AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಹೆಚ್ಚು ಮತ ಪಡೆದರೂ ನಲಪಾಡ್​ಗೆ ಮುಖಭಂಗ: ರಕ್ಷಾ ರಾಮಯ್ಯಗೆ ಅಧ್ಯಕ್ಷ ಸ್ಥಾನ

ಈ ಚುನಾವಣೆಯಲ್ಲಿ ನಲಪಾಡ್​ ಅತಿ ಹೆಚ್ಚು ಅಂದರೆ, 64,203 ಮತಗಳನ್ನು ಪಡೆದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರನ್ನು ಅನರ್ಹ ಎಂದು ಘೋಷಣೆ ಮಾಡಲಾಗಿದೆ.

ಅತಿ ಹೆಚ್ಚು ಮತ ಪಡೆದರೂ ನಲಪಾಡ್​ಗೆ ಮುಖಭಂಗ: ರಕ್ಷಾ ರಾಮಯ್ಯಗೆ ಅಧ್ಯಕ್ಷ ಸ್ಥಾನ
ನಲಪಾಡ್​-ರಕ್ಷಾ ರಾಮಯ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Feb 04, 2021 | 9:36 PM

Share

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್​ ಘಟಕಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ರಕ್ಷಾ ರಾಮಯ್ಯ ಅವರು ಕರ್ನಾಟಕ ಯುವ ಕಾಂಗ್ರೆಸ್​ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೊಹಮ್ಮದ್​ ನಲಪಾಡ್​ ಅತಿ ಹೆಚ್ಚು ಮತ ಗಳಿಸಿದ್ದರೂ ಅವರನ್ನು ಅನರ್ಹ ಮಾಡಿದ್ದರಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ.

ರಕ್ಷಾ ರಾಮಯ್ಯ ಅವರಿಗೆ 57,271 ಮತಗಳು ಬಿದ್ದಿವೆ. 18,137 ಮತಗಳನ್ನು ಪಡೆದು ಮಂಜುನಾಥ್​ ಎಚ್​​.ಎಸ್​ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಯುವ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ 7 ಜನರು ಸ್ಪರ್ಧೆ ಮಾಡಿದ್ದರು. ಕೊನೆಯ ಕ್ಷಣದಲ್ಲಿ ಮಿಥುನ್​ ರೈ ಕಣದಿಂದ ಹಿಂದೆ ಸರಿದಿದ್ದರು. ಹೀಗಾಗಿ, ಸ್ಪರ್ಧೆಯಲ್ಲಿ ಆರು ಜನರಿದ್ದರು.

ಈ ಚುನಾವಣೆಯಲ್ಲಿ ನಲಪಾಡ್​ ಅತಿ ಹೆಚ್ಚು ಅಂದರೆ ,64,203 ಮತಗಳನ್ನು ಪಡೆದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರನ್ನು ಅನರ್ಹ ಎಂದು ಘೋಷಣೆ ಮಾಡಲಾಗಿದೆ. ಹೀಗಾಗಿ, ಅವರಿಗೆ ಅಧ್ಯಕ್ಷ ಸ್ಥಾನ ದೊರೆತಿಲ್ಲ. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಮಾಡಿ ಹಾಕಿರುವ ನಲಪಾಡ್​, ಅತಿ ಹೆಚ್ಚು ಮತಗಳನ್ನು ಪಡೆದಿದ್ದು ನಾನೇ. ಕಾಂಗ್ರೆಸ್​ ಕಾರ್ಯಕರ್ತನಾಗಿ ಪಕ್ಷ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಅದನ್ನು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

View this post on Instagram

A post shared by CH (@ch_jawaz)

ಚುನಾವಣೆ ನಿರೀಕ್ಷಣಾ ಸಂಸ್ಥೆಯಾದ FAME (Foundation for advanced Management of Elections) ಚುನಾವಣೆ ನಡೆಸಿತ್ತು. ತಿಂಗಳ ಹಿಂದೆ  ಅಧ್ಯಕ್ಷ ಸ್ಥಾನ ಆಕಾಂಕಿಕ್ಷಗಳ ಸಂದರ್ಶನ ನಡೆಸಿತ್ತು. ಅದರಲ್ಲಿ ಏಳು ಜನರು ಆಯ್ಕೆ ಆಗಿದ್ದರು. ಅಂದು ನಲಪಾಡ್​ ಅವರನ್ನು ಅರ್ಹ ಎಂದು ಘೋಷಣೆ ಮಾಡಿ, ಈಗ ಅನರ್ಹ ಎಂದು ಹೇಳಿದ್ದೇಕೆ ಎನ್ನುವ ಪ್ರಶ್ನೆ ಕಾಡಿದೆ.

ರಾಜಕೀಯ ವಿಶ್ಲೇಷಣೆ | ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ; ಯಾರಿಗೆ ಹೂವು? ಯಾರಿಗೆ ಮುಳ್ಳು?

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು