AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಲಂಕೇಶ್ ಡ್ರಗ್ ಅಡಿಕ್ಟ್​ ಹೌದೋ, ಅಲ್ಲವೋ ಹೇಳಲಿ: ಮುತಾಲಿಕ್

ಕೊಲೆ ಮಾಡಿದವರೇ ನನ್ನ ಅಕ್ಕನ ಬಗ್ಗೆ ಮಾತನಾಡುತ್ತಾರೆ. ಇದರಿಂದ ನಮಗೂ ಬೇಜಾರಾಗುವುದಿಲ್ಲವೇ? ಎಂದು ಇಂದ್ರಜಿತ್ ಲಂಕೇಶ್ ತಮ್ಮ ನೋವು ತೋಡಿಕೊಂಡಿದ್ರು. ಈಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದ್ರಜಿತ್ ಲಂಕೇಶ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ನಿನ್ನೆಯ ಹೇಳಿಕೆಗೆ ಇಂದು ಮರುಜೀವ.. ಸ್ಯಾಂಡಲ್ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಎಬ್ಬಿಸಿರುವ ಸುಂಟರಗಾಳಿಗೆ ಸಂಬಂಧಪಟ್ಟಂತೆ ಪ್ರಮೋದ್ ಮುತಾಲಿಕ್ ಅವರು, ಇಂದ್ರಜಿತ್ ಲಂಕೇಶ್ ಅಕ್ಕ ಗೌರಿ ಲಂಕೇಶ್ ಕೂಡ ಡ್ರಗ್ ವ್ಯಸನಿ ಆಗಿದ್ದರೆಂದು ಹೇಳಿಕೆ […]

ಗೌರಿ ಲಂಕೇಶ್ ಡ್ರಗ್ ಅಡಿಕ್ಟ್​ ಹೌದೋ, ಅಲ್ಲವೋ ಹೇಳಲಿ: ಮುತಾಲಿಕ್
ಸಾಧು ಶ್ರೀನಾಥ್​
|

Updated on: Sep 03, 2020 | 2:08 PM

Share

ಕೊಲೆ ಮಾಡಿದವರೇ ನನ್ನ ಅಕ್ಕನ ಬಗ್ಗೆ ಮಾತನಾಡುತ್ತಾರೆ. ಇದರಿಂದ ನಮಗೂ ಬೇಜಾರಾಗುವುದಿಲ್ಲವೇ? ಎಂದು ಇಂದ್ರಜಿತ್ ಲಂಕೇಶ್ ತಮ್ಮ ನೋವು ತೋಡಿಕೊಂಡಿದ್ರು. ಈಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದ್ರಜಿತ್ ಲಂಕೇಶ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆಯ ಹೇಳಿಕೆಗೆ ಇಂದು ಮರುಜೀವ.. ಸ್ಯಾಂಡಲ್ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಎಬ್ಬಿಸಿರುವ ಸುಂಟರಗಾಳಿಗೆ ಸಂಬಂಧಪಟ್ಟಂತೆ ಪ್ರಮೋದ್ ಮುತಾಲಿಕ್ ಅವರು, ಇಂದ್ರಜಿತ್ ಲಂಕೇಶ್ ಅಕ್ಕ ಗೌರಿ ಲಂಕೇಶ್ ಕೂಡ ಡ್ರಗ್ ವ್ಯಸನಿ ಆಗಿದ್ದರೆಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಸಂಬಂಧಪಟ್ಟಂತೆ ಇಂದು ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದರು. ಆದರೆ ಈಗ ಇಂದ್ರಜಿತ್ ಲಂಕೇಶ್ ಅವರ ಪ್ರತಿಕ್ರಿಯೆಗೆ ಕೆಂಡಾಮಂಡಲವಾಗಿರುವ ಪ್ರಮೋದ್ ಮುತಾಲಿಕ್ ಅವರು, ಇಂದ್ರಜಿತ್ ಲಂಕೇಶ್ ಮೇಲೆ ಹರಿಹಾಯ್ದಿದ್ದಾರೆ.

ಮೊದಲು ಗೌರಿ ಲಂಕೇಶ್ ಡ್ರಗ್ ಅಡಿಕ್ಟ್​ ಹೌದೋ ಇಲ್ಲವೋ ಹೇಳಿ. ಅವರು ಎಲ್ಲಿ ಡ್ರಗ್ ಸೇವನೆ ಮಾಡುತ್ತಿದ್ದದ್ದು ಎಂಬುದನ್ನ ನಾನು ತೋರಿಸ್ತೀನಿ. ನಾಲ್ಕು ನಟಿಯರು ಮಾಡಿದ್ದಕ್ಕೆ ಆರೋಪ‌ ಮಾಡ್ತೀರಾ, ಜನರು ನಿಮಗೆ ಥೂ.. ಛೀ.. ಎನ್ನುತ್ತಿದ್ದಾರೆ ಎಂದು ಇಂದ್ರಜಿತ್ ಲಂಕೇಶ್​ಗೆ ಮುತಾಲಿಕ್ ಟಾಂಗ್ ಕೊಟ್ಟಿದ್ದಾರೆ.

ಗೌರಿ ಹತ್ಯೆಯಲ್ಲಿ ಶ್ರೀರಾಮ ಸೇನೆಯ ಪಾತ್ರವಿಲ್ಲ.. ಗೌರಿ ಲಂಕೇಶ್ ಹತ್ಯೆಯಲ್ಲಿ ಶ್ರೀರಾಮ ಸೇನೆಯ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಇಲ್ಲ. ನನ್ನ ಮೇಲೆ‌ ವಿನಾಕಾರಣ ಆರೋಪ ಮಾಡಬೇಡಿ. ಹೀಗಾಗಿ ನಿಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಮುತಾಲಿಕ್​ ಗುಡುಗಿದ್ದಾರೆ.

ಹ್ಯಾರೀಸ್ ಕ್ಷೇತ್ರದಲ್ಲಿರುವ ಕಾಲೇಜುಗಳಲ್ಲಿ ಡ್ರಗ್ ದಂಧೆ ಹೆಚ್ಚಾಗಿದೆ.. ಬೆಂಗಳೂರಿನ ಬಿಷಪ್, ಬಾಲ್ಡ್ ವಿನ್ ಗರ್ಲ್ಸ್ ಹೈಸ್ಕೂಲ್‌ ಸೇರಿ ಏಳು‌ ಕಾಲೇಜಿನಲ್ಲಿ ಡ್ರಗ್ಸ್​ ಸಿಗ್ತಿದೆ. ಹ್ಯಾರೀಸ್ ಕ್ಷೇತ್ರದಲ್ಲಿರುವ ಕಾಲೇಜುಗಳಲ್ಲಿ ಡ್ರಗ್ ದಂಧೆ ಹೆಚ್ಚಾಗಿದೆ. ದಾವಣಗೆರೆಯಲ್ಲಿಯೂ ಸಹ ಡ್ರಗ್ಸ್ ಜಾಲ ಇದೆ. ಜೊತೆಗೆ ಗೋವಾದಲ್ಲಿ ಡ್ರಗ್ ವಿರುದ್ಧ ಹೋರಾಟ ಮಾಡಿದ್ದಕ್ಕೆ ಅಲ್ಲಿ ಡ್ರಗ್ ಬ್ಯಾನ್ ಆಯಿತು. ಕಳೆದ ಆರು ವರ್ಷದಿಂದ ಗೋವಾಕ್ಕೆ‌ ಡ್ರಗ್ಸ್​ ಕಾಲಿಡಲು ಅನುಮತಿ ನೀಡಿಲ್ಲ. ಹೀಗಾಗಿ ಡ್ರಗ್ಸ್​ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?