AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ನನ್ನು ಕರೆತರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ಟ್ವೀಟ್​​ನ್ನು ರಿಟ್ವೀಟ್​ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಅತ್ಯಾಚಾರಿಯನ್ನು ಏಕೆ ರಕ್ಷಿಸುತ್ತಿದ್ದೀರಿ ಪ್ರಧಾನಮಂತ್ರಿಗಳೇ? ನಿಮಗೆ ಯಾವ ರೀತಿಯ ಒತ್ತಾಯವಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರೋ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ
ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ
ಗಂಗಾಧರ​ ಬ. ಸಾಬೋಜಿ
|

Updated on: May 23, 2024 | 8:56 PM

Share

ಬೆಂಗಳೂರು, ಮೇ 23: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ರಕ್ಕೆ ಸ್ಪಂದನೆ ಬಾರದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡನೇ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಇದೀಗ ಅವರ ಟ್ವೀಟ್​ ಅನ್ನು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi) ರಿಟ್ವೀಟ್​ ಮಾಡಿದ್ದಾರೆ.

ಪ್ರಜ್ವಲ್​ನನ್ನು ಕರೆತರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ಟ್ವೀಟ್​​ನ್ನು ರಿಟ್ವೀಟ್​ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಅತ್ಯಾಚಾರಿಯನ್ನು ಏಕೆ ರಕ್ಷಿಸುತ್ತಿದ್ದೀರಿ ಪ್ರಧಾನಮಂತ್ರಿಗಳೇ? ನಿಮಗೆ ಯಾವ ರೀತಿಯ ಒತ್ತಾಯವಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ರಾಹುಲ್​ ಗಾಂಧಿ ಟ್ವೀಟ್​ 

ಎರಡೆರಡು ನೋಟಿಸ್ ಕೊಟ್ಟಿದ್ರು, ಲುಕ್‌ಔಟ್ ನೋಟಿಸ್ ಹೊರಡಿಸಿದ್ರು, ಬ್ಲೂಕಾರ್ನರ್‌ ಕೊಟ್ರು ಪ್ರಜ್ವಲ್‌ ಮಾತ್ರ ಪತ್ತೆಯಿಲ್ಲ. ಅಷ್ಟೇ ಯಾಕೆ ಕೋರ್ಟ್‌ ಮೂಲಕ ಅರೆಸ್ಟ್ ವಾರಂಟ್ ಅಸ್ತ್ರ ಹೂಡಿದ್ದರು. ಪ್ರಜ್ವಲ್ ಬಾರಲೇ ಇಲ್ಲ. ಹೀಗಾಗಿ ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರೋ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾಪಸ್ಸು ಬಂದು ಶರಣಾಗೆಂದು ಹೇಳುವ ದೇವೇಗೌಡರೇ ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿದ್ದು: ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರದಂಥಾ ಗಂಭೀರ ಪ್ರಕರಣವಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ದುರ್ಬಳಕೆಯಾಗುತ್ತಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದ್ರೆ ವಾಪಸ್ ಬರಲೇಬೇಕು. ಎಸ್‌ಐಟಿ ವಿಚಾರಣೆಗೆ ಪ್ರಜ್ವಲ್ ಹಾಜರಾಗಬೇಕಿದೆ. ಹೀಗಾಗಿ ಪಾಸ್‌ಪೋರ್ಟ್ ರದ್ದು ಮಾಡಿ ಅಂತಾ ಪತ್ರದ ಮೂಲಕ ಸಿಎಂ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ಎಲ್ಲಿರಬಹುದೆಂದು ಸಿಡಿ ಶಿವುಗೆ ಬಹಳ ಚೆನ್ನಾಗಿಯೇ ಗೊತ್ತಿದೆ: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್​ ಕಿಡಿ

ಸದ್ಯ ವಿದೇಶಾಂಗ ಇಲಾಖೆ ಪತ್ರ ಸ್ವೀಕರಿಸಿದ್ದು, ಮುಂದಿನ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸ್ತಿದೆ. ಪರಿಶೀಲನೆ ಬಳಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ವರದಿ: ಬ್ಯುರೋರಿಪೋರ್ಟ್ -ಸಂತೋಷ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!