AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಟಿ ಅಧಿಕಾರಿಗಳಿಂದ ಸಾಲು ಸಾಲು ಪ್ರಶ್ನೆ: ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ ಎಂದ ರೇವಣ್ಣ

ಎಸ್​​ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡದ ರೇವಣ್ಣ, ಕಿಡ್ನ್ಯಾಪ್​​ಗೂ ನನಗೂ ಸಂಬಂಧವಿಲ್ಲ. ಕಿಡ್ನ್ಯಾಪ್ ಮಾಡಿ ಅಂತಾ ಯಾರಿಗೂ ಹೇಳಿಲ್ಲ ಎಂದಿದ್ದಾರೆ. ಜತೆಗೆ, ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ಹಿಂದೇಟು ಹಾಕಿದ್ದಾರೆ. ಇನ್ನು, ರೇವಣ್ಣ ಎಸ್​ಐಟಿ ಕಸ್ಟಡಿ ವೇಳೆಯಲ್ಲಿ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಎಸ್​ಐಟಿ ಅಧಿಕಾರಿಗಳಿಂದ ಸಾಲು ಸಾಲು ಪ್ರಶ್ನೆ: ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ ಎಂದ ರೇವಣ್ಣ
ಹೆಚ್​ಡಿ ರೇವಣ್ಣ
TV9 Web
| Edited By: |

Updated on: May 06, 2024 | 2:37 PM

Share

ಬೆಂಗಳೂರು, ಮೇ 6: ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಕೇಸ್​ನಲ್ಲಿ (Kidnap Case) ಎಸ್​ಐಟಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ (HD Revanna) ವಿಚಾರಣೆ ತೀವ್ರಗೊಂಡಿದೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮನೆಯಿಂದ ರೇವಣ್ಣರನ್ನು ಬಂಧಿಸಿದ್ದ ಎಸ್​ಐಟಿ (SIT) ನಿನ್ನೆ ಸಂಜೆ ಜಡ್ಜ್ ಎದುರು ಹಾಜರುಪಡಿಸಿತ್ತು. ಈ ವೇಳೆ ರಾಜಕೀಯ ಭವಿಷ್ಯವನ್ನು ನೆನಪಿಸಿಕೊಂಡು ರೇವಣ್ಣ ಕೈ ಮುಗಿದು ಕಣ್ಣೀರು ಹಾಕಿದ್ದರು. ರಾಜಕೀಯ ಷಡ್ಯಂತ್ರ ನಡೆಸಿ ನನ್ನ ಬಂಧನವಾಗಿದೆ ಅಂತ ಅಳಲು ತೋಡಿಕೊಂಡಿದ್ದರು. ಸದ್ಯ 4 ದಿನಗಳ ಕಾಲ ಎಸ್​ಐಟಿ ಕಸ್ಟಡಿಯಲ್ಲಿರುವ ರೇವಣ್ಣಗೆ ಎಸ್​​ಐಟಿ ಅಧಿಕಾರಿಗಳು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

ಮಹಿಳೆಯನ್ನು ಬಲವಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದರು ಎಂದು ಎಸ್​ಐಟಿ ಹೇಳಿಕೆ ದಾಖಲಿಸಿಕೊಂಡಿದೆ. ಆದ್ರೆ, ಎಸ್​​ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡದ ರೇವಣ್ಣ, ಕಿಡ್ನ್ಯಾಪ್​​ಗೂ ನನಗೂ ಸಂಬಂಧವಿಲ್ಲ. ಕಿಡ್ನ್ಯಾಪ್ ಮಾಡಿ ಅಂತಾ ಯಾರಿಗೂ ಹೇಳಿಲ್ಲ ಅಂತಾ ಒಂದೇ ಉತ್ತರ ನೀಡಿದ್ದಾರೆ.

ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ರೇವಣ್ಣ ಹಿಂದೇಟು

ಇಷ್ಟೇ ಅಲ್ಲ ನನಗೂ ಕಿಡ್ನ್ಯಾಪ್​ಗೂ ಸಂಬಂಧವಿಲ್ಲ ಎಂದಿರುವ ರೇವಣ್ಣ, ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ಹಿಂದೇಟು ಹಾಕಿದ್ದಾರೆ. ಮಹಿಳೆ ಕಿಡ್ನ್ಯಾಪ್ ಕೇಸ್​​ನಲ್ಲಿ ಬಂಧನವಾಗಿರುವ ರೇವಣ್ಣ ಕಸ್ಟಡಿ ವೇಳೆಯಲ್ಲಿ ರೇವಣ್ಣ ಬೇಲ್ ಅರ್ಜಿ ಸಲ್ಲಿಸಬಹುದು. ಕಸ್ಟಡಿ ಅವಧಿ ಮುಗಿದ ಬಳಿಕವೇ ಬೇಲ್ ಬಗ್ಗೆ ತೀರ್ಮಾನವಾಗಲಿದೆ. ಕಸ್ಟಡಿ ಅವಧಿ ನಂತರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್​ಐಟಿ ಸಿದ್ಧತೆ ಮಾಡಿಕೊಂಡಿದೆ. ಬೇಲ್ ಅರ್ಜಿಗೆ ಎಸ್​ಐಟಿ ಆಕ್ಷೇಪಣೆಯನ್ನು ಕೋರ್ಟ್ ಪರಿಗಣಿಸಲಿದೆ. ಎರಡೂ ಕಡೆ ವಾದಮಂಡನೆ ನಂತರವೇ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ಈ ಎಲ್ಲ ಪ್ರಕ್ರಿಯೆಯು ಕನಿಷ್ಠ ಒಂದು ವಾರ ನಡೆಯಬಹುದು. ಬೇಲ್ ಸಿಕ್ಕರೆ ಸೆರೆವಾಸದಿಂದ ರೇವಣ್ಣ ರಿಲೀಸ್ ಆಗ್ತಾರೆ. ಅಕಸ್ಮಾತ್ ಜನಪ್ರತಿನಿಧಿಗಳ ಕೋರ್ಟ್​ನಲ್ಲಿ ಬೇಲ್ ಸಿಗದಿದ್ದರೆ ರೇವಣ್ಣ ಹೈಕೋರ್ಟ್ ಮೊರೆ ಹೋಗಬಹುದು. ಹೈಕೋರ್ಟ್ ನಲ್ಲೂ ಬೇಲ್ ಸಿಗದಿದ್ದರೆ ಸುಪ್ರೀಂಗೆ ಮೊರೆ ಹೋಗಬಹುದು. ಆದ್ರೆ ಜಾಮೀನು ಸಿಗುವವರೆಗೆ ರೇವಣ್ಣ ಬಂಧನದಲ್ಲಿರಬೇಕಾಗಿದೆ.

ಬಧನದ ಬಳಿಕ ಮಾನಸಿಕವಾಗಿ ಕುಗ್ಗಿರುವ ರೇವಣ್ಣ

ಎಸ್​ಐಟಿ ಬಂಧನದ ಬಳಿಕ ರೇವಣ್ಣ ಮಾನಸಿಕವಾಗಿ ಕುಗ್ಗಿದ್ದಾರೆ. ಪ್ರತಿದಿನ 9.30ರಿಂದ 10.30ರ ಸಮಯದಲ್ಲಿ ಒಂದು ಗಂಟೆ ವಕೀಲರ ಭೇಟಿಗೆ ಅವಕಾಶ ಇದೆ. ವಕೀಲರ ಭೇಟಿಗೆ ಅವಕಾಶ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಇಂದು ಸಿಐಡಿ ಎಸ್​ಐಟಿ ಕಚೇರಿಯಲ್ಲಿ ಭೇಟಿಗೆ ಅನುವು ಮಾಡಿಕೊಡಲಾಗಿದೆ.

ಇನ್ನು ಹೊಳೆನರಸೀಪುರದಲ್ಲಿ ದೂರು ನೀಡಿದ್ದ ಸಂತ್ರಸ್ತ ಮಹಿಳೆಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ಮಾಡಲಾಯ್ತು. ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಪಟ್ಟಂತೆ ಸಂತ್ರಸ್ತೆಯಿಂದ ಎಸ್​ಐಟಿ ಅಧಿಕಾರಿಗಳು ಹೇಳಿಕೆ ದಾಖಲು ಮಾಡಿದ್ರು. ಸಂತ್ರಸ್ತೆ ಹೇಳಿಕೆ ಆಧರಿಸಿ ಮನೆಯಲ್ಲಿ ಸಂಪೂರ್ಣ ಮಹಜರು ಮಾಡಲಾಯ್ತು. ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ 6 ಅಧಿಕಾರಿಗಳ ತಂಡ ಮಹಜರು ನಡೆಸಿದರು.

ರೇವಣ್ಣರನ್ನ ಇಂದು ಹಾಸನ ಅಥವಾ ಕೆ.ಆರ್. ನಗರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ. ಮಹಿಳೆಯನ್ನು ಕರೆದುಕೊಂಡು ಹೋಗಿದ್ದ ಸ್ಥಳ, ಕೂಡಿಟ್ಟ ಸ್ಥಳ, ಮಹಿಳೆಯ ಕರೆತಂದ ಸತೀಶ್ ಬಾಬು-ರೇವಣ್ಣ ಭೇಟಿಯಾದ ಗೌಪ್ಯ ಸ್ಥಳದ ಬಗ್ಗೆಯೂ ತನಿಖೆ ನಡೆಯಲಿದೆ.

ಇದನ್ನೂ ಓದಿ: ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ಭಾರತಕ್ಕೆ: ಉನ್ನತ ಮೂಲಗಳಿಂದ ಮಾಹಿತಿ

ರೇವಣ್ಣ, ಪ್ರಜ್ವಲ್ ವಿರುದ್ಧ ದಾಖಲಾಗಿರುವ ಕೇಸ್​ಗಳಿಂದ ರೇವಣ್ಣ ಪತ್ನಿ ಭವಾನಿಗೂ ಸಂಕಷ್ಟ ಎದುರಾಗಿದೆ. ಲೈಂಗಿಕ ಕಿರುಕುಳ, ಕಿಡ್ನ್ಯಾಪ್ ಎರಡೂ ಕೇಸ್​ನಲ್ಲೂ ಭವಾನಿ ರೇವಣ್ಣ ಹೆಸರು ಉಲ್ಲೇಖವಾಗಿದೆ. ಭವಾನಿ ಕರೆದರು ಎಂದು ಹೇಳಿಯೇ ಕಿಡ್ನ್ಯಾಪ್ ಮಾಡಿರುವ ಆರೋಪವಿದೆ. ಭವಾನಿಗೆ ನೋಟಿಸ್ ನೀಡಿ ಎಸ್​ಐಟಿ ಮಾಹಿತಿ ಪಡೆದಿದೆ. ತನಿಖೆ ವೇಳೆ ಭವಾನಿ ವಿರುದ್ಧ ಸಾಕ್ಷಿ ಸಿಕ್ಕರೆ ಅವರಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ