AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು: ಪ್ರಲ್ಹಾದ್ ಜೋಶಿ ಕಿಡಿ

ಅಯೋಧ್ಯೆಗೆ ತೆರಳುವ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯದಿಂದಲೇ ಇಂಥ ಘಟನೆಗಳು ರಾಜ್ಯದಲ್ಲಿ ಸಂಭವಿಸುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್ ಅಶೋಕ ಸಹ ಘಟನೆಯನ್ನು ಖಂಡಿಸಿದ್ದಾರೆ. ಗದಗ ಸೇರಿ ಹಲವೆಡೆ ಪ್ರತಿಭಟನೆಗಳೂ ನಡೆಯುತ್ತಿದೆ.

ಅಯೋಧ್ಯೆ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು: ಪ್ರಲ್ಹಾದ್ ಜೋಶಿ ಕಿಡಿ
ಪ್ರಲ್ಹಾದ್ ಜೋಶಿ
ಶಿವಕುಮಾರ್ ಪತ್ತಾರ್
| Edited By: |

Updated on: Feb 23, 2024 | 1:55 PM

Share

ಹುಬ್ಬಳ್ಳಿ, ಬೆಂಗಳೂರು, ಫೆಬ್ರವರಿ 23: ಅಯೋಧ್ಯೆಯ ರಾಮ ಮಂದಿರಕ್ಕೆ (Ayodhya Ram Mandir) ತೆರಳುತ್ತಿದ್ದ ರೈಲಿಗೆ (Train) ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ ಎಂದು ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ. ಗಲಾಟೆ ಮಾಡಿದವರನ್ನ ಒದ್ದು ಒಳಗಡೆ ಹಾಕಬೇಕು ಎಂದರು.

ಮತ ಬ್ಯಾಂಕ್​​​ಗೋಸ್ಕರ ಇಂತಹ ಘಟನೆಗಳಿಗೆ ಕಾಂಗ್ರೆಸ್ ಉತ್ತೇಜನ ನೀಡುತ್ತಿದೆ. ಅಯೋಧ್ಯಗೆ ಹೋಗಿ ಬಂದರೆ ತಪ್ಪೇನು? ಬೆದರಿಕೆ ಹಾಕಿದವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ ಎಂದು ಜೋಶಿ ಆಗ್ರಹಿಸಿದ್ದಾರೆ.

ಪಿಎಫ್‌ಐ ಕಾರ್ಯಕರ್ತರಿಂದ ಬೆದರಿಕೆ: ಅಶೋಕ

ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ಮಂತ್ರಿ ಆಗುವ ಕನಸು ಕಂಡಿದ್ದರು. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೂ ಮನ್ನವೇ ಗೋಧ್ರಾ ಹತ್ಯೆ ಬಗ್ಗೆ ಉಲ್ಲೇಖ ಮಾಡಿದ್ದರು. ಅಯೋಧ್ಯೆಗೆ ಹೋಗುವವರು ಹಿಂದೂಗಳು. ಅವರಿಗೆ ಮುಸ್ಲಿಂ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ಪಿಎಫ್‌ಐ ನವರು ಬೆದರಿಕೆ‌ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆರೋಪಿಸಿದ್ದಾರೆ.

ಕೋಲಾರದಲ್ಲಿ ತಲವಾರ್ ಹಾಕಿದವರು ಇಂತಹ ಪ್ರಕರಣ ಮಾಡುತ್ತಿದ್ದಾರೆ. ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಆಗಿಲ್ಲ. ಅದು ಬಿಟ್ಟು ಟ್ರೈನ್ ಕಳಿಸುವ ಮಾತನ್ನು ಪೊಲೀಸರು ಹೇಳಿದ್ದಾರೆ. ಬೆದರಿಸಿದವರ ವಿರುದ್ಧ ಕ್ರಮ ಆಗಬೇಕು ಎಂದು ಅಶೋಕ ಆಗ್ರಹಿಸಿದ್ದಾರೆ.

ಗದಗದಲ್ಲಿ ಶ್ರೀರಾಮ ಸೇನಾ ಕಾರ್ಯಕರ್ತರಿಂದ ಪ್ರತಿಭಟನೆ

ಹೊಸಪೇಟೆಯಲ್ಲಿ ಅಯೋಧ್ಯೆ ರೈಲು ತಡೆದು ಗಲಾಟೆ ಪ್ರಕರಣ ಖಂಡಿಸಿ ಶ್ರೀರಾಮ ಸೇನಾ ಕಾರ್ಯಕರ್ತರು ಗದಗ ನಗರದ ಟಾಂಗಾಕೂಟನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಗೋಧ್ರಾ ಹತ್ಯಾಕಾಂಡ ಮರಕಳಿಸುವಂತೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ ಕಾರ್ಯಕರ್ತರು, ಐದು ಜನ ಮುಸ್ಲಿಂ ಯುವಕರ ತಂಡದ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರು ಪ್ರಯಾಣಿಸುತ್ತಿದ್ದ ರೈಲಿಗೆ ಬೆದರಿಕೆ: ಬೆಂಕಿ ಹಚ್ಚುವುದಾಗಿ ಯುವಕರಿಂದ ಧಮ್ಕಿ

ಪ್ರಕಣವನ್ನು ಕೇಂದ್ರ ತನಿಖಾ ತಂಡದಿಂದ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ ಕಾರ್ಯಕರ್ತರು, ಮುಸ್ಲಿಂ ಗೂಂಡಾಗಳಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಸುಮಾರು 14,00 ಕ್ಕೂ ಹೆಚ್ಚು ಯಾತ್ರಿಕರು ಮೈಸೂರು- ಅಯೋಧ್ಯೆ ಧಾಮಾ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಿಡಿಗೇಡಿಗಳು ರೈಲಿಗೆ ಬೆಂಕಿ ಹಚ್ಚುವ ಬೆದರಿಕೆಯೊಡ್ಡಿದ್ದರು. ಪರಿಣಾಮವಾಗಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಾತ್ರಿಕರು ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ರೈಲು ಸುಮಾರು 2 ತಾಸು ವಿಳಂಬವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!