AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಪ್ರಪ್ರಥಮ ಗ್ರೀನ್​ ಹೈಡ್ರೋಜನ್​ ಎಲೆಕ್ಟ್ರೋಲೈಜರ್​ ಗಿಗಾ ಫ್ಯಾಕ್ಟರಿ ಉದ್ಘಾಟಿಸಿದ ಪ್ರಲ್ಹಾದ್​​ ಜೋಶಿ

ಅಮೆರಿಕ ಮೂಲಕ ಓಮಿಯಮ್​ ಕಂಪನಿ ಸ್ಥಾಪಿಸಿರುವ ಗ್ರೀನ್​ ಹೈಡ್ರೋಜನ್ ಎಲೆಕ್ಟ್ರೋಲೈಜರ್​ ಗಿಗಾ ಫ್ಯಾಕ್ಟರಿಯನ್ನು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಇಂದು ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಭಾರತವು ವಿಶ್ವದ ಹಸಿರು ಇಂಧನ ಬೆಳವಣಿಗೆಯ ಎಂಜಿನ್ ಆಗುವ ಸಾಮರ್ಥವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಪ್ರಪ್ರಥಮ ಗ್ರೀನ್​ ಹೈಡ್ರೋಜನ್​ ಎಲೆಕ್ಟ್ರೋಲೈಜರ್​ ಗಿಗಾ ಫ್ಯಾಕ್ಟರಿ ಉದ್ಘಾಟಿಸಿದ ಪ್ರಲ್ಹಾದ್​​ ಜೋಶಿ
ಕರ್ನಾಟಕದಲ್ಲಿ ಪ್ರಪ್ರಥಮ ಗ್ರೀನ್​ ಹೈಡ್ರೋಜನ್​ ಎಲೆಕ್ಟ್ರೋಲೈಜರ್​ ಗಿಗಾ ಫ್ಯಾಕ್ಟರಿ ಉದ್ಘಾಟಿಸಿದ ಪ್ರಹ್ಲಾದ್ ಜೋಶಿ
ಗಂಗಾಧರ​ ಬ. ಸಾಬೋಜಿ
|

Updated on:Jul 19, 2024 | 5:26 PM

Share

ದೊಡ್ಡಬಳ್ಳಾಪುರ, ಜುಲೈ 19: ಭಾರತವು ವಿಶ್ವದ ಗ್ರೀನ್​ ಹೈಡ್ರೋಜನ್ ಉತ್ಪಾದನೆಯ ಎಂಜಿನ್​​ ಆಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಹೇಳಿದ್ದಾರೆ. ದೊಡ್ಡಬಲ್ಲಾಪುರದಲ್ಲಿ ಅಮೆರಿಕಾ ಮೂಲದ ಓಮಿಯಮ್​ ಕಂಪನಿಯು ಸ್ಥಾಪಿಸಿರುವ ದೇಶದ ಮೊಟ್ಟಮೊದಲ ಗ್ರೀನ್​ ಹೈಡ್ರೋಜನ್​ ಎಲೆಕ್ಟ್ರೋಲೈಜರ್​ ಗಿಗಾ ಫ್ಯಾಕ್ಟರಿಯ (Green Hydrogen Electrolyzer Giga Factory) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಅತ್ಯಾಧುನಿಕ ಸೌಲಭ್ಯವು ಕರ್ನಾಟಕ ಮತ್ತು ಭಾರತದಲ್ಲಿ ಹಸಿರು ಇಂಧನ ಕ್ರಾಂತಿಯನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಗ್ರೀನ್​ ಹೈಡ್ರೋಜನ್ ಉತ್ಪಾದಿಸುವ ಮೂಲಕ ಭಾರತದ ಇಂಧನ ಭದ್ರತೆಗೆ ಉತ್ತೇಜನವನ್ನು ನೀಡುತ್ತದೆ. ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು, ಸೌರ ಮತ್ತು ಗಾಳಿ ಶಕ್ತಿಯನ್ನು ಸಂಯೋಜಿಸುವುದಾಗಿದೆ. ಎಸ್​ಐಜಿಹೆಚ್​ಟಿ ಕಾರ್ಯಕ್ರಮದ ಅಡಿಯಲ್ಲಿ 10 ಕಂಪನಿಗಳಿಗೆ ವರ್ಷಕ್ಕೆ 4.12 ಲಕ್ಷ ಟನ್​​ ಸ್ಥಾಪನೆಗೆ ಟೆಂಡರ್​​​ ನೀಡಲಾಗಿದೆ.

ಇದನ್ನೂ ಓದಿ: ಮುಡಾ ಹಗರಣದಲ್ಲಿ ನೇರವಾಗಿ ಸಿಎಂ ಸಿದ್ದರಾಮಯ್ಯ ಭಾಗಿ: ಪ್ರಲ್ಹಾದ್ ಜೋಶಿ

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (ಎಂ.ಎನ್.ಆರ್.ಇ.) ಪ್ರಧಾನಿ ನರೇಂದ್ರ ಮೋದಿವರ ದೂರದೃಷ್ಟಿಯನ್ನು ಈಡೇರಿಸಲು ಅವಿರತವಾಗಿ ಕೆಲಸ ಮಾಡಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ, ನವೀಕರಿಸಬಹುದಾದ ಇಂಧನ (ಆರ್ಇ) ಸ್ಥಾಪಿತ ಸಾಮರ್ಥ್ಯವು 2014 ರಲ್ಲಿ 76 ಗಿಗಾವ್ಯಾಟ್​ನಿಂದ ಜೂನ್ 2024 ರವರೆಗೆ 195 ಗಿಗಾವ್ಯಾಟ್​ ಅಂದರೆ 2.5 ಪಟ್ಟು ಹೆಚ್ಚಾಗಿದೆ. ಸೌರ ವಿದ್ಯುತ್ ಸಾಮರ್ಥ್ಯವು 2014 ರಲ್ಲಿ 3 ಗಿಗಾವ್ಯಾಟ್​ನಿಂದ 30 ಪಟ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಪ್ರಲ್ಹಾದ್​ ಜೋಶಿ ಟ್ವೀಟ್​

ಗ್ರೀನ್​ ಹೈಡ್ರೋಜನ್ ಸಾಮರ್ಥ್ಯವು ಅಪರಿಮಿತವಾಗಿದೆ. ಸಾರಿಗೆ, ಉಕ್ಕು ಉತ್ಪಾದನೆ ಮತ್ತು ಭಾರೀ ಉದ್ಯಮದಂತಹ ವಲಯಗಳನ್ನು ಡಿಕಾರ್ಬೊನೈಸ್ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ವಾಹನಗಳಿಗೆ, ಕಾರ್ಖಾನೆಗಳಿಗೆ ಉಪಯುಕ್ತವಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ಏನೂ ಮಾಡಿಲ್ಲವೆಂದಾದರೆ ಡಿಸಿ ವರ್ಗಾವಣೆ ಏಕೆ, ಸಿದ್ದರಾಮಯ್ಯಗೆ ಜೋಶಿ ಪ್ರಶ್ನೆ

2030 ರವರೆಗೆ ಗ್ರೀನ್ ಹೈಡ್ರೋಜನ್ ಮತ್ತು ಅದರ ಉತ್ಪನ್ನಗಳ ಉತ್ಪಾದನಾ ಘಟಕಗಳಿಗೆ ಐಎಸ್​ಟಿಎಸ್ ಶುಲ್ಕವನ್ನು ಮನ್ನಾ ಮಾಡುವುದರಿಂದ ಉದ್ಯಮ ಕ್ಷೇತ್ರಕ್ಕೆ ಅನುಕೂಲವಾಲಿದೆ ಎಂದು ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಈ ವಲಯವನ್ನು ಉತ್ತೇಜಿಸಲು ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ. ನಾವು ಈ ವಲಯವನ್ನು ಬಲಪಡಿಸುತ್ತಿದ್ದೇವೆ, ಇದರಿಂದಾಗಿ ಭಾರತವು ತನ್ನ ದೇಶೀಯ ಬೇಡಿಕೆಯನ್ನು ಪೂರೈಸುವುದಲ್ಲದೆ, ಜಗತ್ತಿಗೆ ವಿಶ್ವಾಸಾರ್ಹ ಪೂರೈಕೆ ಪಾಲುದಾರನಾಗಿಯೂ ಹೊರಹೊಮ್ಮುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಹಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:24 pm, Fri, 19 July 24

Follow Us
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು