Positive Story| ಬಾಗಲಕೋಟೆ ಕುಮಾರೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ಆರಂಭ
ಕುಮಾರೇಶ್ವರ ಆಸ್ಪತ್ರೆಯಲ್ಲಿ ಸರಕಾರದಿಂದ ರೆಫರ್ ಮಾಡಲಾದ ಕೋವಿಡ್ ರೋಗಿಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದ್ದು, ಕುಮಾರೇಶ್ವರ ಆಸ್ಪತ್ರೆಗೆ ಸರಕಾರದಿಂದ ಚಿಕಿತ್ಸಾ ವೆಚ್ಚ ಪಾವತಿಯಾಗಲಿದೆ. ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಈ ಚಿಕಿತ್ಸಾ ವೆಚ್ಚ ಪಾವತಿಯಾಗಲಿದೆ.

ಬಾಗಲಕೋಟೆ: ಕೊರೊನಾ ಸೋಂಕು ಪಾಸಿಟೀವ್ ಸ್ಟೋರಿಗಳ ಭೀಕರತೆಯ ಮಧ್ಯೆ ಇದೊಂದು ನಿಜಾರ್ಥದಲ್ಲಿ ಪಾಸಿಟೀವ್ ಸುದ್ದಿಯಿದೆ. ಜಿಲ್ಲೆಯ ಜನ ಈ ಸುದ್ದಿಯನ್ನು ಕೇಳಿ ಸ್ವಲ್ಪಮಟ್ಟಿಗೆ ನೆಮ್ಮದಿಯ ನಿಟ್ಟುಸಿರುಬಿಡಬಹುದು. ಜಿಲ್ಲೆಯಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳದ ಕರಾಳತೆಯ ಸಮ್ಮುಖದಲ್ಲಿ ಖಾಸಗಿ ಆಸ್ಪತ್ರೆಯೊಂದು ಜಿಲ್ಲೆಯ ಜನರಲ್ಲಿ ಭರವಸೆ ಮೂಡಿಸಿದೆ. ಬಾಗಲಕೋಟೆ ಕುಮಾರೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರದಿಂದ ಕೋವಿಡ್ ಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಸರಕಾರದಿಂದ ರೆಫರ್ ಮಾಡಿದ ಕೋವಿಡ್ ರೋಗಿಗಳಿಗೆ ಇಲ್ಲಿ ಉಚಿತ ಚಿಕಿತ್ಸೆ ದೊರೆಯುತ್ತಿದೆ. ಡಿಸಿಎಂ ಗೋವಿಂದ ಕಾರಜೋಳ ಹಾಗೂ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರುಗಳ ಮಧ್ಯೆ ನಡೆದ ಚರ್ಚೆಯ ಪರಿಣಾಮ ಈ ಉಚಿತ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲಾಧಿಕಾರಿಗಳು, ಎಸ್ಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಯೂ ಚರ್ಚೆಗಳು ನಡೆದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕುಮಾರೇಶ್ವರ ಖಾಸಗಿ ಆಸ್ಪತ್ರೆಯಲ್ಲಿ 500 ಬೆಡ್ ನೀಡಲು ವೀರಣ್ಣ ಚರಂತಿಮಠ ಸಮ್ಮತಿಸಿದ್ದಾರೆ. ವೀರಣ್ಣ ಚರಂತಿಮಠ ಬಾಗಲಕೋಟೆ ಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ. ಬಸವೇಶ್ವರ ವಿದ್ಯಾವರ್ಧಕ ಸಂಘದ ಅಧೀನದ ಕುಮಾರೇಶ್ವರ ಖಾಸಗಿ ಆಸ್ಪತ್ರೆ ಇದಾಗಿದೆ.

ಬಾಗಲಕೋಟೆ ಕುಮಾರೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ಆರಂಭ
ಆಸ್ಪತ್ರೆಯಲ್ಲಿ 135 ಆಕ್ಸಿಜನ್ ಬೆಡ್ ಹಾಗೂ 320 ಜನರಲ್ ಬೆಡ್ ಸೇರಿ ಒಟ್ಟು 500 ಬೆಡ್ಗಳ ವ್ಯವಸ್ಥೆ ಇದೆ. ಆಸ್ಪತ್ರೆಯಲ್ಲಿ 15 ಸಾವಿರ ಕಿಲೋ ಲೀಟರ್ ಲಿಕ್ವಿಡ್ ಆಕ್ಸಿಜನ್ ಸ್ಟಾಕ್ ಇದ್ದು, ಪ್ರತಿದಿನ 900 ಕೆಜಿ ಸಿಲೆಂಡರಗಳ ವ್ಯವಸ್ಥೆ ಮಾಡಲಾಗಿದೆ. 12 ವೆಂಟಿಲೇಟರ್ ಇರುವುದಾಗಿ ವೀರಣ್ಣ ಚರಂತಿಮಠ ತಿಳಿಸಿದ್ದಾರೆ.
ಕುಮಾರೇಶ್ವರ ಆಸ್ಪತ್ರೆಯಲ್ಲಿ ಸರಕಾರದಿಂದ ರೆಫರ್ ಮಾಡಲಾದ ಕೋವಿಡ್ ರೋಗಿಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದ್ದು, ಕುಮಾರೇಶ್ವರ ಆಸ್ಪತ್ರೆಗೆ ಸರಕಾರದಿಂದ ಚಿಕಿತ್ಸಾ ವೆಚ್ಚ ಪಾವತಿಯಾಗಲಿದೆ. ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಈ ಚಿಕಿತ್ಸಾ ವೆಚ್ಚ ಪಾವತಿಯಾಗಲಿದೆ.

ಆಸ್ಪತ್ರೆಯಲ್ಲಿ 15 ಸಾವಿರ ಕಿಲೋ ಲೀಟರ್ ಲಿಕ್ವಿಡ್ ಆಕ್ಸಿಜನ್ ಸ್ಟಾಕ್ ಇದ್ದು, ಪ್ರತಿದಿನ 900 ಕೆಜಿ ಸಿಲೆಂಡರಗಳ ವ್ಯವಸ್ಥೆ ಮಾಡಲಾಗಿದೆ.
Positive Story bagalkot kumareshwara private hospital to provide free treatment to covid patients
Also Read: ಸಚಿವ ಮಾಧುಸ್ವಾಮಿ ಕರೆ ಮಾಡಿ ಹೇಳಿದ್ದರೂ ಸಿಗದ ಬೆಡ್: 28 ವರ್ಷದ ಯುವಕ ಸಾವು