ್ತಿಯಲ್ಲಿ ಮೊಬೈಲ್, ಹಣ, ಚಿನ್ನ ರಾಬರಿ ಮಾಡಿದ್ದ. ಇದೇ ಕೇಸ್​ನಲ್ಲಿ ಬಂಧಿಸಲು ಹೋದಾಗ ಫೈರಿಂಗ್ ನಡೆದಿದೆ.

ಕಾರ್ತಿಕ್ ತನ್ನ ಸಹಚರ ಭದ್ರಿ ಜೊತೆ ಸೇರಿ ದರೋಡೆ ನಡೆಸಿದ್ದ. ಆರೋಪಿ ಭದ್ರಿಯನ್ನು ಪೊಲೀಸರು ಬಂಧಿಸಿದ ಬಳಿಕ ಕಾರ್ತಿಕ್ ಮಾಹಿತಿ ಕಲೆ ಹಾಕಿದ್ದರು. RMC ಯಾರ್ಡ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಬಳಿ ಡಿಯೋ ಬೈಕ್ ಕಿತ್ತುಕೊಂಡಿದ್ದ.

ಸಾರ್ವಜನಿಕರ ಎದುರಲ್ಲೆ ಬೈಕ್ ಕಿತ್ತುಕೊಂಡು ದರೋಡೆ ಕೃತ್ಯ ಎಸಗಿದ್ದ. ಕಳೆದೆರಡು ವರ್ಷಗಳಿಂದ ಇವರಿಬ್ಬರೂ ಜೈಲಿನಲ್ಲಿದ್ದರು. ನಾಲ್ಕು ತಿಂಗಳ ಹಿಂದೆ ಭದ್ರಿ ರಿಲೀಸ್ ಆಗಿದ್ದ ಹಾಗೂ ಇಪ್ಪತ್ತು ದಿನಗಳ ಹಿಂದೆ ಕಾರ್ತಿಕ್ ರಿಲೀಸ್ ಆಗಿದ್ದು ಈಗ ಮತ್ತೆ ಪೊಲೀಸರ ಕೈಗೆ ಸಿಕ್ಕಿದ್ದಾರೆ. ಆರೋಪಿ ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಒಟ್ಟು 11ಪ್ರಕರಣಗಳು ದಾಖಲಾಗಿವೆ.

ಸಬ್ ಇನ್ಸ್‌ಪೆಕ್ಟರ್ ನಿತ್ಯಾನಂದ

ಖಾಕಿ ಪಡೆ ಭರ್ಜರಿ ಬೇಟೆ: ಫೈರಿಂಗ್ ಮಾಡಿ 4 ಕೊಲೆ ಆರೋಪಿಗಳ ಅರೆಸ್ಟ್​

Published On - 8:04 am, Thu, 7 January 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!