AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Praveen Nettar: ಪ್ರವೀಣ್ ನೆಟ್ಟಾರು ಕೊಲೆಯಲ್ಲಿ ನೇರ ಭಾಗಿಯಾದ ಆರೋಪಿಗಳ ಸುಳಿವಿಲ್ಲ

ಕೊಲೆಗೆ ಸಹಕಾರ ಕೊಟ್ಟ ಆರೋಪಿಗಳನ್ನು ಮಾತ್ರವೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಖ್ಯ ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಮೂಲಗಳು ಹೇಳಿವೆ.

Praveen Nettar: ಪ್ರವೀಣ್ ನೆಟ್ಟಾರು ಕೊಲೆಯಲ್ಲಿ ನೇರ ಭಾಗಿಯಾದ ಆರೋಪಿಗಳ ಸುಳಿವಿಲ್ಲ
ಮೃತ ಪ್ರವೀಣ್ ನೆಟ್ಟಾರು
TV9 Web
| Edited By: |

Updated on:Aug 01, 2022 | 3:16 PM

Share

ಬೆಂಗಳೂರು: ಸುಳ್ಯ ತಾಲ್ಲೂಕು ಬೆಳ್ಳಾರೆಯ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿರುವ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಕೊಲೆಗೆ ಸಹಕಾರ ಕೊಟ್ಟ ಆರೋಪಿಗಳನ್ನು ಮಾತ್ರವೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರ ವಶದಲ್ಲಿರುವ ಶಫೀಕ್ ಮತ್ತು ಜಾಹೀರ್ ವಿಚಾರಣೆ ವೇಳೆ ಕೇವಲ ದಾರಿತಪ್ಪಿಸುವ ಹೇಳಿಕೆಗಳನ್ನಷ್ಟೇ ನೀಡುತ್ತಿದ್ದಾರೆ. ಇವರು ನೀಡುತ್ತಿರುವ ಬಹುತೇಕ ಹೇಳಿಕೆಗಳು ಕಟ್ಟುಕತೆಗಳಂತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ನಾವು ಯಾವುದೇ ತಪ್ಪು ಮಾಡಿಲ್ಲ. ಆರೋಪಿಗಳಿಗೆ ಸಹಕಾರ ಕೊಟ್ಟಿಲ್ಲ. ಕೇವಲ ಊಟ ತಂದು ಕೊಟ್ಟಿದ್ದಕ್ಕೆ ನೀವು ಬಂಧಿಸಿದ್ದೀರಿ. ನಾನು ನಮ್ಮ ಕೂಲಿ ಕಾರ್ಮಿಕರಿಗೆ ಊಟ ತಂದು ಕೊಟ್ಟಿದ್ದೇನೆ. ಪ್ರವೀಣ್ ಹತ್ಯೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ’ ಎಂದು ಹೇಳಿದ್ದಾರೆ. ಶಫೀಕ್ ಮತ್ತು ಜಾಹೀರ್ ಹೇಳಿಕೆಗಳಿಂದ ಪೊಲೀಸರು ಗೊಂದಲಕ್ಕೆ ಸಿಲುಕಿದ್ದಾರೆ. ಬೆಂಗಳೂರಿನಲ್ಲಿ ಪತ್ತೆಯಾದವರ ಬಳಿಯೂ ಈ ಸಂಬಂಧ ಸಮರ್ಪಕ ಮಾಹಿತಿ ಲಭ್ಯವಾಗುತ್ತಿಲ್ಲ. ಹೀಗಾಗಿ ಪೊಲೀಸರಿಗೆ ಪ್ರವೀಣ್ ಕೊಲೆ ಪ್ರಕರಣದ ಮುಖ್ಯ ಆರೋಪಿ ಯಾರು ಎನ್ನುವುದು ತಲೆನೋವಾಗಿ ಪರಿಣಮಿಸಿದೆ.

ಮಂಗಳೂರು ಕಮಿಷನರ್ ಕಚೇರಿಯಲ್ಲಿ ಪ್ರವೀಣ್ ಸೂದ್ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್​ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆ ಐಜಿಪಿ ಪ್ರವೀಣ್ ಸೂದ್ ಸಭೆ ನಡೆಸಿದರು. ಪ್ರವೀಣ್ ಮತ್ತು ಫಾಜಿಲ್​ ಕೊಲೆ ಪ್ರಕರಣದ ತನಿಖಾ ಪ್ರಗತಿ ಬಗ್ಗೆ ಮಾಹಿತಿ ಪಡೆದ ಅವರು, ಮುಂದಿನ ಹಂತದ ತನಿಖೆಯ ಬಗ್ಗೆ ಅಗತ್ಯ ಮಾರ್ಗದರ್ಶನ ಮಾಡಿದರು.

ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೂರೂ ಪ್ರಕರಣಗಳ ತನಿಖೆಯ ಬಗ್ಗೆ ಚರ್ಚಿಸಿದ್ದೇನೆ. ಪೊಲೀಸರು ಸಮರ್ಪಕ ಜಾಡು ಹಿಡಿದೇ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಯಾರೇ ಇದ್ದರೂ ಕ್ರಮ ತೆಗೆದುಕೊಳ್ಳುತ್ತೇವೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳುತ್ತೇವೆ ಎಂದರು ಭರವಸೆ ನೀಡಿದರು.

Published On - 3:16 pm, Mon, 1 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!