AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Tariff: ಕರ್ನಾಟಕ ಜನತೆಗೆ ಕಾದಿದೆ ಕರೆಂಟ್‌ ಶಾಕ್‌, ಮತ್ತೆ ವಿದ್ಯುತ್‌ ದರ ಹೆಚ್ಚಳ ಸಾಧ್ಯತೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರ ಪರಿಷ್ಕರಣೆಗೆ ಮುಂದಾಗಿದೆ. ಇಂದು ಸಂಜೆ 4 ಗಂಟೆಗೆ ಹೊಸ ವಿದ್ಯುತ್ ದರ ಘೋಷಣೆ ಮಾಡಲಿದೆ. ಹೀಗಾಗಿ ರಾಜ್ಯದ ಜನತೆಗೆ ಇಂದೇ ಕರೆಂಟ್ ಶಾಕ್​ ಹೊಡೆಯುವ ಸಾಧ್ಯತೆ ಇದೆ. ದರ ಹೆಚ್ಚಳ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ.

Power Tariff: ಕರ್ನಾಟಕ ಜನತೆಗೆ ಕಾದಿದೆ ಕರೆಂಟ್‌ ಶಾಕ್‌, ಮತ್ತೆ ವಿದ್ಯುತ್‌ ದರ ಹೆಚ್ಚಳ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Vinayak Hanamant Gurav
| Edited By: |

Updated on:Feb 28, 2024 | 3:32 PM

Share

ಬೆಂಗಳೂರು, ಫೆಬ್ರವರಿ 28: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರ ಪರಿಷ್ಕರಣೆಗೆ ಮುಂದಾಗಿದೆ. ಇಂದು ಸಂಜೆ 4 ಗಂಟೆಗೆ ಹೊಸ ವಿದ್ಯುತ್ ದರ (Power Tariff) ಘೋಷಣೆ ಮಾಡಲಿದೆ. ಹೀಗಾಗಿ ರಾಜ್ಯದ ಜನತೆಗೆ ಇಂದೇ ಕರೆಂಟ್ ಶಾಕ್​ ಹೊಡೆಯುವ ಸಾಧ್ಯತೆ ಇದೆ. ದರ ಹೆಚ್ಚಳ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ. ಮಾರ್ಚ್‌ 1ರಿಂದ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ದರ ಹೆಚ್ಚಿಸುವಂತೆ ಐದು ಎಸ್ಕಾಂಗಳು ಮನವಿ ಮಾಡಿದ್ದವು.

ಪ್ರತಿ ವರ್ಷ ಏರ್ಪಿಲ್‌ನಲ್ಲಿ ವಿದ್ಯುತ್‌ ದರ ಪರಿಷ್ಕರಣೆ ಮಾಡಲಾಗುತ್ತಿತ್ತು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆ ಈ ಬಾರಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಗೃಹಜ್ಯೋತಿ ಯೋಜನೆ ನಡುವೆಯೂ ವಿದ್ಯುತ್‌ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ವಿದ್ಯುತ್ ಫ್ರೀ ನಡುವೆಯೇ ಜನರಿಗೆ ಕರೆಂಟ್​ ಶಾಕ್: 2023ರ ಏಪ್ರಿಲ್​ನಿಂದ ಡಿಸೆಂಬರ್ ವರೆಗೂ ವಿದ್ಯುತ್ ದರ ಹೆಚ್ಚಳ, ಎಷ್ಟೆಷ್ಟು? ಇಲ್ಲಿದೆ ವಿವರ

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಪಿ.ರವಿಕುಮಾರ್​ ಮಾತನಾಡಿ ನಷ್ಟ ಸರಿದೂಗಿಸಲು ವಿದ್ಯುತ್ ದರ ಏರಿಕೆ ಪರಿಹಾರವಲ್ಲ. ವಿದ್ಯುತ್ ಸರಬರಾಜು ಕಂಪನಿಗಳು ಇತರೆ ಮೂಲಗಳಿಂದ ಆದಾಯ ಗಳಿಸಿ ಅನಗತ್ಯ ಖರ್ಚು ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಉಚಿತ ವಿದ್ಯುತ್ ಆಸೆಯಲ್ಲಿದ್ದವರಿಗೆ ಹೆಸ್ಕಾಂ ಶಾಕ್! ದುಪ್ಪಟ್ಟು ದರದ ಬಿಲ್ ನೋಡಿ ಉತ್ತರ ಕನ್ನಡ ಜನತೆ ತಲ್ಲಣ

ದರ ಹೆಚ್ಚಿಸಿದರೆ, ಅದು ಗ್ರಾಹಕರಿಗೆ ದೊಡ್ಡ ಹೊರೆಯಾಗಲಿದೆ. ಹೆಸ್ಕಾಂ ವಿತರಣಾ ನಷ್ಟವನ್ನು ತಡೆಯಬೇಕು, ಅನಗತ್ಯ ವೆಚ್ಚಗಳನ್ನು ನಿರ್ಬಂಧಿಸಬೇಕು ಮತ್ತು ಆ ಮೂಲಕ ನಷ್ಟವನ್ನು ತಡೆಯಬೇಕು. ಅದರ ಬದಲು ನಿಯಮಿತವಾಗಿ ದರವನ್ನು ಹೆಚ್ಚಿಸಬಾರದು ಎಂದು ಅವರು ಹೆಸ್ಕಾಂ ಅಧಿಕಾರಿಗಳಿಗೆ ಸಲಹೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:16 pm, Wed, 28 February 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ