AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಮಟ್ಟ ಹರಿಯುತ್ತಿದ್ದ ಪ್ರವಾಹದಲ್ಲಿ ಈಜುತ್ತಾ, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ, ಕರ್ತವ್ಯ ಪ್ರಜ್ಞೆ ಮೆರೆದ ಪವರ್ ಮ್ಯಾನ್!

ಅಪಾಯ ಮಟ್ಟ ಮೀರಿ ಹರಿಯುವ ನದಿಯಲ್ಲಿ ಯಾರಾದ್ರೂ‌ ಜೀವ‌ ಒತ್ತೆ ಇಡ್ತಾರಾ? ಆದ್ರೆ ಇಲ್ಲೊಬ್ಬ ಪವರ್ ಮ್ಯಾನ್ ‌ಜೀವದ ಹಂಗು‌ ತೊರೆದು,‌ ಉಕ್ಕಿ ಹರಿಯುವ ನದಿಯಲ್ಲಿ ಈಜಿ ದೊಡ್ಡ ಅನಾಹುತ ತಪ್ಪಿಸಿದ್ದಾನೆ.

ಅಪಾಯಮಟ್ಟ ಹರಿಯುತ್ತಿದ್ದ ಪ್ರವಾಹದಲ್ಲಿ ಈಜುತ್ತಾ, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ, ಕರ್ತವ್ಯ ಪ್ರಜ್ಞೆ ಮೆರೆದ ಪವರ್ ಮ್ಯಾನ್!
ಅಪಾಯಮಟ್ಟ ಹರಿಯುತ್ತಿದ್ದ ಪ್ರವಾಹದಲ್ಲಿ ಈಜುತ್ತಾ, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ, ಕರ್ತವ್ಯ ಪ್ರಜ್ಞೆ ಮೆರೆದ ಪವರ್ ಮ್ಯಾನ್!
TV9 Web
| Edited By: ಸಾಧು ಶ್ರೀನಾಥ್​|

Updated on:Sep 14, 2022 | 6:28 PM

Share

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಈ ಪ್ರಸಂಗ ನಡೆದಿದೆ. ಮಲಪ್ರಭಾ ನದಿ ಉಕ್ಕಿ ಹರಿಯುತ್ತದೆ. ಹರಿವಿನ ಪ್ರಮಾಣ ಎಷ್ಟಿತ್ತೆಂದರೆ, ನದಿ ತುಂಬಿ ಸುತ್ತಲಿನ ಪ್ರದೇಶಗಳಲ್ಲಿಯೂ ನೀರು ಆವರಿಸಿಕೊಳ್ಳುತ್ತಿತ್ತು. ಈ ಸಂದರ್ಭದಲ್ಲಿ ಕೊಣ್ಣೂರ ಗ್ರಾಮಕ್ಕೆ ನೀರು ಪೂರೈಕೆಯ ಉದ್ದೇಶಕ್ಕೆ ವಿದ್ಯುತ್‌ ಸರಬರಾಜು ಮಾಡುವ ಟ್ರಾನ್ಸ್ ಫಾರ್ಮರ್ ಗಳು ಮುಳುಗುವ ಸಂದರ್ಭ ಎದುರಾಗಿತ್ತು. ಅಲ್ಲದೆ, ಈ ಸಂದರ್ಭದಲ್ಲಿ ಪ್ರಸ್ತುತ ಟ್ರಾನ್ಸಫರ್ಮರ್ ನ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಅನಿವಾರ್ಯತೆಯಿತ್ತು.

ತಕ್ಷಣವೇ ಕಾರ್ಯಪ್ರವೃತ್ತರಾದ ಈ ಭಾಗದ ಪವರ್ ಮ್ಯಾನ್ ಮಂಜುನಾಥ ಕುಂಬಾರ ಸುಮಾರು 30 ಅಡಿ ದೂರ ನೀರಿನಲ್ಲಿ ಈಜಿ ಸ್ಥಳಕ್ಕೆ ತಲುಪಿದ್ದಾರೆ. ಕೆಳಗೆ ನೆಲದಿಂದ ಒಂದಾಳು ನೀರು ತುಂಬಿತ್ತು. ಸೂಕ್ತ ಸಮಯದಲ್ಲಿ ಪ್ರಸ್ತುತ ಟ್ರಾನ್ಸಫರ್ಮರ್ ನ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಹಿಂದಿರುಗಿದ್ದಾರೆ. ಇದರಿಂದ ಇದಕ್ಕೂ ಮುಂದಿನ ಟ್ರಾನ್ಸಫರ್ಮರ್ ಕಾರ್ಯನಿರ್ವಹಿಸಲು ಪ್ರಾರಂಭಿಸುವದರಿಂದ ನೀರು ಸರಬರಾಜಿನ ವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ ಅನುವು ಮಾಡಿದ್ದಾರೆ. ಮಂಜುನಾಥರ ಈ ಕಾರ್ಯಕ್ಕೆ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಶ್ಲಾಘಿಸಿದ್ದಾರೆ.

ಕೂಡಲೇ ಈ ಟ್ರಾನ್ಸಫರ್ಮರ್ ನ ಸಂಪರ್ಕ ಕಡಿತಗೊಳಿಸದಿದ್ದರೆ, ಕುಡಿಯುವ ನೀರು ಸರಬರಾಜು ವ್ಯವಸ್ಥೆಗೆ ತೊಂದರೆಯಾಗುವಂತಿತ್ತು. ಇದರ ಸಂಪರ್ಕ ಕಡಿತಗೊಳಿಸಿದಾಗ ಮುಂದಿನ ಟ್ರಾನ್ಸಫರ್ಮರ್ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ನೀರು ಸರಬರಾಜು ಮುಂದುವರೆಯುತ್ತದೆ. ಪ್ರತಿ ಬಾರಿ ಮಳೆ ಹೆಚ್ಚಾಗಿ ನದಿ ಉಕ್ಕಿ ಹರಿದಾಗಲೂ ಈ ಸಮಸ್ಯೆ ಎದುರಾಗುತ್ತದೆ. ಆದರೆ, ಸಾರ್ವಜನಿಕರಿಗೆ ಕುಡಿಯುವ ನೀರಿನ ಸರಬರಾಜಿಗೂ ತೊಂದರೆ ಆಗಬಾರದೆಂಬುದು ಇಲಾಖೆಯ ಕಳಕಳಿ. ಹೀಗಾಗಿ ಈ ಅಪಾಯವನ್ನು ಎದುರಿಸಲು ತಯಾರಾದೆ ಅಂತ ಕೆಇಬಿ ಪವರ್ ಮ್ಯಾನ್ ಮಂಜುನಾಥ ಕುಂಬಾರ ಟಿವಿ 9 ಡಿಜಿಟಲ್ ಗೆ ಹೇಳಿದ್ದಾರೆ.

Published On - 6:27 pm, Wed, 14 September 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ