AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಹೆಚ್ಚು ಮತ ಪಡೆದರೂ ನಲಪಾಡ್​ಗೆ ಮುಖಭಂಗ: ರಕ್ಷಾ ರಾಮಯ್ಯಗೆ ಅಧ್ಯಕ್ಷ ಸ್ಥಾನ

ಈ ಚುನಾವಣೆಯಲ್ಲಿ ನಲಪಾಡ್​ ಅತಿ ಹೆಚ್ಚು ಅಂದರೆ, 64,203 ಮತಗಳನ್ನು ಪಡೆದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರನ್ನು ಅನರ್ಹ ಎಂದು ಘೋಷಣೆ ಮಾಡಲಾಗಿದೆ.

ಅತಿ ಹೆಚ್ಚು ಮತ ಪಡೆದರೂ ನಲಪಾಡ್​ಗೆ ಮುಖಭಂಗ: ರಕ್ಷಾ ರಾಮಯ್ಯಗೆ ಅಧ್ಯಕ್ಷ ಸ್ಥಾನ
ನಲಪಾಡ್​-ರಕ್ಷಾ ರಾಮಯ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Feb 04, 2021 | 9:36 PM

Share

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್​ ಘಟಕಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ರಕ್ಷಾ ರಾಮಯ್ಯ ಅವರು ಕರ್ನಾಟಕ ಯುವ ಕಾಂಗ್ರೆಸ್​ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೊಹಮ್ಮದ್​ ನಲಪಾಡ್​ ಅತಿ ಹೆಚ್ಚು ಮತ ಗಳಿಸಿದ್ದರೂ ಅವರನ್ನು ಅನರ್ಹ ಮಾಡಿದ್ದರಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ.

ರಕ್ಷಾ ರಾಮಯ್ಯ ಅವರಿಗೆ 57,271 ಮತಗಳು ಬಿದ್ದಿವೆ. 18,137 ಮತಗಳನ್ನು ಪಡೆದು ಮಂಜುನಾಥ್​ ಎಚ್​​.ಎಸ್​ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಯುವ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ 7 ಜನರು ಸ್ಪರ್ಧೆ ಮಾಡಿದ್ದರು. ಕೊನೆಯ ಕ್ಷಣದಲ್ಲಿ ಮಿಥುನ್​ ರೈ ಕಣದಿಂದ ಹಿಂದೆ ಸರಿದಿದ್ದರು. ಹೀಗಾಗಿ, ಸ್ಪರ್ಧೆಯಲ್ಲಿ ಆರು ಜನರಿದ್ದರು.

ಈ ಚುನಾವಣೆಯಲ್ಲಿ ನಲಪಾಡ್​ ಅತಿ ಹೆಚ್ಚು ಅಂದರೆ ,64,203 ಮತಗಳನ್ನು ಪಡೆದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರನ್ನು ಅನರ್ಹ ಎಂದು ಘೋಷಣೆ ಮಾಡಲಾಗಿದೆ. ಹೀಗಾಗಿ, ಅವರಿಗೆ ಅಧ್ಯಕ್ಷ ಸ್ಥಾನ ದೊರೆತಿಲ್ಲ. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಮಾಡಿ ಹಾಕಿರುವ ನಲಪಾಡ್​, ಅತಿ ಹೆಚ್ಚು ಮತಗಳನ್ನು ಪಡೆದಿದ್ದು ನಾನೇ. ಕಾಂಗ್ರೆಸ್​ ಕಾರ್ಯಕರ್ತನಾಗಿ ಪಕ್ಷ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಅದನ್ನು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

View this post on Instagram

A post shared by CH (@ch_jawaz)

ಚುನಾವಣೆ ನಿರೀಕ್ಷಣಾ ಸಂಸ್ಥೆಯಾದ FAME (Foundation for advanced Management of Elections) ಚುನಾವಣೆ ನಡೆಸಿತ್ತು. ತಿಂಗಳ ಹಿಂದೆ  ಅಧ್ಯಕ್ಷ ಸ್ಥಾನ ಆಕಾಂಕಿಕ್ಷಗಳ ಸಂದರ್ಶನ ನಡೆಸಿತ್ತು. ಅದರಲ್ಲಿ ಏಳು ಜನರು ಆಯ್ಕೆ ಆಗಿದ್ದರು. ಅಂದು ನಲಪಾಡ್​ ಅವರನ್ನು ಅರ್ಹ ಎಂದು ಘೋಷಣೆ ಮಾಡಿ, ಈಗ ಅನರ್ಹ ಎಂದು ಹೇಳಿದ್ದೇಕೆ ಎನ್ನುವ ಪ್ರಶ್ನೆ ಕಾಡಿದೆ.

ರಾಜಕೀಯ ವಿಶ್ಲೇಷಣೆ | ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ; ಯಾರಿಗೆ ಹೂವು? ಯಾರಿಗೆ ಮುಳ್ಳು?

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?