AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯೂನಿಕ್​ನಿಂದ ಬೆಂಗಳೂರು ವರೆಗೆ ಪ್ರಜ್ವಲ್: ಈ ಅವಧಿಯಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

Prajwal Revanna Arrest: ಪ್ರಜ್ವಲ್ ಬರುವ ವಿಚಾರ ಗೊತ್ತಾಗಿ ಬೆಂಗಳೂರಿನಲ್ಲಿ ಮಾಡಿಕೊಂಡಂಥ ಸಿದ್ಧತೆಗಳು ಹೇಗಿದ್ದವು? ಪ್ರಜ್ವಲ್ ಜರ್ಮನಿಯಿಂದ ಬೆಂಗಳೂರಿಗೆ ಬರುವ ತನಕ, ಅಂದರೆ ನಿನ್ನೆ ಇಡೀ ದಿನ ಏನೆಲ್ಲ ಘಟನಾವಳಿಗಳು ನಡೆದವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಮ್ಯೂನಿಕ್​ನಿಂದ ಬೆಂಗಳೂರು ವರೆಗೆ ಪ್ರಜ್ವಲ್: ಈ ಅವಧಿಯಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ
ಪ್ರಜ್ವಲ್ ರೇವಣ್ಣ ಬಂಧನ
ಗಣಪತಿ ಶರ್ಮಾ
|

Updated on: May 31, 2024 | 6:50 AM

Share

ಬೆಂಗಳೂರು, ಮೇ 31: ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಕೊನೆಗೂ ಬೆಂಗಳೂರಿಗೆ ಬಂದಿದ್ದು ಎಸ್​ಐಟಿ (SIT) ಅವರನ್ನು ವಶಕ್ಕೆ ಪಡೆದಿದೆ. ಹಾಗಿದ್ರೆ ಜರ್ಮನಿಯ ಮ್ಯೂನಿಕ್​ನಿಂದ ಪ್ರಜ್ವಲ್ ಪ್ರಯಾಣ ಹೇಗಿತ್ತು? ಪ್ರಜ್ವಲ್ ಬರುವ ವಿಚಾರ ಗೊತ್ತಾಗಿ ಇಲ್ಲಿ ಮಾಡಿಕೊಂಡಂಥ ಸಿದ್ಧತೆಗಳು ಹೇಗಿದ್ದವು? ಎಸ್​ಐಟಿ ಅಧಿಕಾರಿಗಳ (SIT Officials)ಮುಂದಿನ ತನಿಖೆ ದಿಕ್ಕು ಹೇಗೆ ಸಾಗಲಿದೆ ಎಂಬ ವಿವರ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದಿಳಿದು, ಎಸ್​ಐಟಿ ಅಧಿಕಾರಿಗಳ ಕೈಗೆ ಸಿಗುವ ವರೆಗೂ, ಬಂಧನಕ್ಕೊಳಗಾಗುವ ವರೆಗೂ ಯಾವುದನ್ನೂ ಪಕ್ಕಾ ಅಂತಾ ಹೇಳುವ ಸ್ಥಿತಿಯಲ್ಲಿ ಯಾರೂ ಇರಲಿಲ್ಲ. ಆದರೆ, ಈ ಬಾರಿ ಪ್ರಜ್ವಲ್​ಗೆ ಬೇರೆ ದಾರಿ ಇರಲಿಲ್ಲ. ಹೀಗಾಗಿ ಪ್ರಜ್ವಲ್ ತಾವೇ ಹೇಳಿದಂತೆ ಬಂದು ಅರೆಸ್ಟ್ ಆಗಿದ್ದಾರೆ.

  1. ಮಧ್ಯಾಹ್ನ 12 ಗಂಟೆಗೆ ಪ್ರಜ್ವಲ್ ಬರುವ ಮಾಹಿತಿ ಬೆಂಗಳೂರು ಕಮಿಷನರ್ ಜೊತೆ ಎಸ್​ಐಟಿ ಮುಖ್ಯಸ್ಥರು ಸಭೆ ನಡೆಸಿದರು.
  2. ಪ್ರಜ್ವಲ್ ರೇವಣ್ಣ ಮೊದಲೇ ಟಿಕೆಟ್ ಬುಕ್ ಮಾಡಿದ ಮಾಹಿತಿ ಅನ್ವಯ, ಫ್ಲೈಟ್ ನಿನ್ನೆ ಸಂಜೆ 4 ಗಂಟೆ ಬಳಿಕ ಟೇಕಾಫ್ ಆಗಲಿತ್ತು. ಹೀಗಾಗಿ ಮಧ್ಯಾಹ್ನವೇ ಅಲರ್ಟ್​ ಆಗಿದ್ದ ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್, 12 ಗಂಟೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ ಸಭೆ ನಡೆಸಿದ್ರು. ಪ್ರಜ್ವಲ್ ಬರ್ತಿದ್ದಂತೆ ಭದ್ರತೆ, ಅವರನ್ನ ಕರೆತರುವ ವಿಧಾನದ ಕುರಿತು ಚರ್ಚೆ ನಡೆಸಿದರು.
  3. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ಲಗೇಜ್ ಚೆಕ್​ಇನ್ ಮಾಡಲಾಗಿತ್ತು. ಸಂಜೆ 4 ಗಂಟೆ 5 ನಿಮಿಷಕ್ಕೆ ವಿಮಾನ ಟೇಕಾಫ್ ಆಯಿತು.
  4. ಪ್ರಜ್ವಲ್ ಫ್ಲೈಟ್ ಏರಿದ್ದಾರೆ ಅನ್ನೋದನ್ನ ಕನ್ಫರ್ಮ್ ಮಾಡಿಕೊಂಡಿದ್ದ ಎಸ್​ಐಟಿ ಅಧಿಕಾರಿಗಳ ಒಂದು ತಂಡ ನಿನ್ನೆ ಸಂಜೆ 4.30ಕ್ಕೆ ಕೆಂಪೇಗೌಡ ಏರ್​ಪೋರ್ಟ್​​ಗೆ ಆಗಮಿಸಿತ್ತು. ಅಲ್ದೆ ಪ್ರಜ್ವಲ್​ ಬಂಧಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗುವ 10 ಜನರಿಗೆ ಪಾಸ್ ನೀಡುವಂತೆ ಏರ್​ಪೊರ್ಟ್ ಭದ್ರತಾ ವಿಭಾಗಕ್ಕೆ ಎಸ್​ಐಟಿ ಅಧಿಕಾರಿಗಳು ಮನವಿ ಸಲ್ಲಿಸಿದ್ದರು.
  5. ಪ್ರಜ್ವಲ್ ಹೊರಟಿದ್ದು ದೃಢಪಟ್ಟಿತ್ತು. ಎಸ್​ಐಟಿ ಬಂಧನಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಂಡಿತ್ತು. ಇದೇ ವೇಳೆ ದೆಹಲಿಯಿಂದ ನಿನ್ನೆ ವಾಪಸ್ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್‌, ಇಂಟಲಿಜೆನ್ಸ್ ಎಡಿಜಿಪಿ ಶರತ್‌ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್‌ ಸಭೆಯಲ್ಲಿ ಭಾಗಿಯಾಗಿದ್ದರು. ಅರ್ಧಗಂಟೆಗಳ ಕಾಲ ಸಭೆ ನಡೆಸಿ, ಪ್ರಜ್ವಲ್ ಪ್ರಕರಣದಲ್ಲಿ ಕಾನೂನು ಹೋರಾಟಗಳ ಬಗ್ಗೆ ಮಾಹಿತಿ ನೀಡಿ ತೆರಳಿದರು.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಕೇಸ್​: ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

ಹೀಗೆ ಮಧ್ಯರಾತ್ರಿವರೆಗೂ ಕಾದು. ಪ್ರಜ್ವಲ್ ರೇವಣ್ಣ ಬರ್ತಿದ್ದಂತೆ ಅರೆಸ್ಟ್​ ಮಾಡಿ ಎಸ್​ಐಟಿ ಕಚೇರಿಗೆ ಕರೆದೊಯ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ