
ದಾವಣಗೆರೆ: ಪೊಲೀಸ್ ವಾಹನ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹರಿಹರದಲ್ಲಿ ನಡೆದಿದೆ. ವಾಹನದಲ್ಲಿ ಬೆಂಗಳೂರಿನ ಮಾಗಡಿ ರಸ್ತೆಯ ಪೊಲೀಸರು, ಆರೋಪಿಗಳು ಇದ್ದರು.
ಕಾನ್ಸ್ಟೆಬಲ್ ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪಿಗಳನ್ನು ಮಹಜರಿಗೆಂದು ಕರೆದುಕೊಂಡು ಹೋಗಲಾಗುತ್ತಿತ್ತು. ಅಪಘಾತದಿಂದ ವಾಹನ ನುಜ್ಜುಗುಜ್ಜಾಗಿದೆ. ಪಿಎಸ್ಐ ಸುಧಾ, ಪೊಲೀಸ್ ಸಿಬ್ಬಂದಿ ಮಹೇಶ್, ಶಿವರಾಜ್, ಮೌನೇಶ್, ವಾಹನ ಚಾಲಕ ಮೋಹನ್, ಆರೋಪಿ ಮಲ್ಲಿಕಾರ್ಜುನ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಲಾಗಿದೆ.