AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಗ್ವಾದಕ್ಕಿಳಿದ ಯುವಕನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್, ಫುಡ್ ಡೆಲಿವರಿ ಬಾಯ್ಸ್ಗೆ ಖಡಕ್ ವಾರ್ನಿಂಗ್

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಅನಗತ್ಯವಾಗಿ ರಸ್ತೆಗಿಳಿದವರ ವಾಹನ ಪರಿಶೀಲನೆ ವೇಳೆ ಕೀ ಕೊಡೆದ ಪೊಲೀಸರ ಜೊತೆ ಯುವಕ ವಾಗ್ವಾದ ಮಾಡಿದ್ದು ಈ ವೇಳೆ ಯುವಕನಿಗೆ ಪೊಲೀಸರಿಂದ ಕಪಾಳಮೋಕ್ಷವಾಗಿದೆ.

ವಾಗ್ವಾದಕ್ಕಿಳಿದ ಯುವಕನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್, ಫುಡ್ ಡೆಲಿವರಿ ಬಾಯ್ಸ್ಗೆ ಖಡಕ್ ವಾರ್ನಿಂಗ್
ಫುಡ್ ಡೆಲಿವರಿ ಬಾಯ್ಸ್​ಗೆ ಖಡಕ್ ವಾರ್ನಿಂಗ್
ಆಯೇಷಾ ಬಾನು
ಆಯೇಷಾ ಬಾನು|

Updated on: May 11, 2021 | 12:20 PM

Share

ಚಿಕ್ಕಬಳ್ಳಾಪುರ: ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನ ಚೈನ್ ಲಿಂಕ್ ಮುರಿಯಲು ಸರ್ಕಾರ ಕರ್ನಾಟಕ ರಾಜ್ಯದಲ್ಲಿ 14 ದಿನಗಳ ಕಠಿಣ ಲಾಕ್ಡೌನ್ ವಿಧಿಸಿದೆ. ಇಂದು ಅದರ ಎರಡನೇ ದಿನವಾಗಿದ್ದೂ ಇಂದೂ ಕೂಡ ಪೊಲೀಸರು ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಅನಗತ್ಯವಾಗಿ ರಸ್ತೆಗಿಳಿದವರ ವಾಹನ ಪರಿಶೀಲನೆ ವೇಳೆ ಕೀ ಕೊಡೆದ ಪೊಲೀಸರ ಜೊತೆ ಯುವಕ ವಾಗ್ವಾದ ಮಾಡಿದ್ದು ಈ ವೇಳೆ ಯುವಕನಿಗೆ ಪೊಲೀಸರಿಂದ ಕಪಾಳಮೋಕ್ಷವಾಗಿದೆ.

ಪೊಲೀಸರ ಜೊತೆ ವಾಗ್ವಾದಕ್ಕಿಳಿದ ಯುವಕನಿಗೆ ಕಪಾಳಮೋಕ್ಷ ಮಾಡಿ ಬೈಕ್ ಸೀಜ್ ಮಾಡಿದ್ದಾರೆ. ನಾವು ಬಡವರು ಸಾರ್ ಕೆಲಸಕ್ಕೆ ಹೋಗಬೇಕು ಬಿಡಿ ಎಂದು ಮನವಿ ಮಾಡಿದ್ರೂ ಪೊಲೀಸರು ಕೇಳದೆ ಬೈಕ್ ಸೀಜ್ ಮಾಡಿರುವ ಘಟನೆ ನಡೆದಿದೆ.

ಫುಡ್ ಡೆಲಿವರಿ ಬಾಯ್ಸ್ಗೆ ಖಡಕ್ ವಾರ್ನಿಂಗ್ ಇನ್ನು ಬೆಂಗಳೂರಿನಲ್ಲಿ ಕೊರೊನಾ ರೂಲ್ಸ್ ಬ್ರೇಕ್ ಮಾಡ್ತಿದ್ದ ಡೆಲಿವರಿ ಬಾಯ್ಸ್ಗೆ ಯಲಹಂಕ ಟ್ರಾಫಿಕ್ ಇನ್ಸ್ ಪೆಕ್ಟರ್ ಮಂಜೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ಯಲಹಂಕ ಸುತ್ತಾಮುತ್ತಾ ಸರಿಯಾಗಿ ಫೇಸ್ ಮಾಸ್ಕ್ ಧರಿಸದೇ ಅಡ್ಡಾಡ್ತಿದ್ದ ಫುಡ್ ಡೆಲಿವರಿ ಬಾಯ್ಸ್ನನ್ನು ನಿಲ್ಲಿಸಿ ವಾರ್ನ್ ಮಾಡಿ ಕಳಿಸಿದ್ದಾರೆ.

ಡೆಲಿವರಿ ಬಾಯ್ಸ್ ಫೇಸ್ ಮಾಸ್ಕ್ ಸರಿಯಾಗಿ ಧರಿಸಿರಬೇಕು. ಫುಡ್ ಡೆಲಿವರಿ ಆರ್ಡರ್ ಇರದೇ, ಅಥವಾ ಫುಡ್ ಕಿಟ್ ಬ್ಯಾಗ್ ಇಲ್ದಿರೋ ಬೈಕಲ್ಲಿ ಬಂದ್ರೆ ಬೈಕ್ ಸೀಜ್ ಮಾಡ್ತೀವಿ. ಸುಮ್ಮನೇ ಡೆಲಿವರಿ ಬಾಯ್ಸ್ ಅಂತ ಟೀ ಶರ್ಟ್ ಹಾಕ್ಕೊಂಡ್ ಅಡ್ಡಾಡ್ತಿರೋದ್ ಗಮನಕ್ಕೆ ಬಂದಿದೆ. ಡೆಲಿವರಿ ಕೊಡೋ ಟೈಮಲ್ಲಿ ಮಾಸ್ಕ್ ಫೇಸ್ ಶೀಲ್ಡ್ ಸ್ಯಾನಿಟೈಸರ್ ನಿಮ್ಮತ್ರ ಇರ್ಲೇಬೇಕು. ಮಾಸ್ಕ್ ಫೇಸ್ ಶೀಲ್ಡ್ ಇಲ್ದೆ ಓಡಾಡೋದ್ ಗೊತ್ತಾದ್ರೆ ಪಿಪಿಇ ಕಿಟ್ ಹಾಕಿ ಕಳಿಸ್ತೀವಿ. ಹೇಳಿ ನಿಮ್ಮ ಕಂಪನಿಗೆ ಸರಿಯಾಗಿ ಕೊರೊನಾ ರೂಲ್ಸ್ ಫಾಲೋ ಮಾಡೋಕ್.

ನೀವು ಒಬ್ಬೊಬ್ರು ದಿನಕ್ಕೆ ನೂರು ಮನೆಗೆ ಫುಡ್ ಡೆಲಿವರಿ ಕೊಡ್ತೀರಾ. ನಿಮ್ಮ ಅಜಾಗರೂಕತೆಯಿಂದ ಒಬ್ಬ ಸೋಂಕಿತ ನಿಮ್ಮ ಸಂಪರ್ಕಕ್ಕೆ ಬಂದ್ರು ಉಳಿದ 99 ಮನೆಯವರಿಗೆ ತೊಂದರೆಯಾಗತ್ತೆ. ಇದೇ ಲಾಸ್ಟ್ ವಾರ್ನಿಂಗ್ ನಿಮ್ಗೆಲ್ಲ ಇನ್ಮುಂದೆ ಒಂದ್ ಸಣ್ ರೂಲ್ಸ್ ಬ್ರೇಕ್ ಮಾಡಿದ್ರು ಕೇಸ್ ಹಾಕ್ದೆ ಬಿಡೊಲ್ಲ ಎಂದು ಖಡಕ್ ಆಗಿ ಫುಡ್ ಡೆಲಿವರಿ ಬಾಯ್ಸ್ ಗೆ ಯಲಹಂಕ ಟ್ರಾಫಿಕ್ ಇನ್ಸ್ ಪೆಕ್ಟರ್ ಮಂಜೇಗೌಡರಿಂದ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಥೆ ಬರಹಗಾರ ಮಾಡಂಪು ಕುಂಜುಕುಟ್ಟನ್​ ಕೊರೊನಾದಿಂದ ನಿಧನ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು