AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಶೇ 85 ರಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಡೆ ಆಘಾತ ತಂದಿದೆ: ಪ್ರಲ್ಹಾದ ಜೋಶಿ

ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನರಿಗೆ ನೀಡಿದ್ದ ವಚನದಂತೆ ‘ಗ್ಯಾರಂಟಿ’ ಯೋಜನೆಗಳೂ ಜನರಿಗೆ ಸಿಗುತ್ತಿಲ್ಲ. ಇತ್ತ ಜನರಿಗೆ ತಲುಪಬೇಕಿದ್ದ ಸರ್ಕಾರದ ಯೋಜನೆಗಳ ಪ್ರಯೋಜನಗಳೂ ಜನರಿಗೆ ತಲುಪುತ್ತಿಲ್ಲ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಶೇ 85 ರಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಡೆ ಆಘಾತ ತಂದಿದೆ: ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ
TV9 Web
| Edited By: |

Updated on:Nov 16, 2023 | 8:07 AM

Share

ಹುಬ್ಬಳ್ಳಿ, ನವೆಂಬರ್ 15: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಗೆ ದೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಶೇಕಡಾ 85 ರಷ್ಟು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಜೋಶಿ, ರಾಜ್ಯದ ಆರ್ಥಿಕತೆಯ ಬೆಳವಣಿಗೆಯನ್ನು ಕುಂಠಿತಗೊಳಿಸಿದ ನಂತರ ಕಾಂಗ್ರೆಸ್ ಸರ್ಕಾರವು ಈಗ ಕರ್ನಾಟಕದ ವಿದ್ಯಾರ್ಥಿಗಳಿಗೆ ಕರಾಳ ದಿನಗಳ ‘ಗ್ಯಾರಂಟಿ’ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಹರಿಹಾಯ್ದಿರುವ ಅವರು, ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನರಿಗೆ ನೀಡಿದ್ದ ವಚನದಂತೆ ‘ಗ್ಯಾರಂಟಿ’ ಯೋಜನೆಗಳೂ ಜನರಿಗೆ ಸಿಗುತ್ತಿಲ್ಲ. ಇತ್ತ ಜನರಿಗೆ ತಲುಪಬೇಕಿದ್ದ ಸರ್ಕಾರದ ಯೋಜನೆಗಳ ಪ್ರಯೋಜನಗಳೂ ಜನರಿಗೆ ತಲುಪುತ್ತಿಲ್ಲ ಎಂದು ಟೀಕಿಸಿದ್ದಾರೆ.

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನದ ಶೇಕಡಾ 85 ರಷ್ಟನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ ಎಂಬುದು ತಿಳಿದು ನನಗೆ ಆಘಾತವಾಗಿದೆ ಎಂದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, ರಾಜ್ಯ ಸರ್ಕಾರದ ನಡೆ ಬಗ್ಗೆ ಭಾರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Wed, 15 November 23

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ