AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್​ಡ್ರೈವ್​ ಪ್ರಕರಣದಲ್ಲಿ ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಅವರದ್ದೂ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಇದಾದ ಬಳಿಕ ಆಡಿಯೋ ಸಂಭಾಷಣೆಯೊಂದರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ
ಎಲ್​ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on: May 20, 2024 | 10:19 AM

Share

ಬೆಂಗಳೂರು, ಮೇ 20: ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಪೆನ್​ಡ್ರೈಪ್ (Pen Drive)​ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Devegowda) ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎನ್ನಲಾಗಿರುವ ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ (LR Shivaramegowda) ಅವರ ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನಿಸಲಾಗಿದೆ.

ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳು ಪೊಲೀಸರನ್ನು ಕಂಡು ಅವರ ಕಣ್ಣು ತಪ್ಪಿಸಿ ಎಲ್​ಆರ್ ಶಿವರಾಮೇಗೌಡ ಮನೆ ಮುಂದೆ 5-6 ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಮೊಟ್ಟೆ ಎಸೆಯಲು ಯತ್ನಿಸಿ ಪರಾರಿ ಆದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ವಿಷ್ಯುವಲ್ಸ್ ಆಧರಿಸಿ ಹುಡುಕಾಟ ನಡೆಸಿದ್ದಾರೆ. ಮೊಟ್ಟೆ ಎಸೆದು ಹೋದ ಬಳಿಕ ಪೊಲೀಸರು ಎಲ್​ಆರ್​​ ಶಿವರಾಮೇಗೌಡ ಮನೆ ರಸ್ತೆಯ ಎರಡು ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದಾರೆ.

ಇದನ್ನೂ ಓದಿ: ಪೆನ್​ಡ್ರೈವ್​ ಕೇಸ್: ಶಿವರಾಮೇಗೌಡ, ದೇವರಾಜೇಗೌಡ, ಡಿಕೆಶಿ ​ಸೀಕ್ರೆಟ್ ಆಡಿಯೋ​ ವೈರಲ್

ಜೆಡಿಎಸ್​ ಪ್ರತಿಭಟನೆ

ಆಡಿಯೋ ಸಂಭಾಷಣೆಯೊಂದರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಬಗ್ಗೆ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಇದನ್ನು ಖಂಡಿಸಿ ಇಂದು (ಮೇ 20) ಜೆಡಿಎಸ್ ನಾಯಕರು ಬೃಹತ್​ ಪ್ರತಿಭಟನೆ ಮಾಡಲಿದ್ದಾರೆ.

ಎಲ್​.ಆರ್​. ಶಿವರಾಮೇಗೌಡರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆಗೊಳಪಡಿಸಬೇಕು. ಪೆನ್​​ಡ್ರೈವ್​ ಕೇಸ್ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿ ಬೆಳಗ್ಗೆ 11ಕ್ಕೆ ಬೆಂಗಳೂರಿನ ಫ್ರೀಡಂಪಾರ್ಕ್​​​ನಲ್ಲಿ ಧರಣಿ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ