AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ದಿವಾಳಿಯಾಗ್ತಿರುವುದರಿಂದ BPL ಕಾರ್ಡ್​ ಕಡಿತ: ಸರ್ಕಾರದ ವಿರುದ್ಧ ಜೋಶಿ ಕಿಡಿ

ಸರ್ಕಾರ ದಿವಾಳಿಯಾಗ್ತಿರುವುದರಿಂದ ಬಿಪಿಎಲ್​ ಕಾರ್ಡ್​ ಕಡಿತ ಮಾಡುತ್ತಿದೆ. ಪ್ಲ್ಯಾನಿಂಗ್​ ಇಲ್ಲದೇ ಗ್ಯಾರಂಟಿ ಘೋಷಿಸಿದ್ದೇ ಇಷ್ಟಕ್ಕೆಲ್ಲ ಕಾರಣ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯತ್ತ ಮುಖಮಾಡಿದೆ ಎಂದಿದ್ದಾರೆ.

ಸರ್ಕಾರ ದಿವಾಳಿಯಾಗ್ತಿರುವುದರಿಂದ BPL ಕಾರ್ಡ್​ ಕಡಿತ: ಸರ್ಕಾರದ ವಿರುದ್ಧ ಜೋಶಿ ಕಿಡಿ
ಸರ್ಕಾರ ದಿವಾಳಿಯಾಗ್ತಿರುವುದರಿಂದ BPL ಕಾರ್ಡ್​ ಕಡಿತ: ಸರ್ಕಾರದ ವಿರುದ್ಧ ಜೋಶಿ ಕಿಡಿ
ಶಿವಕುಮಾರ್ ಪತ್ತಾರ್
| Edited By: |

Updated on:Nov 21, 2024 | 11:27 AM

Share

ಹುಬ್ಬಳ್ಳಿ, ನವೆಂಬರ್​ 17: ಕರ್ನಾಟಕದಾದ್ಯಂತ 10 ಸಾವಿರ ಬಿಪಿಎಲ್ ಕಾರ್ಡ್‌ಗಳನ್ನ ಎಪಿಎಲ್​ (APL) ಕಾರ್ಡ್‌ಗಳಾಗಿ ಬದಲಾಯಿಸಿದೆ. ಈ 10 ಸಾವಿರ ಬಿಪಿಎಲ್ ಕಾರ್ಡ್‌ಗಳಿಗೆ ಸಿಗುತ್ತಿದ್ದ ಸವಲತ್ತನ್ನ ರದ್ದು ಮಾಡಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ಮೇಲೆ ಮುಗಿಬಿದ್ದಿದೆ. ಪ್ಲ್ಯಾನಿಂಗ್​ ಇಲ್ಲದೇ ಗ್ಯಾರಂಟಿ ಘೋಷಿಸಿದ್ದೇ ಇಷ್ಟಕ್ಕೆಲ್ಲ ಕಾರಣ ಎಂದು ಕೇಂದ್ರ ಸಚಿವ ಪಲ್ಹಾದ್ ಜೋಶಿ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸರ್ಕಾರ ಸಂಪೂರ್ಣ ದಿವಾಳಿಯತ್ತ ಮುಖಮಾಡಿದೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ದಿವಾಳಿಯಾಗುತ್ತಿರುವುದರಿಂದ ಬಿಪಿಎಲ್​ ಕಾರ್ಡ್​ ಕಡಿತ ಮಾಡಲಾಗುತ್ತಿದೆ. ದಿಢೀರ್ ಆಗಿ ಬಿಪಿಎಲ್​ ಕಾರ್ಡ್ ಏಕೆ ಕಡಿತ ಮಾಡುತ್ತಿದೆ ಗೊತ್ತಿಲ್ಲ. ಪ್ಲ್ಯಾನಿಂಗ್​ ಇಲ್ಲದೇ ಗ್ಯಾರಂಟಿ ಘೋಷಿಸಿದ್ದೇ ಇಷ್ಟಕ್ಕೆಲ್ಲ ಕಾರಣ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ 10 ಸಾವಿರ ಬಿಪಿಎಲ್ ಕಾರ್ಡ್​ಗಳು ರದ್ದು: ಸರ್ಕಾರಿ ಸೌಕರ್ಯಗಳಿಗೂ ಬ್ರೇಕ್​?

ಸಿಎಂ ಸಿದ್ದರಾಮಯ್ಯನವರು ನುಡಿದಂತೆ ನಡೆದಿದ್ದೇವೆ ಅಂತಾರೆ. ಆದರೆ ಒಂದೂ ಗ್ಯಾರಂಟಿ ಸಮರ್ಪಕವಾಗಿ ಜಾರಿಗೆ ತಂದಿಲ್ಲ. ಗ್ಯಾರಂಟಿ ಕೊಡಲು ಆಗದೇ ಬಿಡಲೂ ಆಗದ ಸ್ಥಿತಿ ಸರ್ಕಾರದ್ದು. ಬಹುತೇಕ ಎಲ್ಲ ಗ್ಯಾರಂಟಿಗಳು ಅರ್ಧಕ್ಕೆ ನಿಂತಿವೆ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯತ್ತ ಮುಖಮಾಡಿದೆ ಎಂದಿದ್ದಾರೆ.

ಬಡವರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕಿದೆ

ಸಚಿವ ಮುನಿಯಪ್ಪ ಅವರ ಜೊತೆ ನಾನು ಮಾತಾಡುತ್ತೇನೆ. 2013ರ ಕಾಯ್ದೆ ಪ್ರಕಾರ ನಿಯಮಗಳನ್ನು ಜಾರಿಗೆ ತಂದಿದ್ದೇವೆ. 5 ಕೆ.ಜಿ ಧಾನ್ಯವನ್ನು ಸಂಪೂರ್ಣ ಉಚಿತವಾಗಿ ಕೊಡುತ್ತಿದ್ದೇವೆ. ಕನಿಷ್ಠ ಬೆಂಬಲ ಬೆಲೆಯಡಿ ಗೋಧಿ, ಭತ್ತ ಇತ್ಯಾದಿಗಳನ್ನು ಖರೀದಿಸುತ್ತಿದ್ದೇವೆ. ಜೊತೆಗೆ ದರ ಕುಸಿತವಾಗುವ ಕೃಷಿ ಉತ್ಪನ್ನಗಳನ್ನು ಖರೀದಿಸುತ್ತಿದ್ದೇವೆ. ಇಷ್ಟೆಲ್ಲ ಕೇಂದ್ರ ಸರ್ಕಾರ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಕಾರ್ಡ್ ಯಾಕೆ ಕಡಿತ ಮಾಡುತ್ತಿದೆಯೋ ಗೊತ್ತಿಲ್ಲ. ಬಡವರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಸರ್ಕಾರ ಇನ್ನಾದ್ರೂ ಕ್ಷಮೆ ಕೇಳಬೇಕು

40% ಕಮಿಷನ್​​​ ಸುಳ್ಳು ಎಂಬ ಲೋಕಾಯುಕ್ತ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನು ಮಾಧ್ಯಮಗಳಲ್ಲಿ ಈ ವಿಚಾರವನ್ನು ಗಮನಿಸಿದ್ದೇನೆ. ಲೋಕಾಯುಕ್ತ ನ್ಯಾಯಮೂರ್ತಿಗಳು ವರದಿ ಕೊಟ್ಟಿದ್ದಾರೆ. ಹೀಗಾಗಿ ಸರ್ಕಾರ ಇನ್ನಾದ್ರೂ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಬಿಜೆಪಿ ನಾಯಕರಿಗೆ ಜೋಶಿ ಸಲಹೆ

ವಕ್ಫ್​ ಅನ್ನೋದು ಹಿಂದೂ ಸಮಾಜಕ್ಕೆ ದೊಡ್ಡ ಕಂಟಕ. ಏನೇ ಭಿನ್ನಾಭಿಪ್ರಾಯ ಇದ್ರೂ ಒಟ್ಟಾಗಿ ಹೋರಾಡಬೇಕು ಎಂದು ರಾಜ್ಯ ಬಿಜೆಪಿ ನಾಯಕರಿಗೆ ಸಲಹೆ ನೀಡಿದರು. ಚರ್ಚೆ ಮಾಡಿ ಹೋರಾಟ ರೂಪಿಸುವುದು ಅವಶ್ಯಕ. ನಾನು ಒಟ್ಟಾಗಿ ಹೋರಾಟ ಮಾಡಲು ಮನವಿ ಮಾಡುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:38 pm, Sun, 17 November 24

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​