AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಮಟ್ಟ ಹರಿಯುತ್ತಿದ್ದ ಪ್ರವಾಹದಲ್ಲಿ ಈಜುತ್ತಾ, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ, ಕರ್ತವ್ಯ ಪ್ರಜ್ಞೆ ಮೆರೆದ ಪವರ್ ಮ್ಯಾನ್!

ಅಪಾಯ ಮಟ್ಟ ಮೀರಿ ಹರಿಯುವ ನದಿಯಲ್ಲಿ ಯಾರಾದ್ರೂ‌ ಜೀವ‌ ಒತ್ತೆ ಇಡ್ತಾರಾ? ಆದ್ರೆ ಇಲ್ಲೊಬ್ಬ ಪವರ್ ಮ್ಯಾನ್ ‌ಜೀವದ ಹಂಗು‌ ತೊರೆದು,‌ ಉಕ್ಕಿ ಹರಿಯುವ ನದಿಯಲ್ಲಿ ಈಜಿ ದೊಡ್ಡ ಅನಾಹುತ ತಪ್ಪಿಸಿದ್ದಾನೆ.

ಅಪಾಯಮಟ್ಟ ಹರಿಯುತ್ತಿದ್ದ ಪ್ರವಾಹದಲ್ಲಿ ಈಜುತ್ತಾ, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ, ಕರ್ತವ್ಯ ಪ್ರಜ್ಞೆ ಮೆರೆದ ಪವರ್ ಮ್ಯಾನ್!
ಅಪಾಯಮಟ್ಟ ಹರಿಯುತ್ತಿದ್ದ ಪ್ರವಾಹದಲ್ಲಿ ಈಜುತ್ತಾ, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ, ಕರ್ತವ್ಯ ಪ್ರಜ್ಞೆ ಮೆರೆದ ಪವರ್ ಮ್ಯಾನ್!
TV9 Web
| Edited By: |

Updated on:Sep 14, 2022 | 6:28 PM

Share

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಈ ಪ್ರಸಂಗ ನಡೆದಿದೆ. ಮಲಪ್ರಭಾ ನದಿ ಉಕ್ಕಿ ಹರಿಯುತ್ತದೆ. ಹರಿವಿನ ಪ್ರಮಾಣ ಎಷ್ಟಿತ್ತೆಂದರೆ, ನದಿ ತುಂಬಿ ಸುತ್ತಲಿನ ಪ್ರದೇಶಗಳಲ್ಲಿಯೂ ನೀರು ಆವರಿಸಿಕೊಳ್ಳುತ್ತಿತ್ತು. ಈ ಸಂದರ್ಭದಲ್ಲಿ ಕೊಣ್ಣೂರ ಗ್ರಾಮಕ್ಕೆ ನೀರು ಪೂರೈಕೆಯ ಉದ್ದೇಶಕ್ಕೆ ವಿದ್ಯುತ್‌ ಸರಬರಾಜು ಮಾಡುವ ಟ್ರಾನ್ಸ್ ಫಾರ್ಮರ್ ಗಳು ಮುಳುಗುವ ಸಂದರ್ಭ ಎದುರಾಗಿತ್ತು. ಅಲ್ಲದೆ, ಈ ಸಂದರ್ಭದಲ್ಲಿ ಪ್ರಸ್ತುತ ಟ್ರಾನ್ಸಫರ್ಮರ್ ನ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಅನಿವಾರ್ಯತೆಯಿತ್ತು.

ತಕ್ಷಣವೇ ಕಾರ್ಯಪ್ರವೃತ್ತರಾದ ಈ ಭಾಗದ ಪವರ್ ಮ್ಯಾನ್ ಮಂಜುನಾಥ ಕುಂಬಾರ ಸುಮಾರು 30 ಅಡಿ ದೂರ ನೀರಿನಲ್ಲಿ ಈಜಿ ಸ್ಥಳಕ್ಕೆ ತಲುಪಿದ್ದಾರೆ. ಕೆಳಗೆ ನೆಲದಿಂದ ಒಂದಾಳು ನೀರು ತುಂಬಿತ್ತು. ಸೂಕ್ತ ಸಮಯದಲ್ಲಿ ಪ್ರಸ್ತುತ ಟ್ರಾನ್ಸಫರ್ಮರ್ ನ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಹಿಂದಿರುಗಿದ್ದಾರೆ. ಇದರಿಂದ ಇದಕ್ಕೂ ಮುಂದಿನ ಟ್ರಾನ್ಸಫರ್ಮರ್ ಕಾರ್ಯನಿರ್ವಹಿಸಲು ಪ್ರಾರಂಭಿಸುವದರಿಂದ ನೀರು ಸರಬರಾಜಿನ ವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ ಅನುವು ಮಾಡಿದ್ದಾರೆ. ಮಂಜುನಾಥರ ಈ ಕಾರ್ಯಕ್ಕೆ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಶ್ಲಾಘಿಸಿದ್ದಾರೆ.

ಕೂಡಲೇ ಈ ಟ್ರಾನ್ಸಫರ್ಮರ್ ನ ಸಂಪರ್ಕ ಕಡಿತಗೊಳಿಸದಿದ್ದರೆ, ಕುಡಿಯುವ ನೀರು ಸರಬರಾಜು ವ್ಯವಸ್ಥೆಗೆ ತೊಂದರೆಯಾಗುವಂತಿತ್ತು. ಇದರ ಸಂಪರ್ಕ ಕಡಿತಗೊಳಿಸಿದಾಗ ಮುಂದಿನ ಟ್ರಾನ್ಸಫರ್ಮರ್ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ನೀರು ಸರಬರಾಜು ಮುಂದುವರೆಯುತ್ತದೆ. ಪ್ರತಿ ಬಾರಿ ಮಳೆ ಹೆಚ್ಚಾಗಿ ನದಿ ಉಕ್ಕಿ ಹರಿದಾಗಲೂ ಈ ಸಮಸ್ಯೆ ಎದುರಾಗುತ್ತದೆ. ಆದರೆ, ಸಾರ್ವಜನಿಕರಿಗೆ ಕುಡಿಯುವ ನೀರಿನ ಸರಬರಾಜಿಗೂ ತೊಂದರೆ ಆಗಬಾರದೆಂಬುದು ಇಲಾಖೆಯ ಕಳಕಳಿ. ಹೀಗಾಗಿ ಈ ಅಪಾಯವನ್ನು ಎದುರಿಸಲು ತಯಾರಾದೆ ಅಂತ ಕೆಇಬಿ ಪವರ್ ಮ್ಯಾನ್ ಮಂಜುನಾಥ ಕುಂಬಾರ ಟಿವಿ 9 ಡಿಜಿಟಲ್ ಗೆ ಹೇಳಿದ್ದಾರೆ.

Published On - 6:27 pm, Wed, 14 September 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?