AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day: ಪ್ರೇಮಿಗಳ ದಿನ ಎನ್ನುವುದು ವಿಕೃತಿ, ಅದಕ್ಕೆ ಬ್ರೇಕ್​ ಹಾಕಲು ಪ್ರಮೋದ್ ಮುತಾಲಿಕ್ ಆಗ್ರಹ

Valentine‘s Day celebration: ನಮ್ಮ ಸಂಪ್ರದಾಯವನ್ನು ಹಾಳು ಮಾಡಲು ವಿದೇಶಿ ಶಕ್ತಿಯ ಕೈವಾಡವಿದೆ. ನಾನಾ ‘ಡೇ'ಗಳ ಮೂಲಕ ಯುವಶಕ್ತಿ ನಾಶ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಆದರೆ ದೇಶದಲ್ಲಿ ಶೇ.40 ರಷ್ಟು ಯುವಶಕ್ತಿ ಇದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.

Valentine's Day: ಪ್ರೇಮಿಗಳ ದಿನ ಎನ್ನುವುದು ವಿಕೃತಿ, ಅದಕ್ಕೆ ಬ್ರೇಕ್​ ಹಾಕಲು ಪ್ರಮೋದ್ ಮುತಾಲಿಕ್ ಆಗ್ರಹ
ಪ್ರಮೋದ್ ಮುತಾಲಿಕ್
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on:Feb 12, 2021 | 12:22 PM

Share

ಧಾರವಾಡ: ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯನ್ನು ಸರ್ಕಾರ ನಿರ್ಬಂಧಿಸಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಪ್ರೇಮಿಗಳ ದಿನ ಎನ್ನುವುದು ವಿಕೃತಿ, ಇದರ ಹಿಂದೆ ಷಡ್ಯಂತ್ರವಿದೆ. ನಮ್ಮ ದೇಶದಲ್ಲಿರುವ ಯುವ ಶಕ್ತಿಯ ನಿಷ್ಕ್ರಿಯೆಗೆ ಕುತಂತ್ರ ನಡೆಯುತ್ತಿದೆ. ಆ ಮೂಲಕ ದೇಶವನ್ನು ದುರ್ಬಲ ಮಾಡುವ ಯತ್ನವೂ ನಡೆಯುತ್ತಿದೆ. ಹೀಗಾಗಿ 14ರ ಪ್ರೇಮಿಗಳ ದಿನಾಚರಣೆಯನ್ನು ನಿರ್ಬಂಧಿಸಬೇಕೆಂದು ಸರ್ಕಾರಕ್ಕೆ ವಿಡಿಯೋ ಮೂಲಕ ಆಗ್ರಹಿಸಿದ್ದಾರೆ.

ಪ್ರೇಮಿಗಳ ದಿನಾಚರಣೆ ಹಿಂದೆ ಸೆಕ್ಸ್, ಡ್ರಗ್ಸ್ ಮಾಫಿಯಾವೂ ಇದೆ: ಪ್ರೇಮಿಗಳ ದಿನಾಚರಣೆಯನ್ನು ನಿರ್ಬಂಧಿಸಬೇಕೆಂದು ಪ್ರತಿ ವರ್ಷದಂತೆ ಆಗ್ರಹಿಸಿರುವ ಪ್ರಮೋದ್ ಮುತಾಲಿಕ್ ಈ ಬಾರಿಯು ಸರ್ಕಾರ ವ್ಯಾಲೆಂಟೈನಸ್​ ಡೇ ನಿರ್ಬಂಧಿಸಬೇಕೆಂದು ಹೇಳಿದ್ದಾರೆ. ಇದರ ಹಿಂದೆ ಸೆಕ್ಸ್, ಡ್ರಗ್ಸ್ ಮಾಫಿಯಾವೂ ಇದೆ. ನಮ್ಮ ಸಂಪ್ರದಾಯವನ್ನು ಹಾಳು ಮಾಡಲು ವಿದೇಶಿ ಶಕ್ತಿಯ ಕೈವಾಡವಿದೆ. ನಾನಾ ‘ಡೇ’ಗಳ ಮೂಲಕ ಯುವಶಕ್ತಿ ನಾಶ ಮಾಡುವ ಷಡ್ಯಂತ್ರ ನಡೆಯುತ್ತಿದೆ.

ಆದರೆ ದೇಶದಲ್ಲಿ ಶೇ.40 ರಷ್ಟು ಯುವಶಕ್ತಿ ಇದೆ. ಅದು ನಮ್ಮ ದೇಶದ ತಾಕತ್ತು. ಹೀಗಿದ್ದೂ ನಮ್ಮ ಸಂಪ್ರದಾಯವನ್ನು ಹಾಳು ಮಾಡುವ ಸಂಚು ನಡೆಯುತ್ತಿದೆ ಎಂದರು. ಜೊತೆಗೆ ಈ ವೇಳೆ ಮಾತನಾಡಿದ ಪ್ರಮೋದ್ ಮುತಾಲಿಕ್ ಎಲ್ಲರೂ ತಂದೆ ಮತ್ತು ತಾಯಿಯನ್ನು ಪೂಜೆ ಮಾಡೋಣ ಎಂದು ವಿಡಿಯೋದಲ್ಲಿ ಸಲಹೆಯನ್ನು ನೀಡಿದರು.

ಇದನ್ನೂ ಓದಿ: Hug Day: ಪರಿಶುದ್ಧ ಪ್ರೇಮದಲ್ಲಿ ನವಿರಾದ ಅಪ್ಪುಗೆಗೂ ಇದೆ ವಿಶೇಷ ಸ್ಥಾನ!

Published On - 12:20 pm, Fri, 12 February 21

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು