AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್‌ಬುಕ್‌ ನೀಡದ ಅಂಚೆ ಕಚೇರಿ: ಒಂದೂವರೆ ತಿಂಗಳಲ್ಲಿಯೇ ನ್ಯಾಯ ಕೊಡಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ವ್ಯವಹಾರಕ್ಕೆ ಅನುಕೂಲವಾಗಲೆಂದು ವ್ಯಕ್ತಿಯೊಬ್ಬರು ಚೆಕ್​ಬುಕ್ ನೀಡಲು ಅಂಚೆ ಕಚೇರಿ ಮನವಿ ಮಾಡಿದ್ದರು. ಆದರೆ ಸಿಬ್ಬಂದಿ ಚೆಕ್​ಬುಕ್ ನೀಡಲಿಲ್ಲ. ಹೀಗಾಗಿ ಆ ವ್ಯಕ್ತಿ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು. ವಿಚಾರಣೆ ಆರಂಭಿಸಿದ ಆಯೋಗವು ಕೇವಲ ಒಂದೂವರೆ ತಿಂಗಳಲ್ಲೇ ನ್ಯಾಯ ದೊರಕಿಸಿಕೊಟ್ಟಿದೆ.

ಚೆಕ್‌ಬುಕ್‌ ನೀಡದ ಅಂಚೆ ಕಚೇರಿ: ಒಂದೂವರೆ ತಿಂಗಳಲ್ಲಿಯೇ ನ್ಯಾಯ ಕೊಡಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ಅಂಜೆ ಕಚೇರಿ ಗ್ರಾಹಕನಿಗೆ ಒಂದೂವರೆ ತಿಂಗಳಲ್ಲಿಯೇ ನ್ಯಾಯ ಕೊಡಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ (ಸಾಂದರ್ಭಿಕ ಚಿತ್ರ)
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Rakesh Nayak Manchi

Updated on:Sep 29, 2023 | 8:06 PM

ಧಾರವಾಡ, ಸೆ.29: ವ್ಯವಹಾರಕ್ಕೆ ಅನುಕೂಲವಾಗಲೆಂದು ವ್ಯಕ್ತಿಯೊಬ್ಬರು ಚೆಕ್​ಬುಕ್ ನೀಡಲು ಅಂಚೆ ಕಚೇರಿ ಮನವಿ ಮಾಡಿದ್ದರು. ಆದರೆ ಸಿಬ್ಬಂದಿ ಚೆಕ್​ಬುಕ್ ನೀಡಲಿಲ್ಲ. ಹೀಗಾಗಿ ಆ ವ್ಯಕ್ತಿ ಧಾರವಾಡ (Dharwad) ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು. ವಿಚಾರಣೆ ಆರಂಭಿಸಿದ ಆಯೋಗವು ಕೇವಲ ಒಂದೂವರೆ ತಿಂಗಳಲ್ಲೇ ನ್ಯಾಯ ದೊರಕಿಸಿಕೊಟ್ಟಿದೆ. ಆ ಮೂಲಕ ಶೀಘ್ರ ನ್ಯಾಯಾದಾನಕ್ಕೆ ಬದ್ಧವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ.

ನಗರದ ಸಾಧನಕೇರಿ ನಿವಾಸಿ ವೀರಭದ್ರಪ್ಪ ಸದಲಪುರ ಎಂಬುವರು ಕಿತ್ತೂರು ಚೆನ್ನಮ್ಮ ಪಾರ್ಕ್ ಬಳಿಯ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದ್ದರು. ವ್ಯವಹಾರಕ್ಕೆ ಅನುಕೂಲವಾಗಲು ರೂ. 48 ಭರಿಸಿ ಚೆಕ್‌ಬುಕ್‌ ನೀಡಲು ಮನವಿ ಮಾಡಿದ್ದರು. ಆದರೆ, ಅಂಚೆ ಇಲಾಖೆ ಚೆಕ್‌ಬುಕ್‌ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ವೀರಭದ್ರಪ್ಪ ಅವರು ಅಂಚೆ ಇಲಾಖೆ ಮೇಲೆ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿದ್ದರು.

ಇದನ್ನೂ ಓದಿ: ಫ್ಲಿಪ್‍ಕಾರ್ಟ್ ಮತ್ತು ಸಿಆಯ್‍ಜಿ ಎಫ್ಆಯ್‍ಎಲ್ ಲಿಮಿಟೆಡ್ ಕಂಪನಿಗೆ ರೂ.17,632 ದಂಡ ಮತ್ತು ಪರಿಹಾರ ವಿಧಿಸಿದ ಗ್ರಾಹಕರ ಆಯೋಗ

ದೂರು ವಿಚಾರಣೆ ನಡೆಸಿದ ಆಯೋಗವು, ಉಭಯತರ ಮಧ್ಯೆ ಸಂದಾನ ನಡೆಸಿತು. ಕೆವೈಸಿ ಫಾರ್ಮ್ ತುಂಬಿಕೊಟ್ಟರೆ ತಾವು ದೂರುದಾರರಿಗೆ ಚೆಕ್‌ಬುಕ್‌ ನೀಡಲು ಸಿದ್ಧ ಎಂದು ಹಾಜರಿದ್ದ ಅಂಚೆ ಕಚೇರಿ ಅಧಿಕಾರಿ ಸದಾಶಿವ ಮಾಲೂರ ಒಪ್ಪಿಕೊಂಡಿದ್ದರು.

ಕೂಡಲೇ ದೂರುದಾರನ್ನು ಕರೆದೊಯ್ದು ಅವರ ಅಗತ್ಯ ಸಹಿಗಳನ್ನು ಪಡೆದುಕೊಂಡು ಅವರಿಗೆ ಚೆಕ್‌ಬುಕ್‌ ನೀಡಲಾಯಿತು. ಈ ಮೂಲಕ ರಾಜಿ ಸಂಧಾನದ ಮೂಲಕ ಈ ಪ್ರಕರಣವನ್ನು ಒಂದೂವರೆ ತಿಂಗಳಲ್ಲಿ ಇತ್ಯರ್ಥಗೊಳಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 pm, Fri, 29 September 23

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ