AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಮಾಂಸ ದಂಧೆ ಆರೋಪ: ಹೋಟೆಲ್‌, ರೆಸ್ಟೋರೆಂಟ್​ಗಳಿಗೆ ಆಹಾರ ಇಲಾಖೆ ನೋಟಿಸ್

ಕಳಪೆ ಮಾಂಸ ದಂಧೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಮೊದಲ ಹಂತವಾಗಿ 9 ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೊಟೀಸ್​ ನೀಡಲಾಗಿದ್ದು, ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕಳಪೆ ಮಾಂಸ ದಂಧೆ ಆರೋಪ: ಹೋಟೆಲ್‌, ರೆಸ್ಟೋರೆಂಟ್​ಗಳಿಗೆ ಆಹಾರ ಇಲಾಖೆ ನೋಟಿಸ್
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ
Jagadish PB
| Updated By: ವಿವೇಕ ಬಿರಾದಾರ|

Updated on: Jul 28, 2024 | 9:42 AM

Share

ಬೆಂಗಳೂರು, ಜುಲೈ 28: ಕಳಪೆ ಮಾಂಸ (Poor quality Meat) ದಂಧೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ರಜಾಕ್​ನಿಂದ (Abdul Razak) ಮಾಂಸ ಪಡೆಯುತ್ತಿದ್ದ ಹೋಟೆಲ್‌, ರೆಸ್ಟೋರೆಂಟ್​ಗಳಿಗೆ ಆಹಾರ ಇಲಾಖೆ (Food Department) ನೋಟಿಸ್​ ನೀಡಿದೆ. ಮೊದಲ ಹಂತವಾಗಿ 9 ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೊಟೀಸ್​ ನೀಡಲಾಗಿದ್ದು, ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಈಗಾಗಲೆ ಇಬ್ಬರು ವಿಚಾರಣೆಗೆ ಹಾಜರಾಗಿದ್ದು, ಉಳಿದವರು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಮನವಿ ಮಾಡಿಕೊಂಡಿದ್ದಾರೆ. ಶನಿವಾರ ಅಬ್ದಲ್​ ರಜಾಕ್​ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರವೂ ಕೂಡ ಅಬ್ದುಲ್ ರಜಾಕ್ ವಿಚಾರಣೆ ಹಾಜರಾಗಲಿದ್ದಾರೆ.

ಮಾಂಸ ಮಾದರಿ ಸಂಗ್ರಹಕ್ಕೆ ಮುಂದಾದ ಆಹಾರ ಇಲಾಖೆ

ಕುರಿ ಮಾಂಸದ ಜೊತೆಗೆ ನಾಯಿ ಮಾಂಸ ಸಾಗಾಟ ವದಂತಿ ಬೆನ್ನಲ್ಲೆ ಆಹಾರ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು ಕೋಲ್ಡ್ ಸ್ಟೋರೇಜ್​ನಲ್ಲಿರುವ ಮತ್ತು ಅಂಗಡಿಗಳಲ್ಲಿನ ಮಾಂಸಗಳ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ. -18 ಡಿಗ್ರಿ ಸ್ಟೋರೇಜ್​ನಲ್ಲಿಟ್ಟ ಮಾಂಸ ಹಾನಿಕಾರಕವಲ್ಲ. ಆದರೆ ಅದಕ್ಕೆ ಬಳಸುವ ರಾಸಾಯನಿಕ ಅಪಾಯಕಾರಿ ಈ ಹಿನ್ನೆಲೆಯಲ್ಲಿ ಮಾಂಸದ ಮಾದರಿಗಳನ್ನು ಸಂಗ್ರಹಿಸುವಂತೆ ಆಹಾರ ಇಲಾಖೆ ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಇದನ್ನೂ ಓದಿ: ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

ಮಾಂಸ ಕಲಬೆರಕೆಯಾಗಿದೆ ಅಂತ ಪತ್ತೆಯಾದರೆ ಕ್ರಮ ಕೈಗೊಳ್ಳುವುದಾಗಿ ಮಾಂಸದಂಗಡಿ ಮಾಲೀಕರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಆಯುಕ್ತ ಶ್ರೀನಿವಾಸ್​ ಎಚ್ಚರಿಕೆ ನೀಡಿದ್ದಾರೆ.

ತರಕಾರಿ ಮಾದರಿ ಸಂಗ್ರಹ

ಆಹಾರ ಇಲಾಖೆ ಬೆಂಗಳೂರಿನ 300 ಕಡೆ ತರಕಾರಿ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಿದೆ. ಪರೀಕ್ಷೆಯಲ್ಲಿ ತರಕಾರಿ ಫ್ರೆಶ್ ಆಗಿರುವಂತೆ ಕಾಣುವುದಕ್ಕೆ ಕೆಮಿಕಲ್ ಬಳಕೆ ಮಾಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತರಕಾರಿ ಅಂಗಡಿಗಳ ಮೇಲೂ ಕ್ರಮಕ್ಕೆ ಇಲಾಖೆ ತಯಾರಿ ನಡೆಸಿದೆ.

ಏನಿದು ಪ್ರಕರಣ

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದ ಜೊತೆಗೆ ನಾಯಿ ಮಾಂಸವನ್ನು ತರಲಾಗಿದೆ ಎಂದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆರೋಪ ಮಾಡಿದ್ದರು. ಶುಕ್ರವಾರ ರಾಜಸ್ಥಾನದಿಂದ ಬಂದ ಮಟನ್​ ಮಾಂಸದ ಬಾಕ್ಸ್​ಗಳನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ತಡೆಹಿಡಿಯಲಾಗಿತ್ತು. ಈ ಮಟನ್​ ಬಾಕ್ಸ್​ಗಳು ಅಬ್ದುಲ್​ ರಜಾಕ್​ಗೆ ಸೇರಿದವು ಎಂದು ತಿಳಿದು ಬಂದಿತ್ತು.

ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ ಕೆರೆಹಳ್ಳಿ ತಂಡ ಈ ಬಾಕ್ಸ್​ಗಳನ್ನು ತಡೆದಿದ್ದರು. ಇದರಿಂದ ಸ್ಥಳದಲ್ಲಿ ಅಬ್ದುಲ್ ರಜಾಕ್ ಮತ್ತು ​​ಪುನೀತ್​ ಕೆರೆಹಳ್ಳಿ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಬಳಿಕ ಪೊಲೀಸರು ಪುನೀತ್​ ಕೆರೆಹಳ್ಳಿಯನ್ನು ವಶಕ್ಕೆ ಪಡೆದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ