AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pen drive Case: ದೇವರಾಜೇಗೌಡ ನನ್ನನ್ನು ಭೇಟಿಯಾಗಿದ್ದು, ಡಿಕೆ ಶಿವಕುಮಾರ್​ ಜತೆ ಪೋನ್​​ನಲ್ಲಿ ಮಾತಾಡಿದ್ದು ನಿಜ: ಶಿವರಾಮೇಗೌಡ

Prajwal Revanna Sexual Assault Case: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ ಅವರಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳಿವೆ ಎನ್ನಲಾಗಿರುವ ಪೆನ್​​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಆರೋಪ ಮಾಡಿದ್ದರು. ಇದಕ್ಕೆ ಶಿವರಾಮೇಗೌಡ ಸ್ಪಷ್ಟನೆ ನೀಡಿದ್ದಾರೆ.

Pen drive Case: ದೇವರಾಜೇಗೌಡ ನನ್ನನ್ನು ಭೇಟಿಯಾಗಿದ್ದು, ಡಿಕೆ ಶಿವಕುಮಾರ್​ ಜತೆ ಪೋನ್​​ನಲ್ಲಿ ಮಾತಾಡಿದ್ದು ನಿಜ: ಶಿವರಾಮೇಗೌಡ
ಮಾಜಿ ಸಂಸದ ಶಿವರಾಮೇಗೌಡ
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ|

Updated on:May 08, 2024 | 3:04 PM

Share

ಬೆಂಗಳೂರು, ಮೇ 08: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳಿವೆ ಎನ್ನಲಾಗಿರುವ ಪೆನ್​​ಡ್ರೈವ್​ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಪೆನ್​​​ಡ್ರೈವ್​​ ಬಿಡುಗಡೆ ಹಿಂದೆ ಮಾಜಿ ಸಂಸದ ಶಿವರಾಮೇಗೌಡ (Shivarame Gowda) ಅವರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿ, ನನಗೂ ಪೆನ್​​ಡ್ರೈವ್​ಗೂ ಯಾವುದೇ ಸಂಬಂಧ ಇಲ್ಲ. ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿಸುವಂತೆ ದೇವರಾಜೇಗೌಡ (Devarajegowda) ನನ್ನ ದುಂಬಾಲು ಬಿದ್ದೀದ್ದನು. ಆದರೂ ಕೂಡ ನನ್ನ ಹೆಸರು ಹೇಳಿದ್ದು ವಿಷಾದ ಎಂದು ಮಾಜಿ ಸಂಸದ ಶಿವರಾಮೇಗೌಡ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಾನು ಆಫೀಸ್​ನಲ್ಲಿದ್ದಾಗ ಹೊಳೆನರಸಿಪುರದ ಕೆಲವರು ಬಂದಿದ್ದರು. ಅವರು ದೇವರಾಜೇಗೌಡ ನಿಮ್ಮನ್ನು ಭೇಟಿ ಮಾಡಬೇಕು ಅಂತ ನನಗೆ ಹೇಳಿದರು. ಬಳಿಕ ಅವರು ದೇವರಾಜೇಗೌಡಗೆ ಫೋನ್​ ಮಾಡಿಕೊಟ್ಟರು. ಆಗ ನಾನು “ಏನಪ್ಪ ಚೆನ್ನಾಗಿದ್ದೀಯಾ, ನಿನ್ನ ಆಸೆ ಈಡೇರಿತು. ವರ್ಷಾನುಗಟ್ಟಲೇ ಹೋರಾಟ ಮಾಡುತ್ತಿದ್ದೆ. ಎಲ್ಲವೂ ಆಚೆಗೆ ಬಂತು” ಅಂತ ಫೋನ್​ನಲ್ಲಿ ಇಷ್ಟೇ ಮಾತನಾಡಿದ್ದೇನೆ ಎಂದು ಶಿವರಾಮೇಗೌಡ ಹೇಳಿದರು.

ಡಿಕೆ ಶಿವಕುಮಾರ್​ ಮತ್ತು ನನ್ನ ಸಂಬಂಧ ರಾಜಕೀಯಕ್ಕಿಂತ ಮಿಗಿಲಾದ ಸಂಬಂಧ. ಖಾಸಗಿ ಹೊಟೇಲ್​ನಲ್ಲಿ ನನ್ನನ್ನು ಭೇಟಿಯಾದನು. ಇಲ್ಲಿಯೂ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿಸುವಂತೆ ಹಟ ಹಿಡಿದ. ಆಗ ನಾನು ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ, ಮಾತಾಡಿದೆ. ಬಳಿಕ ನಾನು ಮಾತನಾಡಿದ್ದ ಫೋನ್ ಅನ್ನೇ ದೇವರಾಜೇಗೌಡಗೆ ಕೊಟ್ಟೆ. ಆಗ ಡಿಕೆ ಶಿವಕುಮಾರ್ ಅವರು “ಹೇಗಿದ್ದೀಯಾ ದೇವರಾಜೇಗೌಡ, ಹೋರಾಟ ಹೇಗೆ ನಡೆಯುತ್ತಿದೆ” ಎಂದರು. ಬಳಿಕ ದೇವರಾಜೇಗೌಡ ಡಿಕೆ ಶಿವಕುಮಾರ್ ಅವರ ಜೊತೆ 1:30 ನಿಮಿಷ ಮಾತಾಡಿದ. ಆಗ ಡಿಕೆ ಶಿವಕುಮಾರ್ ಅವರು ನಿನ್ನ ಹತ್ತಿರ ಏನಿದೆ ಎಸ್​ಐಟಿಗೆ ಕೊಡು ಅಂತ ದೇವರಾಜೇಗೌಡಗೆ ಹೇಳಿದರು, ಇಷ್ಟೇ ನಡೆದ ಸಂಭಾಷಣೆ ಎಂದು ಶಿವರಾಮೇಗೌಡ ತಿಳಿಸಿದರು. ​

ಇದನ್ನೂ ಓದಿ: ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್​ಗೆ ಬಿಗ್ ಟ್ವಿಸ್ಟ್: ಗೊಂದಲದ ಹೇಳಿಕೆ ನೀಡುತ್ತಿರುವ ಸಂತ್ರಸ್ತೆ

ನನಗೂ ಹಾಗೂ ಕಾರ್ತಿಕ್​ಗೌಡಗೂ ಪರಿಚಯವೇ ಇಲ್ಲ. ನನಗೆ ಗೊತ್ತಿರುವುದು ವಕೀಲ ದೇವರಾಜೇಗೌಡ ಅಷ್ಟೆ. ಇಷ್ಟೆಲ್ಲ ಆದಮೇಲೆ ಅವನ ಸಹವಾಸವೇ ಬೇಡಪ್ಪ. ಅವನನ್ನು ಪಕ್ಷದಿಂದ ಹೊರಹಾಕಬೇಕು. ಪೆನ್​ಡ್ರೈವ್ ರುವಾರಿಗಳು ದೇವರಾಜೇಗೌಡ, ಕಾರ್ತಿಕ್ ಗೌಡ. ಇವರಿಬ್ಬರ ಬಗ್ಗೆ ಎಸ್ಐಟಿ ತನಿಖೆ ನಡೆಸಿ ಕ್ರಮಕೈಗೊಳ್ಳಲಿ ಎಂದು ಮಾಜಿ ಸಂಸದ ಶಿವರಾಮೇಗೌಡ ಆಗ್ರಹಿಸಿದರು.

ದೇವರಾಜೇಗೌಡ ಆರೋಪ

ಪೆನ್​ಡ್ರೈವ್ ಪ್ರಕರಣದ ಹಿಂದಿನ ರೂವಾರಿ ಬೇರೆ ಯಾರೂ ಅಲ್ಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್. ಪೆನ್​ಡ್ರೈವ್ ಹಂಚಿಕೆ ಮಾಡೋ ಗೇಮ್ ಪ್ಲ್ಯಾನಿಂಗ್ ಸಿದ್ದರಾಮಯ್ಯ ಸರ್ಕಾರದ್ದು. ಕಾಂಗ್ರೆಸ್ ಸರ್ಕಾರ ನಿಜವಾದ ಆರೋಪಿಗಳನ್ನು ಬಚ್ಚಿಟ್ಟುಕೊಂಡಿದೆ. ಸಂತೃಸ್ತರಿಗೆ ಹಣ ಕೊಟ್ಟುಕರ್ಕೊಂಡು ಬಂದಿದ್ದಾರೆ. ಎಲ್ ಆರ್ ಶಿವರಾಮೇಗೌಡರನ್ನು ಮಧ್ಯವರ್ತಿಯಾಗಿ ಕಳುಹಿಸಲಾಗಿದೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ ಮಾಡಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Wed, 8 May 24

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್