ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಹೇಗಿರಲಿದೆ ತನಿಖೆ? ಎಸ್​ಐಟಿ ತನಿಖಾ ಹಂತಗಳ ಬಗ್ಗೆ ಇಲ್ಲಿದೆ ಮಾಹಿತಿ

ಪ್ರಜ್ವಲ್ ರೇವಣ್ಣ ಬಂಧನದ ಬೆನ್ನಲ್ಲೇ ಇನ್ನು ಎಸ್​ಐಟಿ ತನಿಖೆ ಚುರುಕುಗೊಳ್ಳಲಿದೆ. ಮೊದಲಿಗೆ ಪ್ರಜ್ವಲ್ ರೇವಣ್ಣರನ್ನು ಎಸ್​ಐಟಿ ಯಾವ ರೀತಿ ವಿಚಾರಣೆಗೆ ಒಳಪಡಿಸಲಿದೆ? ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದ ಮುಂದಿನ ತನಿಖಾ ಹಂತಗಳು ಯಾವುವು? ಮುಂದಿನ ತನಿಖೆ ಹೇಗೆ ಸಾಗಬಹುದು ಎಂಬ ವಿವರ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಹೇಗಿರಲಿದೆ ತನಿಖೆ? ಎಸ್​ಐಟಿ ತನಿಖಾ ಹಂತಗಳ ಬಗ್ಗೆ ಇಲ್ಲಿದೆ ಮಾಹಿತಿ
ಪ್ರಜ್ವಲ್ ಬಂಧಿಸಿ ಕರೆದೊಯ್ಯುತ್ತಿರುವ ಎಸ್​​ಐಟಿ ತಂಡ
Follow us
| Updated By: Digi Tech Desk

Updated on:May 31, 2024 | 9:15 AM

ಬೆಂಗಳೂರು, ಮೇ 31: ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೊನೆಗೂ ಎಸ್​ಐಟಿ (SIT) ವಶವಾಗಿದ್ದಾರೆ. ಇದರೊಂದಿಗೆ, ಪ್ರಕರಣದ ಎಸ್​ಐಟಿ ತನಿಖೆ ಇನ್ನು ಚುರುಕುಗೊಳ್ಳಲಿದೆ. ಜರ್ಮನಿಯ ಮ್ಯೂನಿಕ್​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಜ್ವಲರ್​​ರನ್ನು ಮಧ್ಯರಾತ್ರಿ ವಿಮಾನ ನಿಲ್ದಾಣದಿಂದಲೇ ನೇರವಾಗಿ ಎಸ್ಐಟಿ ಕಚೇರಿಗೆ ಕರೆತರಲಾಗಿದೆ. ಇನ್ನು ಮುಂದಿನ ಪ್ರಕ್ರಿಯೆಗಳು ಏನೇನು? ತನಿಖೆ ಹೇಗೆ ಸಾಗಲಿದೆ ಎಂಬ ಹಂತ ಹಂತದ ಮಾಹಿತಿ ಇಲ್ಲಿದೆ.

  • ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣಗಳ ಸಂಬಂಧ ಎಸ್​ಐಟಿ ವಿಚಾರಣೆ ಶುರು ಮಾಡಲಿದೆ.
  • ಬೆಳಗ್ಗೆ ಪ್ರಜ್ವಲ್​​ರನ್ನು ವೈದ್ಯಕೀಯ ತಪಾಸಣೆ ಮಾಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
  • ಪ್ರಕರಣಗಳ ತನಿಖೆಗೆ ಪ್ರಜ್ವಲ್​ರನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಎಸ್​ಐಟಿ ಮನವಿ ಮಾಡಲಿದೆ.
  • ನ್ಯಾಯಾಲಯ ಕಸ್ಟಡಿಗೆ ನೀಡಿದರೆ ಪ್ರಜ್ವಲ್​​ರನ್ನ ತೀವ್ರ ವಿಚಾರಣೆಗೆ ಒಳಪಡಿಸಲಿದೆ.
  • ಇಡೀ ಪ್ರಕರಣದ ಮುಖ್ಯ ಆರೋಪಿ ಪ್ರಜ್ವಲ್ ರೇವಣ್ಣ ಆಗಿದ್ದಾರೆ.
  • ಈಗಾಗಲೇ ಪ್ರಜ್ವಲ್ ರೇವಣ್ಣ ಬಳಿ ಇರೋ ವಸ್ತುಗಳನ್ನು ಎಸ್​​ಐಟಿ ವಶಕ್ಕೆ ಪಡೆದಿದೆ.
  • ಪ್ರಜ್ವಲ್ ಬಳಸ್ತಿದ್ದ ಮೊಬೈಲ್ ಸೇರಿ ಆತನ ಬಳಿ ಇದ್ದ ವಸ್ತುಗಳು ವಶಕ್ಕೆ ಪಡೆಯಲಾಗಿದೆ.
  • ಪ್ರಜ್ವಲ್ ರೇವಣ್ಣ ಮೊಬೈಲ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಎಸ್​​ಐಟಿ ಕಳುಹಿಸಲಿದೆ.
  • ವಿದೇಶಕ್ಕೆ ತೆರಳಿದ್ದರ ಬಗ್ಗೆಯೂ ಎಸ್​ಐಟಿ ವಿಚಾರಣೆ ನಡೆಸಲಿದೆ.
  • ದೇಶ ಬಿಟ್ಟ ದಿನದಿಂದ ವಾಪಸ್ ಬರುವವರೆಗೆ ಸಹಾಯ ಮಾಡಿದವರ ಬಗ್ಗೆ ಮಾಹಿತಿ ಕಲೆಹಾಕಲಿದೆ.
  • ಇಂದು ಕಸ್ಟಡಿಯಲ್ಲೇ ವಿಚಾರಣೆ ನಡೆಸಿ ಪ್ರಾಥಮಿಕ ಮಾಹಿತಿ ಕಲೆಹಾಕುವ ಸಾಧ್ಯತೆ ಇದೆ.
  • ಮುಂದಿನ ದಿನಗಳಲ್ಲಿ ಪ್ರಜ್ವಲ್ ತೋಟದ ಮನೆಗಳು, ಸಂಸದರ ನಿವಾಸ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಹಜರು ಸಾಧ್ಯತೆ ಇದೆ.

ಇದನ್ನೂ ಓದಿ: ಮ್ಯೂನಿಕ್​ನಿಂದ ಬೆಂಗಳೂರು ವರೆಗೆ ಪ್ರಜ್ವಲ್: ಈ ಅವಧಿಯಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

ಈಗಾಗಲೇ ಪ್ರಜ್ವಲ್ ಅನುಪಸ್ಥಿತಿಯಲ್ಲಿ ಒಂದಷ್ಟು ತನಿಖೆ ನಡೆಸಿರೋ ಎಸ್​​ಐಟಿ ಇದೀಗ ಪ್ರಜ್ವಲ್ ಬಳಿ ಮತ್ತಷ್ಟು ಮಾಹಿತಿ ಕಲೆ ಹಾಕಲಿದೆ. ಇದೀಗ ಪ್ರಜ್ವಲ್ ಬಂಧನದಿಂದ ಎಸ್​ಐಟಿ ತನಿಖೆಗೆ ಮತ್ತಷ್ಟು ವೇಗ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 am, Fri, 31 May 24

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ