AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಪ್ರಕರಣ ಸಿಐಡಿಗೆ ವಹಿಸಿದ ಸರ್ಕಾರ: ಪ್ರಬುದ್ಧಾಳ ಕೇಸ್‌ ಸಿಐಡಿ ಹೆಗಲಿಗೆ

ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಕೊಲೆಯಾಗಿದ್ದ ಪ್ರಬುದ್ಧಾಳ ಪ್ರಕರಣವನ್ನು ಸರ್ಕಾರ ಸಿಐಡಿಗೆ ನೀಡಿದೆ. ಮೃತಳ ತಾಯಿ ಖುದ್ದು ಸಿಎಂ ಭೇಟಿಯಾಗಿ ಮನವಿ ಮಾಡಿದ ಹಿನ್ನೆಲೆ ಅವರ ದೂರಿನ ಮೇರೆಗೆ ಸಿಐಡಿಗೆ ವಹಿಸಲು ಡಿಜಿ&ಐಜಿಪಿ ಅಲೋಕ್ ಮೋಹನ್‌ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಮೇ 15ರಂದು ಪ್ರಕರಣ ನಡೆದಿತ್ತು.

ಮತ್ತೊಂದು ಪ್ರಕರಣ ಸಿಐಡಿಗೆ ವಹಿಸಿದ ಸರ್ಕಾರ: ಪ್ರಬುದ್ಧಾಳ ಕೇಸ್‌ ಸಿಐಡಿ ಹೆಗಲಿಗೆ
ಮತ್ತೊಂದು ಪ್ರಕರಣ ಸಿಐಡಿಗೆ ವಹಿಸಿದ ಸರ್ಕಾರ: ಪ್ರಬುದ್ಧಾಳ ಕೇಸ್‌ ಸಿಐಡಿ ಹೆಗಲಿಗೆ
Anil Kalkere
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 24, 2024 | 8:03 PM

Share

ಬೆಂಗಳೂರು, ಜೂನ್​ 24: ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್​ನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಬೆಂಗಳೂರಿನಲ್ಲಿ ಕೊಲೆಯಾಗಿದ್ದ ಪ್ರಬುದ್ಧಾಳ ಕೇಸ್‌ (Prabuddha murder case) ಸದ್ಯ ಸಿಐಡಿ ತನಿಖೆಗೆ ನೀಡಲಾಗಿದೆ. ಮೃತಳ ತಾಯಿ ಸೌಮ್ಯಾ ಅವರು ಖುದ್ದು ಸಿಎಂ ಭೇಟಿಯಾಗಿ ಮನವಿ ಮಾಡಿದ್ದರು. ಅವರ ದೂರಿನ ಮೇರೆಗೆ ಸಿಐಡಿಗೆ ವಹಿಸಲು ಡಿಜಿ&ಐಜಿಪಿ ಅಲೋಕ್ ಮೋಹನ್‌ಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.

ಸಿಎಂ ಭೇಟಿ ಬಳಿಕ ಕೊಲೆಯಾಗಿದ್ದ ಪ್ರಬುದ್ಧಾ ತಾಯಿ ಸೌಮ್ಯಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪದವಿ ಓದುತ್ತಿದ್ದ ನನ್ನ ಮಗಳನ್ನು ಯುವಕನೊಬ್ಬ ಕೊಲೆ ಮಾಡಿದ್ದಾನೆ. ಕೆಲವು ಅನುಮಾನಗಳಿದ್ದವು, ಆ ಯುವಕನಿಗೆ ಬೇಲ್ ಕೂಡ ಸಿಕ್ಕಿತ್ತು. ಆರೋಪಿಗೆ ಬೇಲ್ ಸಿಕ್ಕಿದೆ ಅಂತಾ ನಾವು ಸುಮ್ಮನಿದ್ದರೆ ಸರಿ ಹೋಗಲ್ಲ. ಹಾಗಾಗಿ ಸಿಐಡಿಗೆ ಕೊಡಬೇಕು ಅಂತಾ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ್ದೆವು ಎಂದರು.

ಇದನ್ನೂ ಓದಿ: ಬಾತ್​​ ರೂಮ್​ನ​ಲ್ಲಿ ಯುವತಿ ಶವ ಪತ್ತೆ ಕೇಸ್​: ಪ್ರಬುದ್ಧಳ ಕೈ ಕೋಯ್ದು ಕೊಲೆಗೈದ ಬಾಲಕ

ನನ್ನ ಮನವಿ ಮೇರೆಗೆ ಸಿಎಂ ಸಿದ್ದರಾಮಯ್ಯನವರು ಸಿಐಡಿಗೆ ವಹಿಸಿದ್ದಾರೆ. ಹೆಣ್ಣುಮಕ್ಕಳು ನಿರಾಕರಿಸಿದರೆ ಅವರನ್ನು ಬರ್ಬರವಾಗಿ ಹತ್ಯೆ ಮಾಡುತ್ತಾರೆ. ಸಮಾಜಕ್ಕೆ ಯಾವ ಸಂದೇಶ ಸಿಗುತ್ತಿದೆ ಅಂತಾ ನನಗೆ ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ತುಮಕೂರು: ಹಲ್ಲೆಗೆ ಯತ್ನ, ಕಳ್ಳತನದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರಿನ ಬಿ.ಎಂ.ಎಸ್. ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಬಿಬಿಎ ಮಾಡುತ್ತಿದ್ದ ಪ್ರಬುದ್ಧಳನ್ನು ಮೇ 15ರ ಸಂಜೆ ಮನೆಯಲ್ಲೇ ಭೀಕರ ಹತ್ಯೆ ಮಾಡಲಾಗಿತ್ತು. ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಮೊದಲು ಪೊಲೀಸರು ಪರಿಗಣಿಸಿದ್ದರು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ ಎಂದು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Mon, 24 June 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ