AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್​ಡಿ ರೇವಣ್ಣ

ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ. ಅರ್ಜಿ ಹಿಂಪಡೆಯಲು ಕಾರಣವೇನು? ಬಂಧನ ಭೀತಿಯಿಂದ ತಪ್ಪಿಸಿಕೊಂಡರಾ ರೇವಣ್ಣ? ಇಲ್ಲಿದೆ ಮಾಹಿತಿ

ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್​ಡಿ ರೇವಣ್ಣ
ಹೆಚ್​ಡಿ ರೇವಣ್ಣ
Ramesha M
| Edited By: |

Updated on:May 03, 2024 | 12:42 PM

Share

ಬೆಂಗಳೂರು, ಮೇ 3: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು (Anticipatory Bail Plea) ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ (HD Revanna) ಶುಕ್ರವಾರ ಹಿಂಪಡೆದಿದ್ದಾರೆ. ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪ ಸೇರಿಸಿಲ್ಲ ಎಂಬ ವಿಶೇಷ ತನಿಖಾ ತಂಡದ ಹೇಳಿಕೆ ಬೆನ್ನಲ್ಲೇ ರೇವಣ್ಣ ಈ ಕ್ರಮ ಕೈಗೊಂಡಿದ್ದಾರೆ. ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪವಿಲ್ಲದಿರುವುದರಿಂದ ನಿರೀಕ್ಷಣಾ ಜಾಮೀನು ಅಗತ್ಯವಿಲ್ಲ ಎಂದು ಎಸ್​ಐಟಿಯ ಎಸ್​​​ಪಿಪಿ ಎನ್. ಜಗದೀಶ್ ಕೋರ್ಟ್​​ಗೆ ತಿಳಿಸಿದ್ದರು.

ಈ ದಿನದವರೆಗೆ ರೇವಣ್ಣ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಿಸಿಲ್ಲ ಎಂದು ಎನ್. ಜಗದೀಶ್ ಕರ್ನಾಟಕ ಹೈಕೋರ್ಟ್​​ಗೆ ನೀಡಿದ್ದ ಮಾಹಿತಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದಾಖಲಿಸಿಕೊಂಡಿತು. ನಂತರ ರೇವಣ್ಣ ಅರ್ಜಿ ವಾಪಸ್ ಪಡೆದರು.

ಈ ಮಧ್ಯೆ, ಮಹಿಳೆಯೊಬ್ಬರು ಕಾಣೆಯಾಗಿರುವ ವಿಚಾರವಾಗಿ ರೇವಣ್ಣ ವಿರುದ್ಧ ಮೈಸೂರಿನ ಕೆಆರ್​ ನಗರದಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ, ಮೈಸೂರಿನಲ್ಲಿಯೂ ಕೇಸ್ ದಾಖಲು

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬಹಿರಂಗವಾಗುತ್ತಿದ್ದಂತೆಯೇ ರೇವಣ್ಣಗೆ ಸಂಕಷ್ಟ ಶುರುವಾಗಿದೆ. ಈ ಮಧ್ಯೆ, ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗಲು ರೇವಣ್ಣ ಕಾಲಾವಕಾಶ ಕೇಳಿದ್ದಾರೆ. ಮತ್ತೊಂದೆಡೆ, ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರವೇ ತಿಳಿಸಿದ್ದಾರೆ. ಈ ಮಧ್ಯೆ, ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಅವರನ್ನು ಕರೆತಂದು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Fri, 3 May 24

Follow Us
Ramesha M
Ramesha M
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು