AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ವಿಡಿಯೋ ಕೇಸ್​: ದೇವರಾಜೇಗೌಡ, ಕಾರ್ತಿಕ್​ ಗೌಡಗೆ ಮತ್ತೆ SIT ನೋಟಿಸ್​

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಮತ್ತು ಪ್ರಜ್ವಲ್​ ಮಾಜಿ ಕಾರು ಚಾಲಕ ಕಾರ್ತಿಕ್​ ಗೌಡಗೆ SIT ಮತ್ತೆ ನೋಟಿಸ್​ ನೀಡಿದೆ. ಇತ್ತೀಚೆಗೆ ಕೆಲ ದಾಖಲೆ ಬಿಡುಗಡೆ ಮಾಡಿದ್ದ ದೇವರಾಜೇಗೌಡ, ಕೆಲವರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹೀಗಾಗಿ ತಮ್ಮ ಬಳಿ ಇರುವ ದಾಖಲೆಗಳನ್ನು ತರುವಂತೆ ಎಸ್​ಐಟಿ ಸೂಚನೆ ನೀಡಿದೆ.

ಪ್ರಜ್ವಲ್ ವಿಡಿಯೋ ಕೇಸ್​: ದೇವರಾಜೇಗೌಡ, ಕಾರ್ತಿಕ್​ ಗೌಡಗೆ ಮತ್ತೆ SIT ನೋಟಿಸ್​
ಪ್ರಜ್ವಲ್ ವಿಡಿಯೋ ಕೇಸ್​: ದೇವರಾಜೇಗೌಡ, ಕಾರ್ತಿಕ್​ ಗೌಡಗೆ ಮತ್ತೆ SIT ನೋಟಿಸ್​
ಗಂಗಾಧರ​ ಬ. ಸಾಬೋಜಿ
|

Updated on:May 09, 2024 | 9:24 AM

Share

ಬೆಂಗಳೂರು, ಮೇ 09: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬಹಿರಂಗವಾಗಿ ಒಂದಷ್ಟು ದಾಖಲೆ ಬಿಡುಗಡೆ ಮಾಡಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ (Devarajegowda) ಇದೀಗ ಮತ್ತೊಂದು ಸಂಕಷ್ಟು ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ಮತ್ತೊಮ್ಮೆ ನೋಟಿಸ್​ ನೀಡಿದೆ. ಆ ಮೂಲಕ ದೇವರಾಜೇಗೌಡಗೆ SIT ಉರುಳು ಸುತ್ತಿಕೊಳ್ಳತ್ತಿದ್ಯಾಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಮತ್ತೊಂದು ಕಡೆ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡಗೂ ನೋಟಿಸ್ ನೀಡಲಾಗಿದೆ.

ದೇವರಾಜೇಗೌಡ ಇತ್ತೀಚೆಗೆ ಒಂದಷ್ಟು ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ಮಾಧ್ಯಮಗಳ ಮುಂದೆ ಕೆಲವರ ವಿರುದ್ದ ಗಂಭೀರ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಎಸ್ಐಟಿಯಿಂದ ದೇವರಾಜೇಗೌಡಗೆ ನೊಟೀಸ್​ ನೀಡಿದ್ದು, ತಮ್ಮ ಬಳಿ ಇರುವ ಮತ್ತಷ್ಟು ಸಾಕ್ಷ್ಯಾಧಾರಗಳು, ಫೋಟೋಸ್, ಆಡಿಯೋ ತರಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ದೇವರಾಜೇಗೌಡರ ಪ್ರಕಾರ ಪೆನ್ ಡ್ರೈವ್ ಕೇಸಲ್ಲಿ ಕಾಂಗ್ರೆಸ್ ಟಾರ್ಗೆಟ್ ಯಾರು ಗೊತ್ತಾ?

ಮತ್ತೊಂದು ಕಡೆ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ  ಕಾರ್ತಿಕ್ ಗೌಡಗೂ ನೋಟಿಸ್​ ನೀಡಲಾಗಿದೆ. ಹೀಗಾಗಿ ಇಬ್ಬರನ್ನೂ ಎಸ್ಐಟಿ ಮತ್ತೊಂದು ಸುತ್ತಿನ ತೀವ್ರ ವಿಚಾರಣೆ ಮಾಡಲಿದ್ದಾರೆ.

ನಿನ್ನೆ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ದೇವರಾಜೇಗೌಡ, ಈ ಪ್ರಕರಣದ ಸೂತ್ರಧಾರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಈ ವಿಚಾರವಾಗಿ ಬಹಿರಂಗ ಚರ್ಚೆಗೂ ಡಿಕೆ ಶಿವಕುಮಾರ್​ನ್ನು ಆಹ್ವಾನಿಸಿದ್ದರು. ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್​ ತಮ್ಮನ್ನು ಭೇಟಿಯಾಗಿದ್ದು ಹಾಗೂ ಡಿಕೆ ಶಿವಕುಮಾರ್ ಅವರು ತಮಗೆ ಆಮಿಷವೊಡ್ಡಿದ ಸಂಭಾಷಣೆಯ ಆಡಿಯೋವನ್ನು ದೇವರಾಜೇಗೌಡ ಬಿಡುಗಡೆ ಮಾಡಿದ್ದರು. ಹಾಗೇ ಸಿಐಟಿ ತಂಡದ ಮೇಲೂ ಸಹ ಗಂಭೀರ ಆರೋಪಗಳನ್ನು ಮಾಡಿದ್ದು, ಈ ಬಗ್ಗೆ ಸಿಬಿಐ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ವಿಡಿಯೋ ಕೇಸ್​: ಪೆನ್​ಡ್ರೈವ್ ಕಥಾ ನಾಯಕರೇ ಕಾಂಗ್ರೆಸ್ ಅಧ್ಯಕ್ಷರು, ಡಿಕೆಶಿ ಆಡಿಯೋ ರಿಲೀಸ್

ಈ ನಡುವೆ ಪ್ರಜ್ವಲ್ ಪೆನ್​ಡ್ರೈವ್ ರಿಲೀಸ್ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಹಾಸನದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ, ಪುಟ್ಟರಾಜು, ನವೀನ್ ಹಾಗೂ ಚೇತನ್ ನಿರೀಕ್ಷಣಾ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜೊತೆ ಕಾರ್ತಿಕ್ ಇರುವ ಫೋಟೋಗಳನ್ನ ಜೆಡಿಎಸ್ ರಿಲೀಸ್ ಮಾಡಿದೆ.

ವರದಿ: ಪ್ರದೀಪ್​ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:12 am, Thu, 9 May 24

ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು