AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಪೊಲೀಸರಿಂದ ಫೈರಿಂಗ್..

ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಶ್ರೀರಾಂಪುರ ಠಾಣಾ ವ್ಯಾಪ್ತಿಯ ಓಕಳಿಪುರಂ ಬಳಿ ಗುಂಡಿನ ದಾಳಿ ನಡೆದಿದೆ.

ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಪೊಲೀಸರಿಂದ ಫೈರಿಂಗ್..
ಗಾಯಗೊಂಡಿರುವ ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಗುಂಡ
ಆಯೇಷಾ ಬಾನು
|

Updated on:Jan 07, 2021 | 1:56 PM

Share

ಬೆಂಗಳೂರು: ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಪೊಲೀಸರ ಗನ್ ಸದ್ದು ಮಾಡಿದೆ. ರೌಡಿಶೀಟರ್ ಮೇಲೆ ನಂದಿನ ಲೇಔಟ್ ಠಾಣೆ ಪೊಲೀಸರಿಂದ ಫೈರಿಂಗ್ ನಡೆದಿದೆ. ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಶ್ರೀರಾಂಪುರ ಠಾಣಾ ವ್ಯಾಪ್ತಿಯ ಓಕಳಿಪುರಂ ಬಳಿ ಗುಂಡಿನ ದಾಳಿ ನಡೆದಿದೆ.

ಕಾರ್ತಿಕ್ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್. ಆತ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಿದ್ದವ. ರೌಡಿಶೀಟರ್ ಬಂಧಿಸಲು ಸಬ್ ಇನ್ಸ್‌ಪೆಕ್ಟರ್ ನಿತ್ಯಾನಂದ & ಟೀಂ ತೆರಳಿತ್ತು.

ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ರೌಡಿಶೀಟರ್ ಪ್ರಯತ್ನಿಸಿದ್ದ ಆತ್ಮರಕ್ಷಣೆಗಾಗಿ ಬಲಗಾಲಿಗೆ ಗುಂಡು ಹಾರಿಸಿ ಪೊಲೀಸರು ಕಾರ್ತಿಕ್​ನನ್ನ ಬಂಧಿಸಿದ್ದಾರೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಜೈಲಿಗೆ ಹೋಗಿ ಬಂದರೂ ಬಿಡಲಿಲ್ಲ ಹಳೆ ಚಾಳಿ ಕಳೆದ ಇಪ್ಪತ್ತು ದಿನಗಳ ಹಿಂದೆ ಜೈಲಿನಿಂದ ಹೊರ ಬಂದಿದ್ದ ಆರೋಪಿ ಕಾರ್ತಿಕ್ ಕಳೆದ ಜನವರಿ 3ರಂದು ರಾತ್ರಿ ಒಂದೇ ದಿನ ಮೂರು ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ನಡೆಸಿ ದರೋಡೆ ಮಾಡಿದ್ದ. RMC ಯಾರ್ಡ್, ನಂದಿನಿ ಲೇಔಟ್, ಕಾಟನ್ ಪೇಟೆ ವ್ಯಾಪ್ತಿಯಲ್ಲಿ ಮೊಬೈಲ್, ಹಣ, ಚಿನ್ನ ರಾಬರಿ ಮಾಡಿದ್ದ. ಇದೇ ಕೇಸ್​ನಲ್ಲಿ ಬಂಧಿಸಲು ಹೋದಾಗ ಫೈರಿಂಗ್ ನಡೆದಿದೆ.

ಕಾರ್ತಿಕ್ ತನ್ನ ಸಹಚರ ಭದ್ರಿ ಜೊತೆ ಸೇರಿ ದರೋಡೆ ನಡೆಸಿದ್ದ. ಆರೋಪಿ ಭದ್ರಿಯನ್ನು ಪೊಲೀಸರು ಬಂಧಿಸಿದ ಬಳಿಕ ಕಾರ್ತಿಕ್ ಮಾಹಿತಿ ಕಲೆ ಹಾಕಿದ್ದರು. RMC ಯಾರ್ಡ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಬಳಿ ಡಿಯೋ ಬೈಕ್ ಕಿತ್ತುಕೊಂಡಿದ್ದ.

ಸಾರ್ವಜನಿಕರ ಎದುರಲ್ಲೆ ಬೈಕ್ ಕಿತ್ತುಕೊಂಡು ದರೋಡೆ ಕೃತ್ಯ ಎಸಗಿದ್ದ. ಕಳೆದೆರಡು ವರ್ಷಗಳಿಂದ ಇವರಿಬ್ಬರೂ ಜೈಲಿನಲ್ಲಿದ್ದರು. ನಾಲ್ಕು ತಿಂಗಳ ಹಿಂದೆ ಭದ್ರಿ ರಿಲೀಸ್ ಆಗಿದ್ದ ಹಾಗೂ ಇಪ್ಪತ್ತು ದಿನಗಳ ಹಿಂದೆ ಕಾರ್ತಿಕ್ ರಿಲೀಸ್ ಆಗಿದ್ದು ಈಗ ಮತ್ತೆ ಪೊಲೀಸರ ಕೈಗೆ ಸಿಕ್ಕಿದ್ದಾರೆ. ಆರೋಪಿ ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಒಟ್ಟು 11ಪ್ರಕರಣಗಳು ದಾಖಲಾಗಿವೆ.

ಸಬ್ ಇನ್ಸ್‌ಪೆಕ್ಟರ್ ನಿತ್ಯಾನಂದ

ಖಾಕಿ ಪಡೆ ಭರ್ಜರಿ ಬೇಟೆ: ಫೈರಿಂಗ್ ಮಾಡಿ 4 ಕೊಲೆ ಆರೋಪಿಗಳ ಅರೆಸ್ಟ್​

Published On - 8:04 am, Thu, 7 January 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ