AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯೂನಿಕ್​ನಿಂದ ಬೆಂಗಳೂರು ವರೆಗೆ ಪ್ರಜ್ವಲ್: ಈ ಅವಧಿಯಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

Prajwal Revanna Arrest: ಪ್ರಜ್ವಲ್ ಬರುವ ವಿಚಾರ ಗೊತ್ತಾಗಿ ಬೆಂಗಳೂರಿನಲ್ಲಿ ಮಾಡಿಕೊಂಡಂಥ ಸಿದ್ಧತೆಗಳು ಹೇಗಿದ್ದವು? ಪ್ರಜ್ವಲ್ ಜರ್ಮನಿಯಿಂದ ಬೆಂಗಳೂರಿಗೆ ಬರುವ ತನಕ, ಅಂದರೆ ನಿನ್ನೆ ಇಡೀ ದಿನ ಏನೆಲ್ಲ ಘಟನಾವಳಿಗಳು ನಡೆದವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಮ್ಯೂನಿಕ್​ನಿಂದ ಬೆಂಗಳೂರು ವರೆಗೆ ಪ್ರಜ್ವಲ್: ಈ ಅವಧಿಯಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ
ಪ್ರಜ್ವಲ್ ರೇವಣ್ಣ ಬಂಧನ
Ganapathi Sharma
|

Updated on: May 31, 2024 | 6:50 AM

Share

ಬೆಂಗಳೂರು, ಮೇ 31: ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಕೊನೆಗೂ ಬೆಂಗಳೂರಿಗೆ ಬಂದಿದ್ದು ಎಸ್​ಐಟಿ (SIT) ಅವರನ್ನು ವಶಕ್ಕೆ ಪಡೆದಿದೆ. ಹಾಗಿದ್ರೆ ಜರ್ಮನಿಯ ಮ್ಯೂನಿಕ್​ನಿಂದ ಪ್ರಜ್ವಲ್ ಪ್ರಯಾಣ ಹೇಗಿತ್ತು? ಪ್ರಜ್ವಲ್ ಬರುವ ವಿಚಾರ ಗೊತ್ತಾಗಿ ಇಲ್ಲಿ ಮಾಡಿಕೊಂಡಂಥ ಸಿದ್ಧತೆಗಳು ಹೇಗಿದ್ದವು? ಎಸ್​ಐಟಿ ಅಧಿಕಾರಿಗಳ (SIT Officials)ಮುಂದಿನ ತನಿಖೆ ದಿಕ್ಕು ಹೇಗೆ ಸಾಗಲಿದೆ ಎಂಬ ವಿವರ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದಿಳಿದು, ಎಸ್​ಐಟಿ ಅಧಿಕಾರಿಗಳ ಕೈಗೆ ಸಿಗುವ ವರೆಗೂ, ಬಂಧನಕ್ಕೊಳಗಾಗುವ ವರೆಗೂ ಯಾವುದನ್ನೂ ಪಕ್ಕಾ ಅಂತಾ ಹೇಳುವ ಸ್ಥಿತಿಯಲ್ಲಿ ಯಾರೂ ಇರಲಿಲ್ಲ. ಆದರೆ, ಈ ಬಾರಿ ಪ್ರಜ್ವಲ್​ಗೆ ಬೇರೆ ದಾರಿ ಇರಲಿಲ್ಲ. ಹೀಗಾಗಿ ಪ್ರಜ್ವಲ್ ತಾವೇ ಹೇಳಿದಂತೆ ಬಂದು ಅರೆಸ್ಟ್ ಆಗಿದ್ದಾರೆ.

  1. ಮಧ್ಯಾಹ್ನ 12 ಗಂಟೆಗೆ ಪ್ರಜ್ವಲ್ ಬರುವ ಮಾಹಿತಿ ಬೆಂಗಳೂರು ಕಮಿಷನರ್ ಜೊತೆ ಎಸ್​ಐಟಿ ಮುಖ್ಯಸ್ಥರು ಸಭೆ ನಡೆಸಿದರು.
  2. ಪ್ರಜ್ವಲ್ ರೇವಣ್ಣ ಮೊದಲೇ ಟಿಕೆಟ್ ಬುಕ್ ಮಾಡಿದ ಮಾಹಿತಿ ಅನ್ವಯ, ಫ್ಲೈಟ್ ನಿನ್ನೆ ಸಂಜೆ 4 ಗಂಟೆ ಬಳಿಕ ಟೇಕಾಫ್ ಆಗಲಿತ್ತು. ಹೀಗಾಗಿ ಮಧ್ಯಾಹ್ನವೇ ಅಲರ್ಟ್​ ಆಗಿದ್ದ ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್, 12 ಗಂಟೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ ಸಭೆ ನಡೆಸಿದ್ರು. ಪ್ರಜ್ವಲ್ ಬರ್ತಿದ್ದಂತೆ ಭದ್ರತೆ, ಅವರನ್ನ ಕರೆತರುವ ವಿಧಾನದ ಕುರಿತು ಚರ್ಚೆ ನಡೆಸಿದರು.
  3. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ಲಗೇಜ್ ಚೆಕ್​ಇನ್ ಮಾಡಲಾಗಿತ್ತು. ಸಂಜೆ 4 ಗಂಟೆ 5 ನಿಮಿಷಕ್ಕೆ ವಿಮಾನ ಟೇಕಾಫ್ ಆಯಿತು.
  4. ಪ್ರಜ್ವಲ್ ಫ್ಲೈಟ್ ಏರಿದ್ದಾರೆ ಅನ್ನೋದನ್ನ ಕನ್ಫರ್ಮ್ ಮಾಡಿಕೊಂಡಿದ್ದ ಎಸ್​ಐಟಿ ಅಧಿಕಾರಿಗಳ ಒಂದು ತಂಡ ನಿನ್ನೆ ಸಂಜೆ 4.30ಕ್ಕೆ ಕೆಂಪೇಗೌಡ ಏರ್​ಪೋರ್ಟ್​​ಗೆ ಆಗಮಿಸಿತ್ತು. ಅಲ್ದೆ ಪ್ರಜ್ವಲ್​ ಬಂಧಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗುವ 10 ಜನರಿಗೆ ಪಾಸ್ ನೀಡುವಂತೆ ಏರ್​ಪೊರ್ಟ್ ಭದ್ರತಾ ವಿಭಾಗಕ್ಕೆ ಎಸ್​ಐಟಿ ಅಧಿಕಾರಿಗಳು ಮನವಿ ಸಲ್ಲಿಸಿದ್ದರು.
  5. ಪ್ರಜ್ವಲ್ ಹೊರಟಿದ್ದು ದೃಢಪಟ್ಟಿತ್ತು. ಎಸ್​ಐಟಿ ಬಂಧನಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಂಡಿತ್ತು. ಇದೇ ವೇಳೆ ದೆಹಲಿಯಿಂದ ನಿನ್ನೆ ವಾಪಸ್ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್‌, ಇಂಟಲಿಜೆನ್ಸ್ ಎಡಿಜಿಪಿ ಶರತ್‌ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್‌ ಸಭೆಯಲ್ಲಿ ಭಾಗಿಯಾಗಿದ್ದರು. ಅರ್ಧಗಂಟೆಗಳ ಕಾಲ ಸಭೆ ನಡೆಸಿ, ಪ್ರಜ್ವಲ್ ಪ್ರಕರಣದಲ್ಲಿ ಕಾನೂನು ಹೋರಾಟಗಳ ಬಗ್ಗೆ ಮಾಹಿತಿ ನೀಡಿ ತೆರಳಿದರು.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಕೇಸ್​: ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

ಹೀಗೆ ಮಧ್ಯರಾತ್ರಿವರೆಗೂ ಕಾದು. ಪ್ರಜ್ವಲ್ ರೇವಣ್ಣ ಬರ್ತಿದ್ದಂತೆ ಅರೆಸ್ಟ್​ ಮಾಡಿ ಎಸ್​ಐಟಿ ಕಚೇರಿಗೆ ಕರೆದೊಯ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ