AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಮಟ್ಟ ಹರಿಯುತ್ತಿದ್ದ ಪ್ರವಾಹದಲ್ಲಿ ಈಜುತ್ತಾ, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ, ಕರ್ತವ್ಯ ಪ್ರಜ್ಞೆ ಮೆರೆದ ಪವರ್ ಮ್ಯಾನ್!

ಅಪಾಯ ಮಟ್ಟ ಮೀರಿ ಹರಿಯುವ ನದಿಯಲ್ಲಿ ಯಾರಾದ್ರೂ‌ ಜೀವ‌ ಒತ್ತೆ ಇಡ್ತಾರಾ? ಆದ್ರೆ ಇಲ್ಲೊಬ್ಬ ಪವರ್ ಮ್ಯಾನ್ ‌ಜೀವದ ಹಂಗು‌ ತೊರೆದು,‌ ಉಕ್ಕಿ ಹರಿಯುವ ನದಿಯಲ್ಲಿ ಈಜಿ ದೊಡ್ಡ ಅನಾಹುತ ತಪ್ಪಿಸಿದ್ದಾನೆ.

ಅಪಾಯಮಟ್ಟ ಹರಿಯುತ್ತಿದ್ದ ಪ್ರವಾಹದಲ್ಲಿ ಈಜುತ್ತಾ, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ, ಕರ್ತವ್ಯ ಪ್ರಜ್ಞೆ ಮೆರೆದ ಪವರ್ ಮ್ಯಾನ್!
ಅಪಾಯಮಟ್ಟ ಹರಿಯುತ್ತಿದ್ದ ಪ್ರವಾಹದಲ್ಲಿ ಈಜುತ್ತಾ, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ, ಕರ್ತವ್ಯ ಪ್ರಜ್ಞೆ ಮೆರೆದ ಪವರ್ ಮ್ಯಾನ್!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 14, 2022 | 6:28 PM

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಈ ಪ್ರಸಂಗ ನಡೆದಿದೆ. ಮಲಪ್ರಭಾ ನದಿ ಉಕ್ಕಿ ಹರಿಯುತ್ತದೆ. ಹರಿವಿನ ಪ್ರಮಾಣ ಎಷ್ಟಿತ್ತೆಂದರೆ, ನದಿ ತುಂಬಿ ಸುತ್ತಲಿನ ಪ್ರದೇಶಗಳಲ್ಲಿಯೂ ನೀರು ಆವರಿಸಿಕೊಳ್ಳುತ್ತಿತ್ತು. ಈ ಸಂದರ್ಭದಲ್ಲಿ ಕೊಣ್ಣೂರ ಗ್ರಾಮಕ್ಕೆ ನೀರು ಪೂರೈಕೆಯ ಉದ್ದೇಶಕ್ಕೆ ವಿದ್ಯುತ್‌ ಸರಬರಾಜು ಮಾಡುವ ಟ್ರಾನ್ಸ್ ಫಾರ್ಮರ್ ಗಳು ಮುಳುಗುವ ಸಂದರ್ಭ ಎದುರಾಗಿತ್ತು. ಅಲ್ಲದೆ, ಈ ಸಂದರ್ಭದಲ್ಲಿ ಪ್ರಸ್ತುತ ಟ್ರಾನ್ಸಫರ್ಮರ್ ನ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಅನಿವಾರ್ಯತೆಯಿತ್ತು.

ತಕ್ಷಣವೇ ಕಾರ್ಯಪ್ರವೃತ್ತರಾದ ಈ ಭಾಗದ ಪವರ್ ಮ್ಯಾನ್ ಮಂಜುನಾಥ ಕುಂಬಾರ ಸುಮಾರು 30 ಅಡಿ ದೂರ ನೀರಿನಲ್ಲಿ ಈಜಿ ಸ್ಥಳಕ್ಕೆ ತಲುಪಿದ್ದಾರೆ. ಕೆಳಗೆ ನೆಲದಿಂದ ಒಂದಾಳು ನೀರು ತುಂಬಿತ್ತು. ಸೂಕ್ತ ಸಮಯದಲ್ಲಿ ಪ್ರಸ್ತುತ ಟ್ರಾನ್ಸಫರ್ಮರ್ ನ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಹಿಂದಿರುಗಿದ್ದಾರೆ. ಇದರಿಂದ ಇದಕ್ಕೂ ಮುಂದಿನ ಟ್ರಾನ್ಸಫರ್ಮರ್ ಕಾರ್ಯನಿರ್ವಹಿಸಲು ಪ್ರಾರಂಭಿಸುವದರಿಂದ ನೀರು ಸರಬರಾಜಿನ ವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ ಅನುವು ಮಾಡಿದ್ದಾರೆ. ಮಂಜುನಾಥರ ಈ ಕಾರ್ಯಕ್ಕೆ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಶ್ಲಾಘಿಸಿದ್ದಾರೆ.

ಕೂಡಲೇ ಈ ಟ್ರಾನ್ಸಫರ್ಮರ್ ನ ಸಂಪರ್ಕ ಕಡಿತಗೊಳಿಸದಿದ್ದರೆ, ಕುಡಿಯುವ ನೀರು ಸರಬರಾಜು ವ್ಯವಸ್ಥೆಗೆ ತೊಂದರೆಯಾಗುವಂತಿತ್ತು. ಇದರ ಸಂಪರ್ಕ ಕಡಿತಗೊಳಿಸಿದಾಗ ಮುಂದಿನ ಟ್ರಾನ್ಸಫರ್ಮರ್ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ನೀರು ಸರಬರಾಜು ಮುಂದುವರೆಯುತ್ತದೆ. ಪ್ರತಿ ಬಾರಿ ಮಳೆ ಹೆಚ್ಚಾಗಿ ನದಿ ಉಕ್ಕಿ ಹರಿದಾಗಲೂ ಈ ಸಮಸ್ಯೆ ಎದುರಾಗುತ್ತದೆ. ಆದರೆ, ಸಾರ್ವಜನಿಕರಿಗೆ ಕುಡಿಯುವ ನೀರಿನ ಸರಬರಾಜಿಗೂ ತೊಂದರೆ ಆಗಬಾರದೆಂಬುದು ಇಲಾಖೆಯ ಕಳಕಳಿ. ಹೀಗಾಗಿ ಈ ಅಪಾಯವನ್ನು ಎದುರಿಸಲು ತಯಾರಾದೆ ಅಂತ ಕೆಇಬಿ ಪವರ್ ಮ್ಯಾನ್ ಮಂಜುನಾಥ ಕುಂಬಾರ ಟಿವಿ 9 ಡಿಜಿಟಲ್ ಗೆ ಹೇಳಿದ್ದಾರೆ.

Published On - 6:27 pm, Wed, 14 September 22

ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್