AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಲಂಕೇಶ್ ಡ್ರಗ್ ಅಡಿಕ್ಟ್​ ಹೌದೋ, ಅಲ್ಲವೋ ಹೇಳಲಿ: ಮುತಾಲಿಕ್

ಕೊಲೆ ಮಾಡಿದವರೇ ನನ್ನ ಅಕ್ಕನ ಬಗ್ಗೆ ಮಾತನಾಡುತ್ತಾರೆ. ಇದರಿಂದ ನಮಗೂ ಬೇಜಾರಾಗುವುದಿಲ್ಲವೇ? ಎಂದು ಇಂದ್ರಜಿತ್ ಲಂಕೇಶ್ ತಮ್ಮ ನೋವು ತೋಡಿಕೊಂಡಿದ್ರು. ಈಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದ್ರಜಿತ್ ಲಂಕೇಶ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ನಿನ್ನೆಯ ಹೇಳಿಕೆಗೆ ಇಂದು ಮರುಜೀವ.. ಸ್ಯಾಂಡಲ್ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಎಬ್ಬಿಸಿರುವ ಸುಂಟರಗಾಳಿಗೆ ಸಂಬಂಧಪಟ್ಟಂತೆ ಪ್ರಮೋದ್ ಮುತಾಲಿಕ್ ಅವರು, ಇಂದ್ರಜಿತ್ ಲಂಕೇಶ್ ಅಕ್ಕ ಗೌರಿ ಲಂಕೇಶ್ ಕೂಡ ಡ್ರಗ್ ವ್ಯಸನಿ ಆಗಿದ್ದರೆಂದು ಹೇಳಿಕೆ […]

ಗೌರಿ ಲಂಕೇಶ್ ಡ್ರಗ್ ಅಡಿಕ್ಟ್​ ಹೌದೋ, ಅಲ್ಲವೋ ಹೇಳಲಿ: ಮುತಾಲಿಕ್
ಸಾಧು ಶ್ರೀನಾಥ್​
|

Updated on: Sep 03, 2020 | 2:08 PM

Share

ಕೊಲೆ ಮಾಡಿದವರೇ ನನ್ನ ಅಕ್ಕನ ಬಗ್ಗೆ ಮಾತನಾಡುತ್ತಾರೆ. ಇದರಿಂದ ನಮಗೂ ಬೇಜಾರಾಗುವುದಿಲ್ಲವೇ? ಎಂದು ಇಂದ್ರಜಿತ್ ಲಂಕೇಶ್ ತಮ್ಮ ನೋವು ತೋಡಿಕೊಂಡಿದ್ರು. ಈಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದ್ರಜಿತ್ ಲಂಕೇಶ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆಯ ಹೇಳಿಕೆಗೆ ಇಂದು ಮರುಜೀವ.. ಸ್ಯಾಂಡಲ್ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಎಬ್ಬಿಸಿರುವ ಸುಂಟರಗಾಳಿಗೆ ಸಂಬಂಧಪಟ್ಟಂತೆ ಪ್ರಮೋದ್ ಮುತಾಲಿಕ್ ಅವರು, ಇಂದ್ರಜಿತ್ ಲಂಕೇಶ್ ಅಕ್ಕ ಗೌರಿ ಲಂಕೇಶ್ ಕೂಡ ಡ್ರಗ್ ವ್ಯಸನಿ ಆಗಿದ್ದರೆಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಸಂಬಂಧಪಟ್ಟಂತೆ ಇಂದು ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದರು. ಆದರೆ ಈಗ ಇಂದ್ರಜಿತ್ ಲಂಕೇಶ್ ಅವರ ಪ್ರತಿಕ್ರಿಯೆಗೆ ಕೆಂಡಾಮಂಡಲವಾಗಿರುವ ಪ್ರಮೋದ್ ಮುತಾಲಿಕ್ ಅವರು, ಇಂದ್ರಜಿತ್ ಲಂಕೇಶ್ ಮೇಲೆ ಹರಿಹಾಯ್ದಿದ್ದಾರೆ.

ಮೊದಲು ಗೌರಿ ಲಂಕೇಶ್ ಡ್ರಗ್ ಅಡಿಕ್ಟ್​ ಹೌದೋ ಇಲ್ಲವೋ ಹೇಳಿ. ಅವರು ಎಲ್ಲಿ ಡ್ರಗ್ ಸೇವನೆ ಮಾಡುತ್ತಿದ್ದದ್ದು ಎಂಬುದನ್ನ ನಾನು ತೋರಿಸ್ತೀನಿ. ನಾಲ್ಕು ನಟಿಯರು ಮಾಡಿದ್ದಕ್ಕೆ ಆರೋಪ‌ ಮಾಡ್ತೀರಾ, ಜನರು ನಿಮಗೆ ಥೂ.. ಛೀ.. ಎನ್ನುತ್ತಿದ್ದಾರೆ ಎಂದು ಇಂದ್ರಜಿತ್ ಲಂಕೇಶ್​ಗೆ ಮುತಾಲಿಕ್ ಟಾಂಗ್ ಕೊಟ್ಟಿದ್ದಾರೆ.

ಗೌರಿ ಹತ್ಯೆಯಲ್ಲಿ ಶ್ರೀರಾಮ ಸೇನೆಯ ಪಾತ್ರವಿಲ್ಲ.. ಗೌರಿ ಲಂಕೇಶ್ ಹತ್ಯೆಯಲ್ಲಿ ಶ್ರೀರಾಮ ಸೇನೆಯ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಇಲ್ಲ. ನನ್ನ ಮೇಲೆ‌ ವಿನಾಕಾರಣ ಆರೋಪ ಮಾಡಬೇಡಿ. ಹೀಗಾಗಿ ನಿಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಮುತಾಲಿಕ್​ ಗುಡುಗಿದ್ದಾರೆ.

ಹ್ಯಾರೀಸ್ ಕ್ಷೇತ್ರದಲ್ಲಿರುವ ಕಾಲೇಜುಗಳಲ್ಲಿ ಡ್ರಗ್ ದಂಧೆ ಹೆಚ್ಚಾಗಿದೆ.. ಬೆಂಗಳೂರಿನ ಬಿಷಪ್, ಬಾಲ್ಡ್ ವಿನ್ ಗರ್ಲ್ಸ್ ಹೈಸ್ಕೂಲ್‌ ಸೇರಿ ಏಳು‌ ಕಾಲೇಜಿನಲ್ಲಿ ಡ್ರಗ್ಸ್​ ಸಿಗ್ತಿದೆ. ಹ್ಯಾರೀಸ್ ಕ್ಷೇತ್ರದಲ್ಲಿರುವ ಕಾಲೇಜುಗಳಲ್ಲಿ ಡ್ರಗ್ ದಂಧೆ ಹೆಚ್ಚಾಗಿದೆ. ದಾವಣಗೆರೆಯಲ್ಲಿಯೂ ಸಹ ಡ್ರಗ್ಸ್ ಜಾಲ ಇದೆ. ಜೊತೆಗೆ ಗೋವಾದಲ್ಲಿ ಡ್ರಗ್ ವಿರುದ್ಧ ಹೋರಾಟ ಮಾಡಿದ್ದಕ್ಕೆ ಅಲ್ಲಿ ಡ್ರಗ್ ಬ್ಯಾನ್ ಆಯಿತು. ಕಳೆದ ಆರು ವರ್ಷದಿಂದ ಗೋವಾಕ್ಕೆ‌ ಡ್ರಗ್ಸ್​ ಕಾಲಿಡಲು ಅನುಮತಿ ನೀಡಿಲ್ಲ. ಹೀಗಾಗಿ ಡ್ರಗ್ಸ್​ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?