AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿವರ್ಷ 2 ಲಕ್ಷ ಗೋವುಗಳ ರಕ್ಷಣೆ ಮಾಡಬೇಕಿದೆ, ಈ ಇಲಾಖೆಯಲ್ಲೇ ಮುಂದುವರೆಯುವ ಇಚ್ಛೆಯಿದೆ: ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್

ಸರ್ಕಾರದ ವತಿಯಿಂದ ಪ್ರಾಣಿ ರಕ್ಷಣೆ ಮಂಡಳಿ ಸ್ಥಾಪಿಸಿದ್ದೇವೆ. 18 ಜಿಲ್ಲೆಗಳಲ್ಲಿ 1,962 ಪಶು ಸಂಜೀವಿನಿ ಆ್ಯಂಬುಲೆನ್ಸ್​ಗಳನ್ನು ಆರಂಭಿಸಿದ್ದು ಹಳ್ಳಿಗರಿಗೆ ಸಹಕಾರಿಯಾಗಲಿದೆ. ಹೈನುಗಾರರು ಅಗತ್ಯಬಿದ್ದಲ್ಲಿ ಈ ಪಶು ಆ್ಯಂಬುಲೆನ್ಸ್​ಗಳನ್ನು ಕೂಡಲೇ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಪ್ರತಿವರ್ಷ 2 ಲಕ್ಷ ಗೋವುಗಳ ರಕ್ಷಣೆ ಮಾಡಬೇಕಿದೆ, ಈ ಇಲಾಖೆಯಲ್ಲೇ ಮುಂದುವರೆಯುವ ಇಚ್ಛೆಯಿದೆ: ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್
ಪ್ರಭು ಚೌಹಾಣ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 22, 2021 | 7:23 PM

Share

ಬೆಂಗಳೂರು: ಪ್ರತಿವರ್ಷವೂ 2 ಲಕ್ಷ ಗೋವುಗಳನ್ನು ರಕ್ಷಣೆ ಮಾಡಬೇಕು. ಇನ್ನು ಎರಡು ವರ್ಷ ಇದೇ ಇಲಾಖೆಯಲ್ಲಿ ಇರುತ್ತೇನೆ. ನನಗೆ ಬೇರೆ ಇಲಾಖೆಗಳು ಬೇಕಿಲ್ಲ. ನನಗೆ ಇದೇ ಇಲಾಖೆಯಲ್ಲೇ ಇರಬೇಕೆಂಬ ಆಸೆ ಇದೆ. ಆದರೆ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಂಡರೂ ಬದ್ಧನಾಗಿರುತ್ತೇನೆ ಎಂದು ಬೆಂಗಳೂರಿನಲ್ಲಿ ಸಚಿವ ಪ್ರಭು ಚೌಹಾಣ್​​​ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಿಂದ ಸಚಿವ ಪ್ರಭು ಚೌಹಾಣ್ ಅವರನ್ನು ಕೈಬಿಡುವ ವಿಚಾರವಾಗಿ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ಮಾಧ್ಯಮಗಳಿಗೆ ಸ್ವತಃ ಅವರೇ ಪ್ರತಿಕ್ರಿಯೆ ನೀಡಿ, ‘ನನಗೆ ಪಶು ಸಂಗೋಪನಾ ಇಲಾಖೆಯೇ ಬಹುಪ್ರಿಯ. ಇಲ್ಲೇ ಮುಂದುವರೆಯಲು ಇಚ್ಛಿಸುತ್ತೇನೆ. ಆದರೆ ಪಕ್ಷದ ಹೈಕಮಾಂಡ್ ನಿರ್ಧಾರಗಳಿಗೆ ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಪಶುಸಂಗೋಪನೆ ಇಲಾಖೆಯಲ್ಲಿ ವೈದ್ಯರ ಕೊರತೆ ವಿಚಾರವಾಗಿ 1,200 ಪಶುವೈದ್ಯರ ಅವಶ್ಯಕತೆ ಇದೆ. ಸದ್ಯ 300 ಮಂದಿಯ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕ ಕೂಡಲೇ ನೇಮಕಾತಿ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರದ ವತಿಯಿಂದ ಪ್ರಾಣಿ ರಕ್ಷಣೆ ಮಂಡಳಿ ಸ್ಥಾಪಿಸಿದ್ದೇವೆ. 18 ಜಿಲ್ಲೆಗಳಲ್ಲಿ 1,962 ಪಶು ಸಂಜೀವಿನಿ ಆ್ಯಂಬುಲೆನ್ಸ್​ಗಳನ್ನು ಆರಂಭಿಸಿದ್ದು ಹಳ್ಳಿಗರಿಗೆ ಸಹಕಾರಿಯಾಗಲಿದೆ. ಹೈನುಗಾರರು ಅಗತ್ಯಬಿದ್ದಲ್ಲಿ ಈ ಪಶು ಆ್ಯಂಬುಲೆನ್ಸ್​ಗಳನ್ನು ಕೂಡಲೇ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಗೋಹತ್ಯಾ ನಿಷೇಧ ಕಾನೂನು ಅಭಿವೃದ್ಧಿಯಾಗುತ್ತಿದೆ. ಜಾನುವಾರು ಹತ್ಯಾ ನಿಷೇಧ ಬಗ್ಗೆ ನಾನು ಕೂಡ ಎಲ್ಲಾ ಕಡೆ ಅರಿವು ಮೂಡಿಸುತ್ತಿದ್ದೇನೆ. ಪ್ರತಿ ಜಿಲ್ಲೆಗೆ ಒಂದು ಗೋಶಾಲಾ ಸ್ಥಾಪಿಸಲಾಗುವುದು. ಅಕ್ಟೋಬರ್ ಒಳಗೆ 20ರೊಳಗೆ ಗೋಶಾಲೆಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಸದ್ಯ ರಾಜ್ಯದಲ್ಲಿ 188 ಖಾಸಗಿ ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದೆ. ಜತೆಗೆ ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಪ್ರಮಾಣದ ಮೇವು ದಾಸ್ತಾನು ಇದ್ದು, ಜಿಲ್ಲಾಧಿಕಾರಿಗಳ ಜತೆ ಈ ಕುರಿತು ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಈಗಲೇ ಶಾಲೆಗಳ ಆರಂಭದಿಂದ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುವ ಸಂಭವ: ಟಾಸ್ಕ್​ಫೋರ್ಸ್ ಮುಖ್ಯಸ್ಥ ವಿ.ಕೆ.ಪೌಲ್

ಕೇಂದ್ರ ಸರ್ಕಾರದ ಕೊವಿಡ್ 19 ನಿರ್ವಹಣೆ ಬಗ್ಗೆ ಶ್ವೇತಪತ್ರ ಹೊರಡಿಸಿದ ರಾಹುಲ್​ ಗಾಂಧಿ; ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಎಂದ ಕಾಂಗ್ರೆಸ್​ ಸಂಸದ

(Prabhu Chauhan Karnataka Minister of Animal Husbandry says have desire to continue this ministry)

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ