ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಹೇಗಿರಲಿದೆ ತನಿಖೆ? ಎಸ್​ಐಟಿ ತನಿಖಾ ಹಂತಗಳ ಬಗ್ಗೆ ಇಲ್ಲಿದೆ ಮಾಹಿತಿ

ಪ್ರಜ್ವಲ್ ರೇವಣ್ಣ ಬಂಧನದ ಬೆನ್ನಲ್ಲೇ ಇನ್ನು ಎಸ್​ಐಟಿ ತನಿಖೆ ಚುರುಕುಗೊಳ್ಳಲಿದೆ. ಮೊದಲಿಗೆ ಪ್ರಜ್ವಲ್ ರೇವಣ್ಣರನ್ನು ಎಸ್​ಐಟಿ ಯಾವ ರೀತಿ ವಿಚಾರಣೆಗೆ ಒಳಪಡಿಸಲಿದೆ? ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದ ಮುಂದಿನ ತನಿಖಾ ಹಂತಗಳು ಯಾವುವು? ಮುಂದಿನ ತನಿಖೆ ಹೇಗೆ ಸಾಗಬಹುದು ಎಂಬ ವಿವರ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಹೇಗಿರಲಿದೆ ತನಿಖೆ? ಎಸ್​ಐಟಿ ತನಿಖಾ ಹಂತಗಳ ಬಗ್ಗೆ ಇಲ್ಲಿದೆ ಮಾಹಿತಿ
ಪ್ರಜ್ವಲ್ ಬಂಧಿಸಿ ಕರೆದೊಯ್ಯುತ್ತಿರುವ ಎಸ್​​ಐಟಿ ತಂಡ
Follow us
| Updated By: Digi Tech Desk

Updated on:May 31, 2024 | 9:15 AM

ಬೆಂಗಳೂರು, ಮೇ 31: ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೊನೆಗೂ ಎಸ್​ಐಟಿ (SIT) ವಶವಾಗಿದ್ದಾರೆ. ಇದರೊಂದಿಗೆ, ಪ್ರಕರಣದ ಎಸ್​ಐಟಿ ತನಿಖೆ ಇನ್ನು ಚುರುಕುಗೊಳ್ಳಲಿದೆ. ಜರ್ಮನಿಯ ಮ್ಯೂನಿಕ್​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಜ್ವಲರ್​​ರನ್ನು ಮಧ್ಯರಾತ್ರಿ ವಿಮಾನ ನಿಲ್ದಾಣದಿಂದಲೇ ನೇರವಾಗಿ ಎಸ್ಐಟಿ ಕಚೇರಿಗೆ ಕರೆತರಲಾಗಿದೆ. ಇನ್ನು ಮುಂದಿನ ಪ್ರಕ್ರಿಯೆಗಳು ಏನೇನು? ತನಿಖೆ ಹೇಗೆ ಸಾಗಲಿದೆ ಎಂಬ ಹಂತ ಹಂತದ ಮಾಹಿತಿ ಇಲ್ಲಿದೆ.

  • ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣಗಳ ಸಂಬಂಧ ಎಸ್​ಐಟಿ ವಿಚಾರಣೆ ಶುರು ಮಾಡಲಿದೆ.
  • ಬೆಳಗ್ಗೆ ಪ್ರಜ್ವಲ್​​ರನ್ನು ವೈದ್ಯಕೀಯ ತಪಾಸಣೆ ಮಾಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
  • ಪ್ರಕರಣಗಳ ತನಿಖೆಗೆ ಪ್ರಜ್ವಲ್​ರನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಎಸ್​ಐಟಿ ಮನವಿ ಮಾಡಲಿದೆ.
  • ನ್ಯಾಯಾಲಯ ಕಸ್ಟಡಿಗೆ ನೀಡಿದರೆ ಪ್ರಜ್ವಲ್​​ರನ್ನ ತೀವ್ರ ವಿಚಾರಣೆಗೆ ಒಳಪಡಿಸಲಿದೆ.
  • ಇಡೀ ಪ್ರಕರಣದ ಮುಖ್ಯ ಆರೋಪಿ ಪ್ರಜ್ವಲ್ ರೇವಣ್ಣ ಆಗಿದ್ದಾರೆ.
  • ಈಗಾಗಲೇ ಪ್ರಜ್ವಲ್ ರೇವಣ್ಣ ಬಳಿ ಇರೋ ವಸ್ತುಗಳನ್ನು ಎಸ್​​ಐಟಿ ವಶಕ್ಕೆ ಪಡೆದಿದೆ.
  • ಪ್ರಜ್ವಲ್ ಬಳಸ್ತಿದ್ದ ಮೊಬೈಲ್ ಸೇರಿ ಆತನ ಬಳಿ ಇದ್ದ ವಸ್ತುಗಳು ವಶಕ್ಕೆ ಪಡೆಯಲಾಗಿದೆ.
  • ಪ್ರಜ್ವಲ್ ರೇವಣ್ಣ ಮೊಬೈಲ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಎಸ್​​ಐಟಿ ಕಳುಹಿಸಲಿದೆ.
  • ವಿದೇಶಕ್ಕೆ ತೆರಳಿದ್ದರ ಬಗ್ಗೆಯೂ ಎಸ್​ಐಟಿ ವಿಚಾರಣೆ ನಡೆಸಲಿದೆ.
  • ದೇಶ ಬಿಟ್ಟ ದಿನದಿಂದ ವಾಪಸ್ ಬರುವವರೆಗೆ ಸಹಾಯ ಮಾಡಿದವರ ಬಗ್ಗೆ ಮಾಹಿತಿ ಕಲೆಹಾಕಲಿದೆ.
  • ಇಂದು ಕಸ್ಟಡಿಯಲ್ಲೇ ವಿಚಾರಣೆ ನಡೆಸಿ ಪ್ರಾಥಮಿಕ ಮಾಹಿತಿ ಕಲೆಹಾಕುವ ಸಾಧ್ಯತೆ ಇದೆ.
  • ಮುಂದಿನ ದಿನಗಳಲ್ಲಿ ಪ್ರಜ್ವಲ್ ತೋಟದ ಮನೆಗಳು, ಸಂಸದರ ನಿವಾಸ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಹಜರು ಸಾಧ್ಯತೆ ಇದೆ.

ಇದನ್ನೂ ಓದಿ: ಮ್ಯೂನಿಕ್​ನಿಂದ ಬೆಂಗಳೂರು ವರೆಗೆ ಪ್ರಜ್ವಲ್: ಈ ಅವಧಿಯಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

ಈಗಾಗಲೇ ಪ್ರಜ್ವಲ್ ಅನುಪಸ್ಥಿತಿಯಲ್ಲಿ ಒಂದಷ್ಟು ತನಿಖೆ ನಡೆಸಿರೋ ಎಸ್​​ಐಟಿ ಇದೀಗ ಪ್ರಜ್ವಲ್ ಬಳಿ ಮತ್ತಷ್ಟು ಮಾಹಿತಿ ಕಲೆ ಹಾಕಲಿದೆ. ಇದೀಗ ಪ್ರಜ್ವಲ್ ಬಂಧನದಿಂದ ಎಸ್​ಐಟಿ ತನಿಖೆಗೆ ಮತ್ತಷ್ಟು ವೇಗ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 am, Fri, 31 May 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!