AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದ ನಾಡಬಂದೂಕು ತಯಾರಿ ಅಡ್ಡೆ ಮೇಲೆ ಪೊಲೀಸ್​ ದಾಳಿ: ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರ ತಾಲೂಕಿನ ಗುಂಗ್ಲೀರ್ಲಕಹಳ್ಳಿ ಗ್ರಾಮದ ಗಂಗಾಧರ್ ಎಂಬಾತ ನಾಡಬಂದೂಕು ಮಾಡುವುದರಲ್ಲಿ ಎಕ್ಸ್​ಪರ್ಟ್​ ಆಗಿದ್ದು, ನಾಡಬಂದೂಕು ತಯಾರಿ ಮಾಡುವುದಕ್ಕೆ ಬೇಕಾದ ಕಚ್ಚಾ ಸಾಮಾಗ್ರಿಗಳನ್ನ ಸಂಗ್ರಹಿಸಿ ತನ್ನ ಮನೆಯ ಮುಂದಿನ ಕುಲುಮೆಯಲ್ಲೇ ನಾಡಬಂದೂಕು ರೆಡಿ ಮಾಡುತ್ತಾರೆ.

ಚಿಕ್ಕಬಳ್ಳಾಪುರದ ನಾಡಬಂದೂಕು ತಯಾರಿ ಅಡ್ಡೆ ಮೇಲೆ ಪೊಲೀಸ್​ ದಾಳಿ: ಆರೋಪಿಗಳ ಬಂಧನ
ಬಂಧಿತ ಆರೋಪಿಗಳು
sandhya thejappa
|

Updated on: Mar 03, 2021 | 2:28 PM

Share

ಚಿಕ್ಕಬಳ್ಳಾಪುರ: ಆತ್ಮರಕ್ಷಣೆಗೆ ಬಂದೂಕು ಬೇಕು ಎಂದರೆ ತರಬೇತಿ ಪಡೆದು ಆಯಾ ಜಿಲ್ಲಾಡಳಿತದಿಂದ ನಿಯಮಬದ್ಧವಾಗಿ ಅನುಮತಿ ಪಡೆಯಬೇಕು. ಆದರೆ ಚಿಕ್ಕಬಳ್ಳಾಪುರ ತಾಲೂಕಿನ ಗುಂಗ್ಲೀರ್ಲದಹಳ್ಳಿ ಗ್ರಾಮದಲ್ಲೊಬ್ಬ ಬಂದೂಕುಗಳನ್ನು ಕಾಳ ಸಂತೆಯಲ್ಲಿ ಮನಸ್ಸೋ ಇಚ್ಛೆ, ಕುಲುಮೆಯಲ್ಲಿ ಕೊಡಲಿ ತಯಾರಿಸುವ ಹಾಗೆ ತಯಾರಿಸಿ, ಐದು ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾನೆ. ವಿಷಯ ತಿಳಿದ ಪೊಲೀಸರು ದಾಳಿ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಮಾರುದ್ದದ ನಾಡಬಂದೂಕು ಮಾಡುವುದಕ್ಕೆ ಬೇಕಾಗಿರುವ ಸಲಕರಣೆಗಳು ಹಾಗೂ ಬಂದೂಕಿಗೆ ತುಂಬುವ ಗನ್ ಪೌಡರ್ ಚಿಕ್ಕಬಳ್ಳಾಪುರ ತಾಲೂಕಿನ ಗುಂಗ್ಲೀರ್ಲಕಹಳ್ಳಿ ಗ್ರಾಮ ಹೊರವಲಯದ ಗಂಗಾಧರ್ ಎಂಬುವವರ ಮನೆಯಲ್ಲಿ ಸಿಕ್ಕಿದೆ. ಗಂಗಾಧರ್ ಎಂಬಾತ ನಾಡಬಂದೂಕು ಮಾಡುವುದರಲ್ಲಿ ಎಕ್ಸ್​ ಪರ್ಟ್​ ಆಗಿದ್ದು, ನಾಡಬಂದೂಕು ತಯಾರಿ ಮಾಡುವುದಕ್ಕೆ ಬೇಕಾದ ಕಚ್ಚಾ ಸಾಮಾಗ್ರಿಗಳನ್ನ ಸಂಗ್ರಹಿಸಿ ತನ್ನ ಮನೆಯ ಮುಂದಿನ ಕುಲುಮೆಯಲ್ಲೇ ನಾಡಬಂದೂಕು ರೆಡಿ ಮಾಡುತ್ತಾನೆ.

ಈತ ಹೀಗೆ ಹಲವಾರು ದಿನಗಳಿಂದ ಕದ್ದು ಮುಚ್ಚಿ ನಾಡಬಂದೂಕುಗಳನ್ನ ತಯಾರಿ ಮಾಡಿ ಐದು ಸಾವಿರ ರೂಪಾಯಿಂದ ಹತ್ತು ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದನಂತೆ. ಆದರೆ ಇದೀಗ ಖಚಿತ ಮಾಹಿತಿ ಮೆರೆಗೆ ನಂದಿಗಿರಿಧಾಮ ಪೊಲೀಸರು ದಾಳಿ ನಡೆಸಿ ಆರೋಪಿ ಗಂಗಾಧರನನ್ನು ಬಂಧಿಸಿದ್ದಾರೆ. ಅಲ್ಲದೇ ಗಂಗಾಧರ್ ಬಳಿ ಇದ್ದ 3 ನಾಡಬಂದೂಕುಗಳು ಹಾಗೂ ನಾಡಬಂದೂಕು ತಯಾರಿ ಮಾಡಲು ಇಟ್ಟುಕೊಂಡಿದ್ದ ಸಲಕರಣೆಗಳನ್ನ ವಶಕ್ಕೆ ಪಡೆದಿದ್ದಾರೆ.

ನಾಡಬಂದೂಕು

ಪೊಲೀಸರ ದಾಳಿ

ನಾಡಬಂದೂಕನ್ನು ವಶಕ್ಕೆ ಪಡೆದ ಪೊಲೀಸರು

ಗಂಗಾಧರ್ ನಾಡಬಂದೂಕು ತಯಾರಿ ಮಾಡಿ ಸುತ್ತಮುತ್ತಲ ಹಲವರಿಗೆ ಮಾರಾಟ ಮಾಡಿದ್ದು, ಗಂಗಾಧರ್ ಬಳಿ ನಾಡಬಂದೂಕನ್ನು ಖರೀದಿಸಿದ್ದ ಇಬ್ಬರು ಪೊಲೀಸರ ದಾಳಿ ವೇಳೆ ನಾಡಬಂದೂಕು ರಿಪೇರಿಗೆ ಅಂತ ಬಂದು ಸಿಕ್ಕಿಹಾಕಿಕೊಂಡಿದ್ದಾರೆ. ಆ ಇಬ್ಬರನ್ನ ವಶಕ್ಕೆ ಪಡೆದಿರುವ ಪೊಲೀಸರು ಅವರ ಬಳಿ ಇದ್ದ ನಾಡಬಂದೂಕು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕಾಡು ಪ್ರಾಣಿಗಳ ಬೇಟೆಯಾಡುವುದಕ್ಕೆ ಈ ಅಕ್ರಮ ನಾಡಬಂದೂಕುಗಳ ತಯಾರಿ ಮಾಡಿಕೊಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಇದುವರೆಗೆ ಎಷ್ಟು ಬಂದೂಕುಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾನೆ ಎನ್ನುವ ಬಗ್ಗೆ ನಂದಿಗಿರಿಧಾಮ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಂದೂಕು ತಯಾರಿಕೆಗೆ ಬೇಕಾದ ಸಾಮಾಗ್ರಿಗಳು

ಇದನ್ನೂ ಓದಿ

ಗನ್ ಮಾಫಿಯಾದಲ್ಲಿ ಸದ್ದು ಮಾಡುತ್ತಿದೆ ಬೆಂಗಳೂರು: ಸಿಟಿ ಪೊಲೀಸರ ರಹಸ್ಯ ಕಾರ್ಯಾಚರಣೆ ವೇಳೆ ಹೊರಬಂತು ಸ್ಪೋಟಕ ಮಾಹಿತಿ

ಅಕ್ರಮವಾಗಿ ನಾಡಬಂದೂಕು ತಯಾರಿ: 3 ಆರೋಪಿಗಳನ್ನು ಬಂಧಿಸಿದ ನಂದಿ ಗಿರಿಧಾಮ ಠಾಣೆ ಪೊಲೀಸರು

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್