AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿವರ್ಷ 2 ಲಕ್ಷ ಗೋವುಗಳ ರಕ್ಷಣೆ ಮಾಡಬೇಕಿದೆ, ಈ ಇಲಾಖೆಯಲ್ಲೇ ಮುಂದುವರೆಯುವ ಇಚ್ಛೆಯಿದೆ: ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್

ಸರ್ಕಾರದ ವತಿಯಿಂದ ಪ್ರಾಣಿ ರಕ್ಷಣೆ ಮಂಡಳಿ ಸ್ಥಾಪಿಸಿದ್ದೇವೆ. 18 ಜಿಲ್ಲೆಗಳಲ್ಲಿ 1,962 ಪಶು ಸಂಜೀವಿನಿ ಆ್ಯಂಬುಲೆನ್ಸ್​ಗಳನ್ನು ಆರಂಭಿಸಿದ್ದು ಹಳ್ಳಿಗರಿಗೆ ಸಹಕಾರಿಯಾಗಲಿದೆ. ಹೈನುಗಾರರು ಅಗತ್ಯಬಿದ್ದಲ್ಲಿ ಈ ಪಶು ಆ್ಯಂಬುಲೆನ್ಸ್​ಗಳನ್ನು ಕೂಡಲೇ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಪ್ರತಿವರ್ಷ 2 ಲಕ್ಷ ಗೋವುಗಳ ರಕ್ಷಣೆ ಮಾಡಬೇಕಿದೆ, ಈ ಇಲಾಖೆಯಲ್ಲೇ ಮುಂದುವರೆಯುವ ಇಚ್ಛೆಯಿದೆ: ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್
ಪ್ರಭು ಚೌಹಾಣ್ (ಸಂಗ್ರಹ ಚಿತ್ರ)
TV9 Web
| Updated By: guruganesh bhat|

Updated on: Jun 22, 2021 | 7:23 PM

Share

ಬೆಂಗಳೂರು: ಪ್ರತಿವರ್ಷವೂ 2 ಲಕ್ಷ ಗೋವುಗಳನ್ನು ರಕ್ಷಣೆ ಮಾಡಬೇಕು. ಇನ್ನು ಎರಡು ವರ್ಷ ಇದೇ ಇಲಾಖೆಯಲ್ಲಿ ಇರುತ್ತೇನೆ. ನನಗೆ ಬೇರೆ ಇಲಾಖೆಗಳು ಬೇಕಿಲ್ಲ. ನನಗೆ ಇದೇ ಇಲಾಖೆಯಲ್ಲೇ ಇರಬೇಕೆಂಬ ಆಸೆ ಇದೆ. ಆದರೆ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಂಡರೂ ಬದ್ಧನಾಗಿರುತ್ತೇನೆ ಎಂದು ಬೆಂಗಳೂರಿನಲ್ಲಿ ಸಚಿವ ಪ್ರಭು ಚೌಹಾಣ್​​​ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಿಂದ ಸಚಿವ ಪ್ರಭು ಚೌಹಾಣ್ ಅವರನ್ನು ಕೈಬಿಡುವ ವಿಚಾರವಾಗಿ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ಮಾಧ್ಯಮಗಳಿಗೆ ಸ್ವತಃ ಅವರೇ ಪ್ರತಿಕ್ರಿಯೆ ನೀಡಿ, ‘ನನಗೆ ಪಶು ಸಂಗೋಪನಾ ಇಲಾಖೆಯೇ ಬಹುಪ್ರಿಯ. ಇಲ್ಲೇ ಮುಂದುವರೆಯಲು ಇಚ್ಛಿಸುತ್ತೇನೆ. ಆದರೆ ಪಕ್ಷದ ಹೈಕಮಾಂಡ್ ನಿರ್ಧಾರಗಳಿಗೆ ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಪಶುಸಂಗೋಪನೆ ಇಲಾಖೆಯಲ್ಲಿ ವೈದ್ಯರ ಕೊರತೆ ವಿಚಾರವಾಗಿ 1,200 ಪಶುವೈದ್ಯರ ಅವಶ್ಯಕತೆ ಇದೆ. ಸದ್ಯ 300 ಮಂದಿಯ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕ ಕೂಡಲೇ ನೇಮಕಾತಿ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರದ ವತಿಯಿಂದ ಪ್ರಾಣಿ ರಕ್ಷಣೆ ಮಂಡಳಿ ಸ್ಥಾಪಿಸಿದ್ದೇವೆ. 18 ಜಿಲ್ಲೆಗಳಲ್ಲಿ 1,962 ಪಶು ಸಂಜೀವಿನಿ ಆ್ಯಂಬುಲೆನ್ಸ್​ಗಳನ್ನು ಆರಂಭಿಸಿದ್ದು ಹಳ್ಳಿಗರಿಗೆ ಸಹಕಾರಿಯಾಗಲಿದೆ. ಹೈನುಗಾರರು ಅಗತ್ಯಬಿದ್ದಲ್ಲಿ ಈ ಪಶು ಆ್ಯಂಬುಲೆನ್ಸ್​ಗಳನ್ನು ಕೂಡಲೇ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಗೋಹತ್ಯಾ ನಿಷೇಧ ಕಾನೂನು ಅಭಿವೃದ್ಧಿಯಾಗುತ್ತಿದೆ. ಜಾನುವಾರು ಹತ್ಯಾ ನಿಷೇಧ ಬಗ್ಗೆ ನಾನು ಕೂಡ ಎಲ್ಲಾ ಕಡೆ ಅರಿವು ಮೂಡಿಸುತ್ತಿದ್ದೇನೆ. ಪ್ರತಿ ಜಿಲ್ಲೆಗೆ ಒಂದು ಗೋಶಾಲಾ ಸ್ಥಾಪಿಸಲಾಗುವುದು. ಅಕ್ಟೋಬರ್ ಒಳಗೆ 20ರೊಳಗೆ ಗೋಶಾಲೆಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಸದ್ಯ ರಾಜ್ಯದಲ್ಲಿ 188 ಖಾಸಗಿ ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದೆ. ಜತೆಗೆ ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಪ್ರಮಾಣದ ಮೇವು ದಾಸ್ತಾನು ಇದ್ದು, ಜಿಲ್ಲಾಧಿಕಾರಿಗಳ ಜತೆ ಈ ಕುರಿತು ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಈಗಲೇ ಶಾಲೆಗಳ ಆರಂಭದಿಂದ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುವ ಸಂಭವ: ಟಾಸ್ಕ್​ಫೋರ್ಸ್ ಮುಖ್ಯಸ್ಥ ವಿ.ಕೆ.ಪೌಲ್

ಕೇಂದ್ರ ಸರ್ಕಾರದ ಕೊವಿಡ್ 19 ನಿರ್ವಹಣೆ ಬಗ್ಗೆ ಶ್ವೇತಪತ್ರ ಹೊರಡಿಸಿದ ರಾಹುಲ್​ ಗಾಂಧಿ; ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಎಂದ ಕಾಂಗ್ರೆಸ್​ ಸಂಸದ

(Prabhu Chauhan Karnataka Minister of Animal Husbandry says have desire to continue this ministry)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!