Prajwal Revanna: ಅಶ್ಲೀಲ ವಿಡಿಯೋ ಕೇಸ್​: ಪ್ರಜ್ವಲ್ ರೇವಣ್ಣ ಎಸ್ಐಟಿ ವಶಕ್ಕೆ

34 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿಗೆ ಬಂದು ಇಳಿಯುತ್ತಿದ್ದಂತೆ ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.  

Prajwal Revanna: ಅಶ್ಲೀಲ ವಿಡಿಯೋ ಕೇಸ್​: ಪ್ರಜ್ವಲ್ ರೇವಣ್ಣ ಎಸ್ಐಟಿ ವಶಕ್ಕೆ
ಸಂಸದ ಪ್ರಜ್ವಲ್ ರೇವಣ್ಣ
Edited By:

Updated on: May 31, 2024 | 9:14 AM

ಬೆಂಗಳೂರು, ಮೇ 31: 35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು (Prajwal Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಐಎಬಿ ವಿಮಾನ ನಿಲ್ದಾಣಕ್ಕೆ ಆರೋಪಿ ಬಂದಿಳಿಯುತ್ತಿದ್ದಂತೆ ಪೊಲೀಸ್‌ ಪಡೆ ಅಲರ್ಟ್ ಆಗಿದ್ದು, ನೇರವಾಗಿ ಜೀಪ್‌ ಹತ್ತಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ, ಕೆಐಎಬಿ ಹಿಂದಿನ ಗೇಟ್ ಮೂಲಕ ಕರೆದೊಯ್ದಿದ್ದಾರೆ. ಏರ್​ಪೋರ್ಟ್​ನಿಂದ ಬೆಂಗಳೂರಿನ ಎಸ್ಐಟಿ ಕಚೇರಿಯತ್ತ ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇತ್ತ ಸಿಐಡಿ ಕಚೇರಿ ಬಳಿ ಪೊಲೀಸರು ಅಲರ್ಟ್ ಆಗಿದ್ದು, ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: Prajwal Revanna Back to Bengaluru: ಬೆಂಗಳೂರಿಗೆ ಬಂದಿಳಿದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ

ಪ್ರಜ್ವಲ್‌ ವಿರುದ್ಧ ಲುಕ್‌ಔಟ್‌ ನೋಟಿಸ್ ಇರೋದ್ರಿಂದ ಇಮಿಗ್ರೇಷನ್‌ ಅಧಿಕಾರಿಗಳೇ ಪ್ರಜ್ವಲ್‌ನನ್ನು ಮೊದಲು ವಶಕ್ಕೆ ಪಡೆದುಕೊಂಡಿದ್ದರು. ಅರೆಸ್ಟ್‌ ವಾರಂಟ್‌ ಕೂಡ ಇರೋದ್ರಿಂದ ಎಸ್‌ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಮಧ್ಯರಾತ್ರಿಯೇ ಪ್ರಜ್ವಲ್‌ನನ್ನ ವಶಕ್ಕೆ ಪಡೆದಿರುವ ಎಸ್‌ಐಟಿ ನಾಳೆ ಬೆಳಗ್ಗೆ ಆರೋಗ್ಯ ತಪಾಸಣೆ ನಡೆಸಿ ಜಡ್ಜ್‌ ಮುಂದೆ ಹಾಜರು ಪಡಿಸಲಿದ್ದು ಬಳಿಕ ತಮ್ಮ ವಶಕ್ಕೆ ಕೇಳಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಪ್ರಜ್ವಲ್ ಬಂದಿಳಿದ ಕೂಡಲೇ ಬಂಧನ: ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೊಲೀಸ್​ ಸಜ್ಜು

ಮೂರು ದಿನದ ಹಿಂದೆ ವಿಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್, ಮೇ 31 ಎಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ಮುಂದೆ ಹಾಜರಾಗೋದಾಗಿ ಹೇಳಿದ್ದರು. ಅದರಂತೆ ಇಂದು ಜರ್ಮನಿಯಿಂದ ವಿಮಾನದಲ್ಲಿ ಬಂದಿದ್ದರು. ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 4ಗಂಟೆಗೆ ಜರ್ಮನಿಯ ಮ್ಯೂನಿಕ್‌ನಿಂದ ಹೊರಟಿದ್ದ ವಿಮಾನದಲ್ಲಿ ಪ್ರಜ್ವಲ್ ಹತ್ತಿದ್ದರು. 2 ಟ್ರ್ಯಾಲಿ ಬ್ಯಾಗ್‌ ಸೇರಿದಂತೆ ಒಟ್ಟು ನಾಲ್ಕು ಬ್ಯಾಗ್‌ನೊಂದಿಗೆ ಬಂದಿರೋ ಪ್ರಜ್ವಲ್‌, ಮಧ್ಯರಾತ್ರಿ 12ಗಂಟೆ 48 ನಿಮಿಷಕ್ಕೆ ಲ್ಯಾಂಡ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:31 am, Fri, 31 May 24

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us