AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್​ಡ್ರೈವ್​ ಪ್ರಕರಣದಲ್ಲಿ ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಅವರದ್ದೂ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಇದಾದ ಬಳಿಕ ಆಡಿಯೋ ಸಂಭಾಷಣೆಯೊಂದರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ
ಎಲ್​ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ
ರಾಚಪ್ಪಾಜಿ ನಾಯ್ಕ್
| Edited By: |

Updated on: May 20, 2024 | 10:19 AM

Share

ಬೆಂಗಳೂರು, ಮೇ 20: ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಪೆನ್​ಡ್ರೈಪ್ (Pen Drive)​ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Devegowda) ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎನ್ನಲಾಗಿರುವ ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ (LR Shivaramegowda) ಅವರ ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನಿಸಲಾಗಿದೆ.

ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳು ಪೊಲೀಸರನ್ನು ಕಂಡು ಅವರ ಕಣ್ಣು ತಪ್ಪಿಸಿ ಎಲ್​ಆರ್ ಶಿವರಾಮೇಗೌಡ ಮನೆ ಮುಂದೆ 5-6 ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಮೊಟ್ಟೆ ಎಸೆಯಲು ಯತ್ನಿಸಿ ಪರಾರಿ ಆದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ವಿಷ್ಯುವಲ್ಸ್ ಆಧರಿಸಿ ಹುಡುಕಾಟ ನಡೆಸಿದ್ದಾರೆ. ಮೊಟ್ಟೆ ಎಸೆದು ಹೋದ ಬಳಿಕ ಪೊಲೀಸರು ಎಲ್​ಆರ್​​ ಶಿವರಾಮೇಗೌಡ ಮನೆ ರಸ್ತೆಯ ಎರಡು ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದಾರೆ.

ಇದನ್ನೂ ಓದಿ: ಪೆನ್​ಡ್ರೈವ್​ ಕೇಸ್: ಶಿವರಾಮೇಗೌಡ, ದೇವರಾಜೇಗೌಡ, ಡಿಕೆಶಿ ​ಸೀಕ್ರೆಟ್ ಆಡಿಯೋ​ ವೈರಲ್

ಜೆಡಿಎಸ್​ ಪ್ರತಿಭಟನೆ

ಆಡಿಯೋ ಸಂಭಾಷಣೆಯೊಂದರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಬಗ್ಗೆ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಇದನ್ನು ಖಂಡಿಸಿ ಇಂದು (ಮೇ 20) ಜೆಡಿಎಸ್ ನಾಯಕರು ಬೃಹತ್​ ಪ್ರತಿಭಟನೆ ಮಾಡಲಿದ್ದಾರೆ.

ಎಲ್​.ಆರ್​. ಶಿವರಾಮೇಗೌಡರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆಗೊಳಪಡಿಸಬೇಕು. ಪೆನ್​​ಡ್ರೈವ್​ ಕೇಸ್ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿ ಬೆಳಗ್ಗೆ 11ಕ್ಕೆ ಬೆಂಗಳೂರಿನ ಫ್ರೀಡಂಪಾರ್ಕ್​​​ನಲ್ಲಿ ಧರಣಿ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Follow Us
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ