AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್‌ಬುಕ್‌ ನೀಡದ ಅಂಚೆ ಕಚೇರಿ: ಒಂದೂವರೆ ತಿಂಗಳಲ್ಲಿಯೇ ನ್ಯಾಯ ಕೊಡಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ವ್ಯವಹಾರಕ್ಕೆ ಅನುಕೂಲವಾಗಲೆಂದು ವ್ಯಕ್ತಿಯೊಬ್ಬರು ಚೆಕ್​ಬುಕ್ ನೀಡಲು ಅಂಚೆ ಕಚೇರಿ ಮನವಿ ಮಾಡಿದ್ದರು. ಆದರೆ ಸಿಬ್ಬಂದಿ ಚೆಕ್​ಬುಕ್ ನೀಡಲಿಲ್ಲ. ಹೀಗಾಗಿ ಆ ವ್ಯಕ್ತಿ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು. ವಿಚಾರಣೆ ಆರಂಭಿಸಿದ ಆಯೋಗವು ಕೇವಲ ಒಂದೂವರೆ ತಿಂಗಳಲ್ಲೇ ನ್ಯಾಯ ದೊರಕಿಸಿಕೊಟ್ಟಿದೆ.

ಚೆಕ್‌ಬುಕ್‌ ನೀಡದ ಅಂಚೆ ಕಚೇರಿ: ಒಂದೂವರೆ ತಿಂಗಳಲ್ಲಿಯೇ ನ್ಯಾಯ ಕೊಡಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ಅಂಜೆ ಕಚೇರಿ ಗ್ರಾಹಕನಿಗೆ ಒಂದೂವರೆ ತಿಂಗಳಲ್ಲಿಯೇ ನ್ಯಾಯ ಕೊಡಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ (ಸಾಂದರ್ಭಿಕ ಚಿತ್ರ)
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Sep 29, 2023 | 8:06 PM

Share

ಧಾರವಾಡ, ಸೆ.29: ವ್ಯವಹಾರಕ್ಕೆ ಅನುಕೂಲವಾಗಲೆಂದು ವ್ಯಕ್ತಿಯೊಬ್ಬರು ಚೆಕ್​ಬುಕ್ ನೀಡಲು ಅಂಚೆ ಕಚೇರಿ ಮನವಿ ಮಾಡಿದ್ದರು. ಆದರೆ ಸಿಬ್ಬಂದಿ ಚೆಕ್​ಬುಕ್ ನೀಡಲಿಲ್ಲ. ಹೀಗಾಗಿ ಆ ವ್ಯಕ್ತಿ ಧಾರವಾಡ (Dharwad) ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು. ವಿಚಾರಣೆ ಆರಂಭಿಸಿದ ಆಯೋಗವು ಕೇವಲ ಒಂದೂವರೆ ತಿಂಗಳಲ್ಲೇ ನ್ಯಾಯ ದೊರಕಿಸಿಕೊಟ್ಟಿದೆ. ಆ ಮೂಲಕ ಶೀಘ್ರ ನ್ಯಾಯಾದಾನಕ್ಕೆ ಬದ್ಧವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ.

ನಗರದ ಸಾಧನಕೇರಿ ನಿವಾಸಿ ವೀರಭದ್ರಪ್ಪ ಸದಲಪುರ ಎಂಬುವರು ಕಿತ್ತೂರು ಚೆನ್ನಮ್ಮ ಪಾರ್ಕ್ ಬಳಿಯ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದ್ದರು. ವ್ಯವಹಾರಕ್ಕೆ ಅನುಕೂಲವಾಗಲು ರೂ. 48 ಭರಿಸಿ ಚೆಕ್‌ಬುಕ್‌ ನೀಡಲು ಮನವಿ ಮಾಡಿದ್ದರು. ಆದರೆ, ಅಂಚೆ ಇಲಾಖೆ ಚೆಕ್‌ಬುಕ್‌ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ವೀರಭದ್ರಪ್ಪ ಅವರು ಅಂಚೆ ಇಲಾಖೆ ಮೇಲೆ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿದ್ದರು.

ಇದನ್ನೂ ಓದಿ: ಫ್ಲಿಪ್‍ಕಾರ್ಟ್ ಮತ್ತು ಸಿಆಯ್‍ಜಿ ಎಫ್ಆಯ್‍ಎಲ್ ಲಿಮಿಟೆಡ್ ಕಂಪನಿಗೆ ರೂ.17,632 ದಂಡ ಮತ್ತು ಪರಿಹಾರ ವಿಧಿಸಿದ ಗ್ರಾಹಕರ ಆಯೋಗ

ದೂರು ವಿಚಾರಣೆ ನಡೆಸಿದ ಆಯೋಗವು, ಉಭಯತರ ಮಧ್ಯೆ ಸಂದಾನ ನಡೆಸಿತು. ಕೆವೈಸಿ ಫಾರ್ಮ್ ತುಂಬಿಕೊಟ್ಟರೆ ತಾವು ದೂರುದಾರರಿಗೆ ಚೆಕ್‌ಬುಕ್‌ ನೀಡಲು ಸಿದ್ಧ ಎಂದು ಹಾಜರಿದ್ದ ಅಂಚೆ ಕಚೇರಿ ಅಧಿಕಾರಿ ಸದಾಶಿವ ಮಾಲೂರ ಒಪ್ಪಿಕೊಂಡಿದ್ದರು.

ಕೂಡಲೇ ದೂರುದಾರನ್ನು ಕರೆದೊಯ್ದು ಅವರ ಅಗತ್ಯ ಸಹಿಗಳನ್ನು ಪಡೆದುಕೊಂಡು ಅವರಿಗೆ ಚೆಕ್‌ಬುಕ್‌ ನೀಡಲಾಯಿತು. ಈ ಮೂಲಕ ರಾಜಿ ಸಂಧಾನದ ಮೂಲಕ ಈ ಪ್ರಕರಣವನ್ನು ಒಂದೂವರೆ ತಿಂಗಳಲ್ಲಿ ಇತ್ಯರ್ಥಗೊಳಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 pm, Fri, 29 September 23

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!