AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಎಸ್​ಐಟಿ ತನಿಖೆಯ ಇತಿಮಿತಿಗಳೇನು? ನಿವೃತ್ತ ಪೊಲೀಸ್ ಅಧಿಕಾರಿ ನೀಡಿದ ಮಾಹಿತಿ ಇಲ್ಲಿದೆ

ಸಾಮಾನ್ಯವಾಗಿ ಪೊಲೀಸರು ನಡೆಸುವ ತನಿಖೆ ಪ್ರಕ್ರಿಯೆಗೂ ಎಸ್​​ಐಟಿ ತನಿಖೆಗೂ ಏನಾದರೂ ವ್ಯತ್ಯಾಸವಿದೆಯೇ? ಎಸ್​ಐಟಿ ತನಿಖೆಗೆ ಇರುವ ಇತಿ ಮಿತಿಗಳೇನು? ಇತ್ಯಾದಿ ಪ್ರಶ್ನೆಗಳಿಗೆ ಮತ್ತು ಸಂದೇಹಗಳಿಗೆ ಮೈಸೂರಿನಲ್ಲಿ ನಿವೃತ್ತ ಡಿವೈ ಎಸ್ಪಿ ಮೋಹನ್ ಉತ್ತರ ನೀಡಿದ್ದಾರೆ. ಆ ವಿವರ ಇಲ್ಲಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಎಸ್​ಐಟಿ ತನಿಖೆಯ ಇತಿಮಿತಿಗಳೇನು? ನಿವೃತ್ತ ಪೊಲೀಸ್ ಅಧಿಕಾರಿ ನೀಡಿದ ಮಾಹಿತಿ ಇಲ್ಲಿದೆ
ಪ್ರಜ್ವಲ್ ರೇವಣ್ಣ
Follow us
TV9 Web
| Updated By: Ganapathi Sharma

Updated on: May 02, 2024 | 8:00 AM

ಮೈಸೂರು, ಮೇ 2: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಇದೀಗ ರಾಜ್ಯ, ದೇಶದ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಈಗಾಗಲೇ ಎಸ್​ಐಟಿ (SIT) ರಚನೆ ಮಾಡಿದ್ದು, ಅದರ ಮೂರು ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿವೆ. ಎಸ್​ಐಟಿ ತನಿಖೆಗೂ (SIT Investigation) ಸಾಮಾನ್ಯವಾಗಿ ಪೊಲೀಸರು ನಡೆಸುವ ತನಿಖೆ ಪ್ರಕ್ರಿಯೆಗೂ ಏನು ವ್ಯತ್ಯಾಸ ಹಾಗೂ ಎಸ್​ಐಟಿ ತನಿಖೆಗೆ ಇರುವ ಇತಿ ಮಿತಿಗಳೇನು ಎಂಬುದನ್ನು ಮೈಸೂರಿನ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಪ್ರಜ್ವಲ್ ಪ್ರಕರಣ ಹಾಗೂ ಎಸ್​ಐಟಿ ತನಿಖೆ ಬಗ್ಗೆ ನಿವೃತ್ತ ಡಿವೈ ಎಸ್ಪಿ ಮೋಹನ್ ‘ಟಿವಿ9’ಗೆ ನೀಡಿರುವ ಮಾಹಿತಿ ಇಲ್ಲಿದೆ.

  1. ಎಸ್ಐಟಿ ವಿಶೇಷ ತನಿಖ ತಂಡವಾಗಿರುತ್ತದೆ. ಆದ್ರೆ ಠಾಣೆಯಲ್ಲಿ ಒಬ್ಬ ಪಿಎಸ್​​ಐ ಹೇಗೆ ತನಿಖೆ ನಡೆಸುತ್ತಾನೆಯೋ ಅದೇ ಮಾದರಿಯಲ್ಲಿ ತನಿಖೆ ನಡೆಸಬೇಕಾಗುತ್ತದೆ. ಅದನ್ನು ಹೊರತು ಪಡಿಸಿ ವಿಶೇಷವಾದ ಕಾನೂನಿನ ಅವಕಾಶ ಇರುವುದಿಲ್ಲ. ವಿಶೇಷ ಪ್ರಕರಣಗಳಲ್ಲಿ ಸರ್ಕಾರ ತನಿಖಾ ತಂಡ ರಚನೆ ಮಾಡಿ‌ ತನಿಖೆ ಮಾಡಿಸುತ್ತದೆ.
  2. ಆರೋಪಗಳಿಗೆ ನೋಟಿಸ್ ಕೊಡಲೇ ಬೇಕಾಗುತ್ತದೆ. ಈಗಾಗಲೇ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಈ ಕಾರಣದಿಂದ ನೋಟಿಸ್ ಕೊಟ್ಟು ತನಿಖೆಗೆ ಬರುವಂತೆ ಕೋರಲಾಗುತ್ತದೆ. ಆರೋಪಿಗಳಿಗೆ ಸಮಯಾವಕಾಶ ಕೊಡುವುದು ಇತ್ಯಾದಿ ವಿಚಾರಗಳ ಬಗ್ಗೆ ಆಯಾ ತನಿಖಾಧಿಕಾರಿಗಳಿಗೆ ಸ್ವಾತಂತ್ರವಿರುತ್ತದೆ. ತನಿಖಾಧಿಕಾರಿ ಸಮಯವನ್ನು ಕೊಡಬಹುದು ಅಥವಾ ನಿರಾಕರಿಸಬಹದು.‌ ಇದು ತನಿಖಾಧಿಕಾರಿಗೆ ಬಿಟ್ಟಿರುವ ವಿಚಾರ.
  3. ಸಂತ್ರಸ್ತರಿಗೆ ನೋಟಿಸ್ ಕೊಡಬಹುದು. ‌ಆದರೆ, ಅವರನ್ನು ಬಲವಂತ ಮಾಡುವಂತಿಲ್ಲ.‌ ಒಪ್ಪಿಗೆಯಿಂದ ಮಾಡಿದ್ದರೆ ಅದನ್ನು ಪ್ರಶ್ನೆ ಮಾಡುವಂತಿಲ್ಲ, ‌ಪ್ರಶ್ನೆ ಮಾಡುವ ಅಧಿಕಾರವು ಇರುವುದಿಲ್ಲ. ಸಂತ್ರಸ್ತೆಯರು ತನಿಖೆಗೆ ಸಹಕಾರ ಮಾಡುವುದು ಬಿಡುವುದು ಅವರಿಗೆ ಬಿಟ್ಟಿದ್ದು. ತನಿಖೆ ವಿಚಾರವಾಗಿ ಅವರನ್ನು ಬಲವಂತ ಮಾಡಲು ಆಗುವುದಿಲ್ಲ.
  4. ತಾಂತ್ರಿಕವಾಗಿಯು ತನಿಖೆ ನಡೆಸಬಹದು.‌ ಮೊದಲಿಗೆ ಈ ವೀಡಿಯೋ ಅಸಲಿಯೋ ನಕಲಿಯೋ ಅನ್ನುವುದನ್ನು ತಾಂತ್ರಿಕವಾಗಿ ಸಾಬೀತು ಮಾಡಬೇಕು. ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ತಾಂತ್ರಿಕವಾಗಿ ತನಿಖೆ ಮಾಡಬಹುದು.
  5. ಆರೋಪಿಗಳನ್ನು ಎಸ್ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸಬಹುದು. ಇದಕ್ಕೆ ಕಾನೂನಿನಲ್ಲಿ ಅವಕಾಶ ಇದೆ.
  6. ಸಂತ್ರಸ್ತೆಯರು ಕೊಡುವ ಹೇಳಿಕೆಗಳ ಆಧಾರದ ಮೇಲೆ ಆರೋಪ ಸಾಬೀತುಪಡಿಸಬಹುದು. ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಸಾಧ್ಯತೆ ಇರುತ್ತದೆ.‌ ಆದರೆ ಸಂತ್ರಸ್ತೆಯ ಹೇಳಿಕೆ ಹಾಗೂ ಸಾಕ್ಷಿಗಳ ಆಧಾರದ ಮೇಲೆ ಸಾಬೀತು ಮಾಡಬಹದು. ಸಂತ್ರಸ್ತೆ ಸರ್ಕಾರಿ ಅಧಿಕಾರಿಯಾಗಿದ್ದರೂ ಒಪ್ಪಿತ್ತವಾಗಿ ಮಾಡಿದ್ದರೆ ಯಾವುದೇ ಸಮಸ್ಯೆ ಇಲ್ಲ. ಅವರು ಆರೋಪ ಮಾಡಿದರೆ ಮಾತ್ರ ಪರಿಗಣಿಸಲಾಗುತ್ತದೆ. ಇಲ್ಲದಿದ್ದರೆ ಸರ್ಕಾರಿ ಅಧಿಕಾರಿಯಾದರೂ ಅವರನ್ನು ಬಲವಂತವಾಗಿ ತನಿಖೆ ಮಾಡಲು ಸಾಧ್ಯವಿಲ್ಲ.

ಇದನ್ನೂ ಓದಿ: ಅಶ್ಲೀಲ ವಿಡಿಯೋ: ಪ್ರಜ್ವಲ್ ರೇವಣ್ಣನ ನಡೆ, ಮನಸ್ಥಿತಿಗೆ ಲೈಂಗಿಕ-ಮಾನಸಿಕ ತಜ್ಞರೇ ಶಾಕ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್