AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ನನ್ನು ಕರೆತರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ಟ್ವೀಟ್​​ನ್ನು ರಿಟ್ವೀಟ್​ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಅತ್ಯಾಚಾರಿಯನ್ನು ಏಕೆ ರಕ್ಷಿಸುತ್ತಿದ್ದೀರಿ ಪ್ರಧಾನಮಂತ್ರಿಗಳೇ? ನಿಮಗೆ ಯಾವ ರೀತಿಯ ಒತ್ತಾಯವಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರೋ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ
ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ
ಗಂಗಾಧರ​ ಬ. ಸಾಬೋಜಿ
|

Updated on: May 23, 2024 | 8:56 PM

Share

ಬೆಂಗಳೂರು, ಮೇ 23: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ರಕ್ಕೆ ಸ್ಪಂದನೆ ಬಾರದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡನೇ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಇದೀಗ ಅವರ ಟ್ವೀಟ್​ ಅನ್ನು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi) ರಿಟ್ವೀಟ್​ ಮಾಡಿದ್ದಾರೆ.

ಪ್ರಜ್ವಲ್​ನನ್ನು ಕರೆತರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ಟ್ವೀಟ್​​ನ್ನು ರಿಟ್ವೀಟ್​ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಅತ್ಯಾಚಾರಿಯನ್ನು ಏಕೆ ರಕ್ಷಿಸುತ್ತಿದ್ದೀರಿ ಪ್ರಧಾನಮಂತ್ರಿಗಳೇ? ನಿಮಗೆ ಯಾವ ರೀತಿಯ ಒತ್ತಾಯವಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ರಾಹುಲ್​ ಗಾಂಧಿ ಟ್ವೀಟ್​ 

ಎರಡೆರಡು ನೋಟಿಸ್ ಕೊಟ್ಟಿದ್ರು, ಲುಕ್‌ಔಟ್ ನೋಟಿಸ್ ಹೊರಡಿಸಿದ್ರು, ಬ್ಲೂಕಾರ್ನರ್‌ ಕೊಟ್ರು ಪ್ರಜ್ವಲ್‌ ಮಾತ್ರ ಪತ್ತೆಯಿಲ್ಲ. ಅಷ್ಟೇ ಯಾಕೆ ಕೋರ್ಟ್‌ ಮೂಲಕ ಅರೆಸ್ಟ್ ವಾರಂಟ್ ಅಸ್ತ್ರ ಹೂಡಿದ್ದರು. ಪ್ರಜ್ವಲ್ ಬಾರಲೇ ಇಲ್ಲ. ಹೀಗಾಗಿ ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರೋ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾಪಸ್ಸು ಬಂದು ಶರಣಾಗೆಂದು ಹೇಳುವ ದೇವೇಗೌಡರೇ ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿದ್ದು: ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರದಂಥಾ ಗಂಭೀರ ಪ್ರಕರಣವಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ದುರ್ಬಳಕೆಯಾಗುತ್ತಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದ್ರೆ ವಾಪಸ್ ಬರಲೇಬೇಕು. ಎಸ್‌ಐಟಿ ವಿಚಾರಣೆಗೆ ಪ್ರಜ್ವಲ್ ಹಾಜರಾಗಬೇಕಿದೆ. ಹೀಗಾಗಿ ಪಾಸ್‌ಪೋರ್ಟ್ ರದ್ದು ಮಾಡಿ ಅಂತಾ ಪತ್ರದ ಮೂಲಕ ಸಿಎಂ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ಎಲ್ಲಿರಬಹುದೆಂದು ಸಿಡಿ ಶಿವುಗೆ ಬಹಳ ಚೆನ್ನಾಗಿಯೇ ಗೊತ್ತಿದೆ: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್​ ಕಿಡಿ

ಸದ್ಯ ವಿದೇಶಾಂಗ ಇಲಾಖೆ ಪತ್ರ ಸ್ವೀಕರಿಸಿದ್ದು, ಮುಂದಿನ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸ್ತಿದೆ. ಪರಿಶೀಲನೆ ಬಳಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ವರದಿ: ಬ್ಯುರೋರಿಪೋರ್ಟ್ -ಸಂತೋಷ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ