Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ನನ್ನು ಕರೆತರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ಟ್ವೀಟ್​​ನ್ನು ರಿಟ್ವೀಟ್​ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಅತ್ಯಾಚಾರಿಯನ್ನು ಏಕೆ ರಕ್ಷಿಸುತ್ತಿದ್ದೀರಿ ಪ್ರಧಾನಮಂತ್ರಿಗಳೇ? ನಿಮಗೆ ಯಾವ ರೀತಿಯ ಒತ್ತಾಯವಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರೋ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ
ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ
Follow us
ಗಂಗಾಧರ​ ಬ. ಸಾಬೋಜಿ
|

Updated on: May 23, 2024 | 8:56 PM

ಬೆಂಗಳೂರು, ಮೇ 23: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ರಕ್ಕೆ ಸ್ಪಂದನೆ ಬಾರದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡನೇ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಇದೀಗ ಅವರ ಟ್ವೀಟ್​ ಅನ್ನು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi) ರಿಟ್ವೀಟ್​ ಮಾಡಿದ್ದಾರೆ.

ಪ್ರಜ್ವಲ್​ನನ್ನು ಕರೆತರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ಟ್ವೀಟ್​​ನ್ನು ರಿಟ್ವೀಟ್​ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಅತ್ಯಾಚಾರಿಯನ್ನು ಏಕೆ ರಕ್ಷಿಸುತ್ತಿದ್ದೀರಿ ಪ್ರಧಾನಮಂತ್ರಿಗಳೇ? ನಿಮಗೆ ಯಾವ ರೀತಿಯ ಒತ್ತಾಯವಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ರಾಹುಲ್​ ಗಾಂಧಿ ಟ್ವೀಟ್​ 

ಎರಡೆರಡು ನೋಟಿಸ್ ಕೊಟ್ಟಿದ್ರು, ಲುಕ್‌ಔಟ್ ನೋಟಿಸ್ ಹೊರಡಿಸಿದ್ರು, ಬ್ಲೂಕಾರ್ನರ್‌ ಕೊಟ್ರು ಪ್ರಜ್ವಲ್‌ ಮಾತ್ರ ಪತ್ತೆಯಿಲ್ಲ. ಅಷ್ಟೇ ಯಾಕೆ ಕೋರ್ಟ್‌ ಮೂಲಕ ಅರೆಸ್ಟ್ ವಾರಂಟ್ ಅಸ್ತ್ರ ಹೂಡಿದ್ದರು. ಪ್ರಜ್ವಲ್ ಬಾರಲೇ ಇಲ್ಲ. ಹೀಗಾಗಿ ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರೋ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾಪಸ್ಸು ಬಂದು ಶರಣಾಗೆಂದು ಹೇಳುವ ದೇವೇಗೌಡರೇ ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿದ್ದು: ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರದಂಥಾ ಗಂಭೀರ ಪ್ರಕರಣವಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ದುರ್ಬಳಕೆಯಾಗುತ್ತಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದ್ರೆ ವಾಪಸ್ ಬರಲೇಬೇಕು. ಎಸ್‌ಐಟಿ ವಿಚಾರಣೆಗೆ ಪ್ರಜ್ವಲ್ ಹಾಜರಾಗಬೇಕಿದೆ. ಹೀಗಾಗಿ ಪಾಸ್‌ಪೋರ್ಟ್ ರದ್ದು ಮಾಡಿ ಅಂತಾ ಪತ್ರದ ಮೂಲಕ ಸಿಎಂ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ಎಲ್ಲಿರಬಹುದೆಂದು ಸಿಡಿ ಶಿವುಗೆ ಬಹಳ ಚೆನ್ನಾಗಿಯೇ ಗೊತ್ತಿದೆ: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್​ ಕಿಡಿ

ಸದ್ಯ ವಿದೇಶಾಂಗ ಇಲಾಖೆ ಪತ್ರ ಸ್ವೀಕರಿಸಿದ್ದು, ಮುಂದಿನ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸ್ತಿದೆ. ಪರಿಶೀಲನೆ ಬಳಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ವರದಿ: ಬ್ಯುರೋರಿಪೋರ್ಟ್ -ಸಂತೋಷ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು