ಸರ್ಕಾರದ ವಿರುದ್ಧ ಧರಣಿಗೆ ಕುಳಿತಿದ್ದ ಯಡಿಯೂರಪ್ಪ ಹಾಗೂ ಇತರ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಅರುಣ್​ ಕುಮಾರ್​ ಬೆಳ್ಳಿ

Updated on: Apr 03, 2025 | 3:26 PM

ಪೊಲೀಸರು ತಮ್ಮನ್ನೂ ವಶಕ್ಕೆ ಪಡೆಯಲೆಂದು ಬಿಜೆಪಿ ನಾಯಕರಲ್ಲಿ ಸ್ಪರ್ಧೆ ಏರ್ಪಟ್ಟಿದ್ದು ಸೋಜಿಗ ಮೂಡಿಸಿತು. ಮಾಜಿ ಸಚಿವರಾದ ಮುರುಗೇಶ್ ನಿರಾಣಿ ಮತ್ತು ಎಂಪಿ ರೇಣುಕಾಚಾರ್ಯ ಮತ್ತು ಇನ್ನಿತರ ನಾಯಕರು ಬಸ್ ಹತ್ತಲು ಆತುರ ಪಡುವುದನ್ನು ನೋಡಬಹುದು. ಬಸ್ಸಲ್ಲಿ ಯಡಿಯೂರಪ್ಪ, ಬಿವೈ ವಿಜಯೇಂದ್ರ, ನಾರಾಯಣಸ್ವಾಮಿ ಚಲವಾದಿ ಮೊದಲಾದವರು ಕಂಡರು.

ಬೆಂಗಳೂರು, ಏಪ್ರಿಲ್ 3: ನಗರದ ಫ್ರೀಡಂ ಪಾರ್ಕ್​ನಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಅನೇಕ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಇವತ್ತು ಧರಣಿಗೆ ಅಗಮಿಸಿದ್ದ ಹಿರಿಯ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ (BS Yediyurappa) ಅವರನ್ನು ಸೇರಿದಂತೆ ಬಿಜೆಪಿರ ಪ್ರಮುಖ ನಾಯಕರನ್ನೆಲ್ಲ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್​ಗಳಲ್ಲಿ ಅವರನ್ನು ಬೇರೆ ಸ್ಥಳಕ್ಕೆ ಕರೆದೊಯ್ಯಲಾಯಿತು. ಬಸ್ಸಲ್ಲಿ ಕುಳಿತಿದ್ದ ಯಡಿಯೂರಪ್ಪ ಜೊತೆ ಮಾತಾಡುವ ಪ್ರಯತ್ನವನ್ನು ನಮ್ಮ ವರದಿಗಾರ ಮಾಡಿದರು. ಆದರೆ ಮಾಜಿ ಸಿಎಂ ಮಾತಾಡಲಿಲ್ಲ.

ಇದನ್ನೂ ಓದಿ:  ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ: ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಕಹಳೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.